AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Shivaram: ಕೆ. ಶಿವರಾಮ್​ ಬಯೋಪಿಕ್​ನಲ್ಲಿ ನಟಿಸಲು ಪುನೀತ್​ಗೆ ಇತ್ತು ಆಸಕ್ತಿ; ಆದರೆ ವಿಧಿ..

ತುಂಬ ಬಡತನದಿಂದ ಬಂದ ಕೆ. ಶಿವರಾಮ್​ ಅವರು ಐಎಎಸ್​ ಅಧಿಕಾರಿ ಆಗಿ ಸಾಧನೆ ಮಾಡಿದ್ದರು. ಸಿನಿಮಾದಲ್ಲೂ ಜನಮೆಚ್ಚುಗೆ ಗಳಿಸಿದ್ದರು. ಅವರ ಜೀವನದ ಕಥೆಯನ್ನು ಸಿನಿಮಾ ಮಾಡುವ ಆಲೋಚನೆ ಇತ್ತು. ಪುನೀತ್ ರಾಜ್​ಕುಮಾರ್​ ಕೂಡ ಆಸಕ್ತಿ ತೋರಿಸಿದ್ದರು. ಇಂದು ಕೆ. ಶಿವರಾಮ್​ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಹಾಗೂ ಅನೇಕ ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

K Shivaram: ಕೆ. ಶಿವರಾಮ್​ ಬಯೋಪಿಕ್​ನಲ್ಲಿ ನಟಿಸಲು ಪುನೀತ್​ಗೆ ಇತ್ತು ಆಸಕ್ತಿ; ಆದರೆ ವಿಧಿ..
K Shivaram, Puneeth Rajkumar
ಮದನ್​ ಕುಮಾರ್​
|

Updated on: Feb 29, 2024 | 6:53 PM

Share

ಐಎಎಸ್​ ಅಧಿಕಾರಿಯಾಗಿ, ಸಿನಿಮಾ ನಟನಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದ ಕೆ. ಶಿವರಾಮ್​ (K Shivaram) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಬದುಕಿನ ಪಯಣವೇ ಒಂದು ರೋಚಕ ಕಥೆ. ತುಂಬ ಬಡತನದ ಕುಟುಂಬದಲ್ಲಿ ಹುಟ್ಟಿದ ಅವರು ನಂತರ ಎತ್ತರದ ಸ್ಥಾನಕ್ಕೆ ತಲುಪಿದರು. 40ನೇ ವಯಸ್ಸಿನಲ್ಲಿ ಸಿನಿಮಾ ಹೀರೋ ಆಗಿ ಯಶಸ್ಸು ಕಂಡರು. ಐಎಎಸ್​ ಅಧಿಕಾರಿ (IAS Officer) ಆಗಿದ್ದಾಗ ಲೆಕ್ಕವಿಲ್ಲದಷ್ಟು ಜನರಿಗೆ ಸಹಾಯ ಮಾಡಿದರು. ಈ ಎಲ್ಲ ಕಾರಣದಿಂದಾಗಿ ಅವರ ಜೀವನ ಅನೇಕರಿಗೆ ಸ್ಫೂರ್ತಿ ಆಗಿತ್ತು. ಅವರ ಜೀವನವನ್ನು ಆಧರಿಸಿ ಸಿನಿಮಾ ಮಾಡಲು ಪುನೀತ್​ ರಾಜ್​ಕುಮಾರ್​ (Puneeth Rajkumar) ಕೂಡ ಆಸಕ್ತಿ ತೋರಿಸಿದ್ದರು!

ಕೆಲವು ವರ್ಷಗಳ ಹಿಂದೆ ನಿರ್ದೇಶಕ ರಘುರಾಮ್​ ಅವರಿಗೆ ಕೆ. ಶಿವರಾಮ್​ ಒಂದು ಸಂದರ್ಶನ ನೀಡಿದ್ದರು. ಆ ಸಂದರ್ಶನದಲ್ಲಿ ತಮ್ಮ ಬಯೋಪಿಕ್​ ಕುರಿತು ಅವರು ಮಾತನಾಡಿದ್ದರು. ಒಂದು ವೇಳೆ ತಮ್ಮ ಜೀವನಾಧಾರಿತ ಸಿನಿಮಾ ಬಂದರೆ ಅದರಲ್ಲಿ ಪುನೀತ್​ ರಾಜ್​ಕುಮಾರ್ ನಟಿಸಬೇಕು ಎಂದು ಶಿವರಾಮ್​ ಅವರು ಹಂಬಲ ವ್ಯಕ್ತಪಡಿಸಿದ್ದರು. ಆ ವಿಷಯ ಪುನೀತ್​ ರಾಜ್​ಕುಮಾರ್​ ಅವರ ಕಿವಿಗೂ ತಲುಪಿತ್ತು. ‘ಹಾಗಾದರೆ ಮಾಡೋಣ’ ಎಂದು ಪುನೀತ್​ ಅವರು ಗ್ರೀನ್​ ಸಿಗ್ನಲ್​ ನೀಡಿದ್ದರಂತೆ. ಆದರೆ ಈಗ ಪುನೀತ್​ ಮತ್ತು ಶಿವರಾಮ್​ ಇಬ್ಬರೂ ನಮ್ಮೊಂದಿಗೆ ಇಲ್ಲ. ಅದು ವಿಧಿಯ ಲೆಕ್ಕಾಚಾರ.

ಪುನೀತ್​ ರಾಜ್​ಕುಮಾರ್​ ಅವರ ಮೇಲೆ ಕೆ. ಶಿವರಾಮ್​ ಅಪಾರ ಅಭಿಮಾನ ಇಟ್ಟುಕೊಂಡಿದ್ದರು. ಹಾಗಾಗಿ ಪುನೀತ್​ ನಟನೆಯ ಕೆಲವು ಸಿನಿಮಾಗಳನ್ನು ಅವರು ವಿತರಣೆ ಮಾಡಿದ್ದರು. ‘ಹುಡುಗರು’, ‘ವಂಶಿ’, ‘ರಾಮ್​’ ಹಾಗೂ ‘ಅರಸು’ ಸಿನಿಮಾಗಳನ್ನು ಕೆ. ಶಿವರಾಮ್​ ಅವರು ವಿತರಣೆ ಮಾಡಿದ್ದರು. ಅಂದಹಾಗೆ, ಚಿತ್ರರಂಗದಲ್ಲಿ ವಿತರಕ ಆಗಬೇಕು ಎಂಬ ಯಾವುದೇ ಉದ್ದೇಶ ಅವರಿಗೆ ಇರಲಿಲ್ಲ. ಪುನೀತ್​ ರಾಜ್​ಕುಮಾರ್​ ಮೇಲಿನ ಅಪ್ಪಟ ಅಭಿಮಾನದಿಂದ ಮಾತ್ರ ಅವರು ಈ ಸಿನಿಮಾಗಳನ್ನು ವಿತರಣೆ ಮಾಡಿದ್ದಾಗಿ ಹೇಳಿಕೊಂಡಿದ್ದರು.

ಇದನ್ನೂ ಓದಿ: K Shivaram: ಸಿನಿಮಾ ಹೀರೋ ಆಗಿದ್ದ ಮೊದಲ ಐಎಎಸ್​ ಅಧಿಕಾರಿ ಕೆ. ಶಿವರಾಮ್​

ಕೆಲವು ದಿನಗಳಿಂದ ಕೆ. ಶಿವರಾಮ್​ ಅವರ ಆರೋಗ್ಯ ಹದಗೆಟ್ಟಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗೆ ಅವರ ಪರಿಸ್ಥಿತಿ ಗಂಭೀರ ಆಗಿತ್ತು. ರಾಜಕೀಯ ಕ್ಷೇತ್ರದ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಶಿವರಾಮ್​ ಅವರು ಚಿಕಿತ್ಸೆಗೆ ಸ್ಪಂದಿಸಿಲ್ಲ. ಇಂದು (ಫೆಬ್ರವರಿ 29) ಸಂಜೆ 4.18ರ ಸಮಯಕ್ಕೆ ಅವರು ಇಹಲೋಕ ತ್ಯಜಿಸಿದರು. ಶುಕ್ರವಾರ (ಮಾ.1) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆ ತನಕ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ