AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಟಲ್ ಪ್ರೋಮೋದಿಂದಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದ ಕನ್ನಡದ ‘ಕೆ ಪಾಪ್’ ಸಿನಿಮಾ

‘ಕೆ ಪಾಪ್’ ಸಿನಿಮಾದಲ್ಲಿ ಸಂಜಯ್, ಗರುಡ ರಾಮ್, ವಿಷ್ಣು ಮುಂತಾದ ಕಲಾವಿದರು ಅಭಿನಯಿಸುತ್ತಿದ್​ದಾರೆ. ಒಂದು ಭಿನ್ನವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈಗ ಟೈಟಲ್ ಪ್ರೋಮೋ ರಿಲೀಸ್ ಮಾಡಲಾಗಿದೆ. ಪ್ರೋಮೋದಲ್ಲಿ ಏಲಿಯನ್, ಯಮ, ಶನಿ ಮುಂತಾದ ಪಾತ್ರಗಳು ಕಾಣಿಸಿಕೊಂಡು ಕೌತುಕ ಮೂಡಿಸಿವೆ.

ಟೈಟಲ್ ಪ್ರೋಮೋದಿಂದಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದ ಕನ್ನಡದ ‘ಕೆ ಪಾಪ್’ ಸಿನಿಮಾ
K Pop Kannada Movie Poster
ಮದನ್​ ಕುಮಾರ್​
|

Updated on: Dec 30, 2025 | 5:07 PM

Share

ಹೊಸ ಚಿತ್ರತಂಡಗಳು ಬಣ್ಣದ ಲೋಕಕ್ಕೆ ಬಂದರೆ ಹೊಸತನ ಹೊತ್ತು ತರುತ್ತವೆ. ಅದಕ್ಕೆ ಲೇಟೆಸ್ಟ್ ಉದಾಹಣೆ ಎಂದರೆ ‘ಕೆ ಪಾಪ್’ ಸಿನಿಮಾ. ಕೊರಿಯನ್ (Korean) ಪಾಪ್ ಸಂಸ್ಕೃತಿಯನ್ನು ಬಿಂಬಿಸುವ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾ ಒಂದು ಹೊಸ ಅಲೆ ಸೃಷ್ಟಿ ಮಾಡಲಿದೆ ಎಂಬ ಭರವಸೆ ಮೂಡಿದೆ. ಕೇವಲ ಟೈಟಲ್ ಪ್ರೋಮೋ ಮೂಲಕ ಎಲ್ಲರ ಗಮನ ಸೆಳೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಗರುಡ ರಾಮ್ (Garuda Ram) ಅವರು ಯಮ ಧರ್ಮರಾಯನ ಪಾತ್ರ ಮಾಡಲಿದ್ದಾರೆ. ಟೈಟಲ್ ಪ್ರೋಮೋ ನೋಡಿದ ಎಲ್ಲರಿಗೂ ‘ಕೆ ಪಾಪ್’ (K Pop) ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

‘ಕೆ ಪಾಪ್’ ಸಿನಿಮಾಗೆ ಕೆವಿನ್ ಲೂಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಫ್ಯಾಂಟಸಿ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಲಿದ್ದಾರೆ. ಭಾರತ ಹಾಗೂ ಜಗತ್ತಿನ ವಿವಿಧ ದೇಶಗಳಲ್ಲಿ ಕೊರಿಯನ್‌ ಪಾಪ್ ಸಂಸ್ಕೃತಿ ಹೇಗೆ ಪ್ರಭಾವ ಬೀರಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ ನಿರ್ದೇಶಕರು. ಶೀರ್ಷಿಕೆಯನ್ನು ತಿಳಿಸುವ ಸಲುವಾಗಿ ಪ್ರೋಮೋ ಬಿಡುಗಡೆ ಮಾಡಲಾಗಿದೆ.

‘ಕೆ ಪಾಪ್’ ಟೈಟಲ್ ಪ್ರೋಮೋ:

ಪ್ರೋಮೋ‌ ಬಿಡುಗಡೆ ನಂತರ ಚಿತ್ರತಂಡದವರು ಮಾಹಿತಿ ಹಂಚಿಕೊಂಡರು. ನಿರ್ದೇಶಕ ಕೆವಿನ್ ಲೂಕ್ ಅವರಿಗೆ ಈ ಸಿನಿಮಾದ ಬರವಣಿಗೆಯಲ್ಲಿ ಲಾವಣ್ಯ ಅವರು ಸಾಥ್ ನೀಡಿದ್ದಾರೆ. ಪ್ರೋಮೋದಲ್ಲಿ ಶನಿ‌ಮಹಾತ್ಮ ಹಾಗೂ ಯಮ‌ರಾಜನ ಪಾತ್ರಗಳು ಕಾಣಿಸಿಕೊಂಡಿವೆ. ಆದ್ದರಿಂದ ಕೌತುಕ ಮೂಡಿದೆ. ಸಂಜಯ್, ಗರುಡ ರಾಮ್, ವಿಷ್ಣು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

K Pop Kannada Movie Team

K Pop Kannada Movie Team

ಇದು ಕನಸಿನಲ್ಲಿ ನಡೆಯುವ ಕಹಾನಿ. ಕಥೆಯಲ್ಲಿ 60 ದಿನದ ಗಡುವು ಇದೆ. ಅದು ಯಾಕೆ ಎನ್ನುವುದೇ ಕುತೂಹಲ. ಈ ಪ್ರೋಮೋಗಾಗಿ ಆರು ತಿಂಗಳು ಕೆಲಸ ಮಾಡಿದ್ದೇವೆ. 7 ವಿಎಫ್ ತಂಡಗಳು ಕೆಲಸ ಮಾಡಿವೆ. 60ರಿಂದ 65 ದಿನಗಳ ಕಾಲ ಶೂಟಿಂಗ್ ಮಾಡಲಾಗುವುದು ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ. ಈ ಸಿನಿಮಾಗೆ ಶಶಿಧರ್ ಅವರ ಸಂಕಲನ, ರಾಜ್ ಕಾಂತ್ ಅವರ ಛಾಯಾಗ್ರಹಣ ಇರಲಿದೆ.

ಇದನ್ನೂ ಓದಿ: ಕೊರಿಯನ್ ಸ್ಟಾರ್ ಜೊತೆ ದಿಶಾ ಪಟಾನಿ ಡೇಟಿಂಗ್

ಅಲಗಾನಿ ಕಿರಣ್ ಕುಮಾರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಮೊದಲಿನಿಂದಲೂ ಹೀರೋ ಆಗಬೇಕು ಎನ್ನುವ ಅಸೆ ಇತ್ತು. ಆದರೆ ಆದು ಆಗಲಿಲ್ಲ. ಈಗ ಸಹೋದರ ಹೀರೋ ಆಗಿದ್ದು, ಆತನ ಆಸೆಗೆ ಬೆಂಬಲವಾಗಿದ್ದೇನೆ. ಶೀಘ್ರದಲ್ಲೇ ಚಿತ್ರೀಕರಣ ಆರಂಭಿಲಾಗುವುದು. ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ