Kaatera Movie: 100 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಕಾಟೇರ’; ಮಾರಾಟ ಆದ ಟಿಕೆಟ್​ಗಳೆಷ್ಟು?

Kaatera Movie Collection: ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಬಾಚಿಕೊಂಡಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ.

Kaatera Movie: 100 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಕಾಟೇರ’; ಮಾರಾಟ ಆದ ಟಿಕೆಟ್​ಗಳೆಷ್ಟು?
ದರ್ಶನ್
Follow us
|

Updated on: Jan 05, 2024 | 8:33 AM

2023ರ ಕೊನೆಯಲ್ಲಿ ರಿಲೀಸ್ ಆದ ‘ಕಾಟೇರ’ ಸಿನಿಮಾ (Kaatera Movie) ಸೂಪರ್ ಹಿಟ್ ಆಗಿದೆ. ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರ ಗೆದ್ದು ಬೀಗಿದೆ. ವಾರದ ದಿನಗಳಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಕೇವಲ ಒಂದೇ ವಾರಕ್ಕೆ ಚಿತ್ರ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ. ಇದನ್ನು ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಬಾಚಿಕೊಂಡಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಈಗ ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲಿಂದಲೂ ಸಿನಿಮಾಗೆ ಬೇಡಿಕೆ ಬರುತ್ತಿದ್ದು, ಡಬ್ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ.

ಇದನ್ನೂ ಓದಿ: ‘ಕಾಟೇರ’ ಸಿನಿಮಾ ರಿಲೀಸ್​ ಆದ ಬಳಿಕ ವಿದೇಶಕ್ಕೆ ತೆರಳಿದ ನಟಿ ಆರಾಧನಾ

ಕಾಟೇರ ಏಳು ದಿನದ ಕಲೆಕ್ಷನ್ ವಿವರ

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಏಳು ದಿನಕ್ಕೆ ‘ಕಾಟೇರ’ ಚಿತ್ರದ 52.77 ಲಕ್ಷ ಟಿಕೆಟ್ ಮಾರಾಟ ಆಗಿದೆ. ಈ ಚಿತ್ರದಲ್ಲಿ ಮಾಲಶ್ರೀ ಮಗಳು ಆರಾಧನಾ ರಾಮ್ ನಟಿಸಿದ್ದಾರೆ. ಮೊದಲ ಚಿತ್ರದಲ್ಲೇ ಗೆದ್ದಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ರಾಕ್​ಲೈನ್ ವೆಂಕಟೇಶ್ ದೊಡ್ಡ ಲಾಭ ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್