AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್​ ಅಬ್ಬರ

ಭಾನುವಾರ (ಡಿಸೆಂಬರ್​ 31) ‘ಕಾಟೇರ’ ಸಿನಿಮಾಗೆ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ದರ್ಶನ್​ ಅಭಿಮಾನಿಗಳು ಈ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇಂದು (ಡಿ.31) ಕಲೆಕ್ಷನ್​ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ.

2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್​ ಅಬ್ಬರ
ದರ್ಶನ್​
ಮದನ್​ ಕುಮಾರ್​
|

Updated on: Dec 31, 2023 | 8:59 AM

Share

ಈ ವರ್ಷದ ಕೊನೆಯಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಮೂಡಿದೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ನಟನೆಯ ‘ಕಾಟೇರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಭರ್ಜರಿ ಓಪನಿಂಗ್​ ಪಡೆದುಕೊಂಡ ಈ ಸಿನಿಮಾ ಎರಡನೇ ದಿನ ಕೂಡ ಅಬ್ಬರಿಸಿದೆ. ಬಾಕ್ಸ್​ ಆಫೀಸ್​ನಲ್ಲಿ ತನ್ನ ನಾಗಾಲೋಟ ಮುಂದುವರಿಸಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಕಲೆಕ್ಷನ್​ (Kaatera Movie Collection) ಮಾಡುತ್ತಾ ಮುನ್ನುಗ್ಗುತ್ತಿದೆ. ಚಿತ್ರತಂಡದ ಆಪ್ತ ಮೂಲಗಳು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಎರಡು ದಿನಕ್ಕೆ ‘ಕಾಟೇರ’ ಸಿನಿಮಾ (Kaatera Movie) ಗಳಿಸಿರುವುದು ಬರೋಬ್ಬರಿ 37.14 ಕೋಟಿ ರೂಪಾಯಿ.

ಮೊದಲ ದಿನವಾದ ಡಿಸೆಂಬರ್​ 29ರಂದು ‘ಕಾಟೇರ’ ಸಿನಿಮಾ 19.79 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಎರಡನೇ ದಿನ 17.35 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಎರಡು ದಿನಕ್ಕೆ ಚಿತ್ರದ ಒಟ್ಟು ಕಲೆಕ್ಷನ್​ 37.14 ಕೋಟಿ ರೂಪಾಯಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಅಂತಿಮವಾಗಿ ಈ ಚಿತ್ರದ ಕಲೆಕ್ಷನ್​ ಎಷ್ಟಾಗಲಿದೆ ಎಂಬುದನ್ನು ಕಾದುನೋಡಬೇಕು.

ಭಾನುವಾರ (ಡಿಸೆಂಬರ್​ 31) ‘ಕಾಟೇರ’ ಸಿನಿಮಾಗೆ ಇನ್ನೂ ಹೆಚ್ಚಿನ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ದರ್ಶನ್​ ಅಭಿಮಾನಿಗಳು ಈ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಅಲ್ಲ. ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್​ ಆಗಿದೆ. ಹಾಗಿದ್ದರೂ ಕೂಡ ಈ ಪರಿ ಕಲೆಕ್ಷನ್​ ಮಾಡುತ್ತಿರುವುದು ಗಮನಾರ್ಹ ಬೆಳವಣಿಗೆ.

ಇದನ್ನೂ ಓದಿ: Kaatera Movie Review: ಸಂಘರ್ಷದ ಕಥೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವ ‘ಕಾಟೇರ’

ಪ್ರೇಕ್ಷಕರಿಗೆ ಥ್ಯಾಂಕ್ಸ್​ ಹೇಳಿದ ದರ್ಶನ್​: ‘ಕಾಟೇರ’ ಯಶಸ್ಸಿನಿಂದ ದರ್ಶನ್​ ಖುಷಿ ಆಗಿದ್ದಾರೆ. ಅದಕ್ಕಾಗಿ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ‘ಏನೆಂದು ನಾ ಹೇಳಲಿ.. ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ? ಧನ್ಯೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆಯಿಂದ ನಮ್ಮ ಕಾಟೇರ ಚಿತ್ರತಂಡದ ಮನ ತುಂಬಿದೆ. ಮಾತುಗಳೇ ಬರುತ್ತಿಲ್ಲ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು