ಕೆ ಶಿವರಾಮ್ ನಿಧನಕ್ಕೆ ಕಾರಣವೇನು? ಅಂತಿಮ ದರ್ಶನ ಎಲ್ಲಿ?

K Shivaram: ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದ ಕೆ ಶಿವರಾಮ್ ಇಂದು ನಿಧನರಾಗಿದ್ದು, ಅವರ ಅಂತಿಮ ದರ್ಶನದ ಸ್ಥಳ, ಸಮಯ ಇತ್ಯಾದಿ ಮಾಹಿತಿ ಇಲ್ಲಿದೆ.

ಕೆ ಶಿವರಾಮ್ ನಿಧನಕ್ಕೆ ಕಾರಣವೇನು? ಅಂತಿಮ ದರ್ಶನ ಎಲ್ಲಿ?
Follow us
|

Updated on: Feb 29, 2024 | 6:25 PM

ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ ಕೆ ಶಿವರಾಮ್ (K Shivaram) ಇಂದು (ಫೆಬ್ರವರಿ 29) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಶಿವರಾಮ್ ಅವರ ನಿಧನದ ಬಗ್ಗೆ ಇಂದು ಬೆಳಿಗ್ಗೆಯಿಂದಲೂ ಸುದ್ದಿಗಳು ಹರಿದಾಡುತ್ತಲೇ ಇತ್ತು. ಇದೀಗ ಶಿವರಾಮ್ ಅವರ ಅಳಿಯ, ನಟ ಪ್ರದೀಪ್ ಅವರು ಶಿವರಾಮ್ ನಿಧನದ ಸುದ್ದಿಯನ್ನು ಖಾತ್ರಿಪಡಿಸಿದ್ದು, ಶಿವರಾಮ್ ಅಗಲಿಕೆ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಬೇಸರದಿಂದಲೇ ಹಂಚಿಕೊಂಡಿದ್ದಾರೆ.

‘ಇಂದು ಸಂಜೆ 4:18ಕ್ಕೆ ಕೆ ಶಿವರಾಮ್ ಅವರು ನಿಧನ ಹೊಂದಿದ್ದಾರೆ. ಶಿವರಾಮ್ ಅವರನ್ನು ಫೆಬ್ರವರಿ 3 ರಂದು ರಕ್ತದೊತ್ತಡ ವ್ಯತ್ಯಯವಾದ ಕಾರಣ ಅವರನ್ನು ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರು ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿತ್ತು. ಇಂದು ಮತ್ತೆ ಅವರಿಗೆ ಹೃದಯಾಘಾತವಾಗಿದ್ದು ಅವರು ನಿಧನ ಹೊಂದಿದ್ದಾರೆ’ ಎಂದಿದ್ದಾರೆ ಪ್ರದೀಪ್.

ಇದನ್ನೂ ಓದಿ:ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

‘ಶಿವರಾಮ್ ಅವರು ಕರ್ನಾಟಕದ ಮೇರು ವ್ಯಕ್ತಿತ್ವದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಅತ್ಯುತ್ತಮ ನಟರಾಗಿದ್ದರು. ಜೊತೆಗೆ ದಕ್ಷ ಐಎಎಸ್ ಅಧಿಕಾರಿಗಳೂ ಸಹ ಆಗಿದ್ದರು. ಶಿವರಾಮ್ ಅವರ ಪಾರ್ಥಿವ ಶರೀರವನ್ನು ಇಂದು ಆಸ್ಪತ್ರೆಯಿಂದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನಾಳೆ (ಮಾರ್ಚ್ 1) ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿನಿಮಾ ರಂಗ, ರಾಜಕೀಯ ರಂಗ ಹಾಗೂ ಆಡಳಿತ ವಿಭಾಗದಲ್ಲಿ ಅಪಾರ ಗೆಳೆಯರು, ಅಭಿಮಾನಿಗಳನ್ನು ಶಿವರಾಮ್ ಅವರು ಹೊಂದಿದ್ದರು. ಅವರೆಲ್ಲರಿಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 1 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಶಿವರಾಮ್ ಅವರ ಪತ್ನಿ ಮಲೆ ಮಹದೇಶ್ವರ ದೇವಾಲಯಕ್ಕೆ ತೆರಳಿದ್ದಾರೆ. ಅವರು ಮರಳಿದ ಬಳಿಕ ಶಿವರಾಮ್ ಅವರ ಅಂತಿಮ ಸಂಸ್ಕಾರ ಎಲ್ಲಾಗಬೇಕು ಎಂಬ ಬಗ್ಗೆ ತೀರ್ಮಾನ ಮಾಡುತ್ತೇವೆ’ ಎಂದಿದ್ದಾರೆ ಪ್ರದೀಪ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು