AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha 46: ‘ಕಿಚ್ಚ 46’ ಚಿತ್ರಕ್ಕೆ ‘ಮ್ಯಾಕ್ಸ್’ ಶೀರ್ಷಿಕೆ; ಮತ್ತೆ ಖಾಕಿ ತೊಟ್ಟ ಸುದೀಪ್?

K46 Title Teaser: ‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಸಿನಿಮಾದ ಟೈಟಲ್ ಟೀಸರ್ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದೆ. ‘ಸಾಕಷ್ಟು ವಾಹನಗಳಲ್ಲಿ ವೆಪನ್ ತೆಗೆದುಕೊಂಡು ಬರಲಾಗುತ್ತಿದೆ’ ಎಂದು ಪೊಲೀಸರಿಗೆ ಮಾಹಿತಿ ಬರುತ್ತದೆ. ಆದರೆ, ಇದಕ್ಕೆ ಪೊಲೀಸರು ಹೆದರಲ್ಲ. ಏಕೆಂದರೆ ಅವರ ಬಳಿ ಮ್ಯಾಕ್ಸ್ ಇದ್ದಾನೆ.

Kichcha 46: ‘ಕಿಚ್ಚ 46’ ಚಿತ್ರಕ್ಕೆ ‘ಮ್ಯಾಕ್ಸ್’ ಶೀರ್ಷಿಕೆ; ಮತ್ತೆ ಖಾಕಿ ತೊಟ್ಟ ಸುದೀಪ್?
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Sep 02, 2023 | 7:41 AM

ಕಿಚ್ಚ ಸುದೀಪ್​ಗೆ (Sudeep) ಇಂದು (ಸೆಪ್ಟೆಂಬರ್ 2) ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೀರೋಗೆ ವಿಶ್ ಮಾಡಲಾಗುತ್ತಿದೆ. ಇದರ ಜೊತೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಘೋಷಣೆ ಮಾಡಲಾಗುತ್ತಿದೆ. ‘ಕಿಚ್ಚ 46’ (Kichcha 46) ಸಿನಿಮಾದ ಟೈಟಲ್ ಕೂಡ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಮ್ಯಾಕ್ಸ್’ ಎಂದು ಶೀರ್ಷಿಕೆ ನೀಡಲಾಗಿದೆ. ಶೀರ್ಷಿಕೆ ಟೀಸರ್ ರಿಲೀಸ್ ಆಗಿದ್ದು ಗಮನ ಸೆಳೆಯುತ್ತಿದೆ. ಈ ಸಿನಿಮಾದ ಶೂಟಿಂಗ್ ಸದ್ಯ ಭರದಿಂದ ಸಾಗುತ್ತಿದೆ.

‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಸಿನಿಮಾದ ಟೈಟಲ್ ಟೀಸರ್ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದೆ. ‘ಸಾಕಷ್ಟು ವಾಹನಗಳಲ್ಲಿ ವೆಪನ್ ತೆಗೆದುಕೊಂಡು ಬರಲಾಗುತ್ತಿದೆ’ ಎಂದು ಪೊಲೀಸರಿಗೆ ಮಾಹಿತಿ ಬರುತ್ತದೆ. ಆದರೆ, ಇದಕ್ಕೆ ಪೊಲೀಸರು ಹೆದರಲ್ಲ. ಏಕೆಂದರೆ ಅವರ ಬಳಿ ಮ್ಯಾಕ್ಸ್ ಇದ್ದಾನೆ. ‘ಬರುವವರು ಜ್ವಾಲಾಮುಖಿಯಿಂದ, ಚಂಡಮಾರುತದಿಂದ, ಭೂಕಂಪದಿಂದ, ಸುನಾಮಿಯಿಂದ ತಪ್ಪಿಸಿಕೊಳ್ಳಬಹುದು. ಆದರೆ, ಇವನ ಹತ್ರ ಸಿಕ್ಕಿಬಿದ್ದರೆ ಸಾವೇ ಇಲ್ಲ ಎಂದು ವರ ಪಡೆದು ಹುಟ್ಟಿದವನಿಗೂ ಸಾವು ಗ್ಯಾರಂಟಿ’ ಎನ್ನುತ್ತಾರೆ ಪೊಲೀಸರು.

ಬಳಿಕ ಲಾಟಿ ಹಿಡಿದು ಬರುತ್ತಾರೆ ಸುದೀಪ್. ಈ ಮೂಲಕ ಸುದೀಪ್ ಪೊಲೀಸ್ ಪಾತ್ರದ ಮೂಲಕ ತೆರೆಮೇಲೆ ಬರುವ ಸೂಚನೆ ನೀಡಿದ್ದಾರೆ. ಸುದೀಪ್ ಅವರಿಗೆ ಪೊಲೀಸ್ ಪಾತ್ರ ಚೆನ್ನಾಗಿ ಹೊಂದುತ್ತದೆ. ‘ಕೆಂಪೇಗೌಡ’, ‘ವರದನಾಯಕ’, ‘ಕಬ್ಜ’ ಸಿನಿಮಾಗಳಲ್ಲಿ ಸುದೀಪ್ ಅವರು ಪೊಲೀಸ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ‘ಮ್ಯಾಕ್ಸ್’ ಚಿತ್ರಕ್ಕಾಗಿ ಮತ್ತೆ ಖಾಕಿ ತೊಡುತ್ತಿದ್ದಾರೆ.

ಇದನ್ನೂ ಓದಿ: 9 ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ ಕಿಚ್ಚ ಸುದೀಪ್: ಪೋಸ್ಟರ್ ಬಿಡುಗಡೆ

ಇದು ಪ್ಯಾನ್ ಇಂಡಿಯಾ ಚಿತ್ರ. ಈ ಕಾರಣದಿಂದಲೇ ಎಲ್ಲಾ ಭಾಷೆಗಳಿಗೂ ಹೊಂದಾಣಿಕೆ ಆಗುವಂಥ ಶೀರ್ಷಿಕೆಯನ್ನು ನೀಡಲಾಗಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಒಟ್ಟಾಗಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ವಿಜಯ್ ಕಾರ್ತಿಕೇಯ ನಿರ್ದೇಶನ ಚಿತ್ರಕ್ಕಿದೆ. ಸುದೀಪ್ ಬರ್ತ್​ಡೇ ಪ್ರಯುಕ್ತ ಹೊಸ ಹೊಸ ಸಿನಿಮಾ ಘೋಷಣೆ ಆಗುತ್ತಿದೆ. ಆರ್. ಚಂದ್ರು ಜೊತೆ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಅವರು ಹಲವು ವರ್ಷಗಳ ಬಳಿಕ ಡೈರೆಕ್ಷನ್​ಗೆ ಇಳಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sat, 2 September 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್