K Shivaram: ಸಿನಿಮಾ ಹೀರೋ ಆಗಿದ್ದ ಮೊದಲ ಐಎಎಸ್​ ಅಧಿಕಾರಿ ಕೆ. ಶಿವರಾಮ್​

ಅನಾರೋಗ್ಯದಿಂದ ಕೆ. ಶಿವರಾಮ್​ ಅವರು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಶಿವರಾಮ್​ ಅವರ ಅಗಲಿಕೆ ಸುದ್ದಿ ತಿಳಿದು, ಶ್ರದ್ಧಾಂಜಲಿ ಅರ್ಪಿಸುವುದರ ಜೊತೆಗೆ ಸಿನಿಮಾ ಜರ್ನಿಯನ್ನು ಮೆಲಕು ಹಾಕಲಾಗುತ್ತಿದೆ. ಐಎಎಸ್​ ಅಧಿಕಾರಿ, ಸಿನಿಮಾ ನಟನಾಗಿ ಅವರು ಜನಮನ ಗೆದ್ದಿದ್ದರು. ರಾಜಕೀಯದಲ್ಲೂ ಅವರು ಗುರುತಿಸಿಕೊಂಡಿದ್ದರು.

K Shivaram: ಸಿನಿಮಾ ಹೀರೋ ಆಗಿದ್ದ ಮೊದಲ ಐಎಎಸ್​ ಅಧಿಕಾರಿ ಕೆ. ಶಿವರಾಮ್​
ಕೆ. ಶಿವರಾಮ್, ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಪೋಸ್ಟರ್​
Follow us
|

Updated on:Feb 29, 2024 | 6:38 PM

ಸಿನಿಮಾ ನಟ, ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್​ ಅವರ ನಿಧನಕ್ಕೆ (K Shivaram Death) ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದ ಶಿವರಾಮ್​ ಅವರು ಚಿತ್ರರಂಗದಲ್ಲೂ ತೊಡಗಿಕೊಂಡಿದ್ದರು. 1993ರಲ್ಲಿ ತೆರೆಕಂಡ ‘ಬಾ ನಲ್ಲೆ ಮಧುಚಂದ್ರಕೆ’ (Baa Nalle Madhuchandrake) ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಬಂದ ಅವರು ಮೊದಲ ಚಿತ್ರದಲ್ಲೇ ಯಶಸ್ಸು ಕಂಡಿದ್ದರು. ಆ ಸಿನಿಮಾದ ಹಾಡುಗಳು ಇಂದಿಗೂ ಎವರ್​ಗ್ರೀನ್​ ಆಗಿವೆ. ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಅವರು ಗುರುತಿಸಿಕೊಂಡಿದ್ದರು. ಈಗ ಶಿವರಾಮ್​ ಅವರ ಅಗಲಿಕೆಗೆ ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಅನೇಕರು ಸಂತಾಪ ಸೂಚಿಸಿದ್ದಾರೆ. ಕೆ. ಶಿವರಾಮ್​ (K Shivaram) ಅವರು ಸಾಗಿಬಂದ ಹಾದಿಯ ಬಗ್ಗೆ ಇಲ್ಲಿದೆ ಮಾಹಿತಿ..

ಬಡ ಕುಟುಂಬದಿಂದ ಬಂದು, ಕೆಎಎಸ್​ ಹಾಗೂ ಐಎಎಸ್​ ಅಧಿಕಾರಿಯಾಗಿ ಸಾಧನೆ ಮಾಡಿದ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದರು. ನಟ ಆಗಬೇಕು ಎಂಬ ಆಸೆ ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಸ್ನೇಹಿತರೊಬ್ಬರ ಜೊತೆ ಸುಮ್ಮನೇ ಮಾತನಾಡುವಾಗ ಸಿನಿಮಾ ಮಾಡಬೇಕು ಎಂಬ ಹಂಬಲ ಅವರಿಗೆ ಚಿಗುರಿತು. ಅದನ್ನು ಈಡೇರಿಸಿಕೊಳ್ಳಲು ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದಲ್ಲಿ ನಟಿಸುವ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ ಸಿನಿಮಾ ಹೀರೋ ಆದ ಮೊದಲ ಐಎಎಸ್​ ಅಧಿಕಾರಿ ಎಂಬ ಖ್ಯಾತಿ ಅವರಿಗೆ ಸಿಕ್ಕಿತ್ತು. ನಟನಾಗಿ ಅವರು ಜನಪ್ರಿಯತೆ ಗಳಿಸಿದ್ದರು.

ಅಧಿಕಾರಿಯಾಗಿದ್ದುಕೊಂಡು ಸಿನಿಮಾದಲ್ಲಿ ನಟಿಸಬಾರದು ಎಂದು ಕೆಲವರು ತಕರಾರು ತೆಗೆದಿದ್ದರು. ಆದರೆ ಅದರ ವಿರುದ್ಧ ಶಿವರಾಮ್​ ಅವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ನಟನೆ, ಕ್ರೀಡೆ ಇವೆಲ್ಲ ಹವ್ಯಾಸ. ಅದಕ್ಕೆ ಯಾರೂ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಶಿವರಾಮ್​ ಹೇಳುತ್ತಿದ್ದರು. ಅಧಿಕಾರಿಯಾಗಿ ನಿವೃತ್ತಿ ಹೊಂದುವ ತನಕವೂ ಅವರು ನಟನೆಯಲ್ಲಿ ತೊಡಗಿಕೊಂಡಿದ್ದರು. ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದ ಕೆಲಸ ಶುರುವಾಗಿದ್ದೇ ರಾಹುಕಾಲದಲ್ಲಿ! ಆ ಮೂಲಕ ಕೆಲವು ಮೂಢನಂಬಿಕೆಗಳನ್ನು ಅವರು ತೊಡೆದು ಹಾಕಲು ಪ್ರಯತ್ನಿಸಿದ್ದರು. ಆ ಸಿನಿಮಾಗೆ 35 ಕೋಟಿ ರೂಪಾಯಿ ಖರ್ಚಾಗಿತ್ತು. ಸಿನಿಮಾ ಹಿಟ್​ ಆಯಿತು. ಆ ಸಿನಿಮಾಗೆ ಹಂಸಲೇಖ ಅವರು ಸಂಗೀತ ನೀಡಿದ್ದರು. ಹಾಡುಗಳು ಸೂಪರ್​ ಹಿಟ್​ ಆದವು.

ಇದನ್ನೂ ಓದಿ: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ

ಅಧಿಕಾರಿ ಆದ್ದರಿಂದ ಸರಿಯಾದ ಸಮಯಕ್ಕೆ ಕಾಲ್​ಶೀಟ್​ ನೀಡಲ್ಲ ಅಂತ ಶಿವರಾಮ್​ ಜೊತೆ ಸಿನಿಮಾ ಮಾಡಲು ಹಲವರು ಮುಂದೆಬರಲಿಲ್ಲ. ಹಾಗಿದ್ದರೂ ‘ಪ್ರತಿಭಟನೆ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇತ್ತೀಚಿನ ದಿನಗಳಲ್ಲೂ ಅವರು ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಿದ್ಧರಾಗಿದ್ದರು. ನಟನೆಯ ಮತ್ತು ನಿರ್ಮಾಣ ಮಾಡಬೇಕು ಎಂದು ಅವರು ಆಸೆಪಟ್ಟಿದ್ದರು. ಚುನಾವಣೆಯಲ್ಲಿ ಟಿಕೆಟ್​ ಸಿಗದಿದ್ದರೆ ಪೂರ್ಣ ಪ್ರಮಾಣದಲ್ಲಿ ಚಿತ್ರರಂಗದಲ್ಲಿ ಸಕ್ರಿಯವಾಗಬೇಕು ಎಂದು ಶಿವರಾಮ್​ ಅವರು ಹೇಳಿಕೊಂಡಿದ್ದರು. ಕೆ. ಶಿವರಾಮ್​ ನಟಿಸಿದ್ದ ಕೊನೆಯ ಸಿನಿಮಾ 2017ರಲ್ಲಿ ಬಿಡುಗಡೆಯಾದ ‘ಟೈಗರ್​’.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:11 pm, Thu, 29 February 24

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್