AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ ಶಿವರಾಮ್ ನಿಧನಕ್ಕೆ ಕಾರಣವೇನು? ಅಂತಿಮ ದರ್ಶನ ಎಲ್ಲಿ?

K Shivaram: ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದ ಕೆ ಶಿವರಾಮ್ ಇಂದು ನಿಧನರಾಗಿದ್ದು, ಅವರ ಅಂತಿಮ ದರ್ಶನದ ಸ್ಥಳ, ಸಮಯ ಇತ್ಯಾದಿ ಮಾಹಿತಿ ಇಲ್ಲಿದೆ.

ಕೆ ಶಿವರಾಮ್ ನಿಧನಕ್ಕೆ ಕಾರಣವೇನು? ಅಂತಿಮ ದರ್ಶನ ಎಲ್ಲಿ?
ಮಂಜುನಾಥ ಸಿ.
|

Updated on: Feb 29, 2024 | 6:25 PM

Share

ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ ಕೆ ಶಿವರಾಮ್ (K Shivaram) ಇಂದು (ಫೆಬ್ರವರಿ 29) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಶಿವರಾಮ್ ಅವರ ನಿಧನದ ಬಗ್ಗೆ ಇಂದು ಬೆಳಿಗ್ಗೆಯಿಂದಲೂ ಸುದ್ದಿಗಳು ಹರಿದಾಡುತ್ತಲೇ ಇತ್ತು. ಇದೀಗ ಶಿವರಾಮ್ ಅವರ ಅಳಿಯ, ನಟ ಪ್ರದೀಪ್ ಅವರು ಶಿವರಾಮ್ ನಿಧನದ ಸುದ್ದಿಯನ್ನು ಖಾತ್ರಿಪಡಿಸಿದ್ದು, ಶಿವರಾಮ್ ಅಗಲಿಕೆ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಬೇಸರದಿಂದಲೇ ಹಂಚಿಕೊಂಡಿದ್ದಾರೆ.

‘ಇಂದು ಸಂಜೆ 4:18ಕ್ಕೆ ಕೆ ಶಿವರಾಮ್ ಅವರು ನಿಧನ ಹೊಂದಿದ್ದಾರೆ. ಶಿವರಾಮ್ ಅವರನ್ನು ಫೆಬ್ರವರಿ 3 ರಂದು ರಕ್ತದೊತ್ತಡ ವ್ಯತ್ಯಯವಾದ ಕಾರಣ ಅವರನ್ನು ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರು ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿತ್ತು. ಇಂದು ಮತ್ತೆ ಅವರಿಗೆ ಹೃದಯಾಘಾತವಾಗಿದ್ದು ಅವರು ನಿಧನ ಹೊಂದಿದ್ದಾರೆ’ ಎಂದಿದ್ದಾರೆ ಪ್ರದೀಪ್.

ಇದನ್ನೂ ಓದಿ:ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

‘ಶಿವರಾಮ್ ಅವರು ಕರ್ನಾಟಕದ ಮೇರು ವ್ಯಕ್ತಿತ್ವದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಅತ್ಯುತ್ತಮ ನಟರಾಗಿದ್ದರು. ಜೊತೆಗೆ ದಕ್ಷ ಐಎಎಸ್ ಅಧಿಕಾರಿಗಳೂ ಸಹ ಆಗಿದ್ದರು. ಶಿವರಾಮ್ ಅವರ ಪಾರ್ಥಿವ ಶರೀರವನ್ನು ಇಂದು ಆಸ್ಪತ್ರೆಯಿಂದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನಾಳೆ (ಮಾರ್ಚ್ 1) ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿನಿಮಾ ರಂಗ, ರಾಜಕೀಯ ರಂಗ ಹಾಗೂ ಆಡಳಿತ ವಿಭಾಗದಲ್ಲಿ ಅಪಾರ ಗೆಳೆಯರು, ಅಭಿಮಾನಿಗಳನ್ನು ಶಿವರಾಮ್ ಅವರು ಹೊಂದಿದ್ದರು. ಅವರೆಲ್ಲರಿಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 1 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಶಿವರಾಮ್ ಅವರ ಪತ್ನಿ ಮಲೆ ಮಹದೇಶ್ವರ ದೇವಾಲಯಕ್ಕೆ ತೆರಳಿದ್ದಾರೆ. ಅವರು ಮರಳಿದ ಬಳಿಕ ಶಿವರಾಮ್ ಅವರ ಅಂತಿಮ ಸಂಸ್ಕಾರ ಎಲ್ಲಾಗಬೇಕು ಎಂಬ ಬಗ್ಗೆ ತೀರ್ಮಾನ ಮಾಡುತ್ತೇವೆ’ ಎಂದಿದ್ದಾರೆ ಪ್ರದೀಪ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?