AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕನೇ ದಿನವೂ ‘ಕಾಟೇರ’ ಅಬ್ಬರ; 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?

Kaatera Movie Collection: ‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.

ನಾಲ್ಕನೇ ದಿನವೂ ‘ಕಾಟೇರ’ ಅಬ್ಬರ; 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 02, 2024 | 10:25 AM

Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಮೊದಲ ಮೂರು ದಿನಕ್ಕೆ ಈ ಚಿತ್ರ 58.8 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ನಾಲ್ಕನೇ ದಿನವೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಸೋಮವಾರ (ಜನವರಿ 1) ಹಲವು ಕಡೆಗಳಲ್ಲಿ ಸರ್ಕಾರಿ ರಜೆ ಇತ್ತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ 75 ಕೋಟಿ ರೂಪಾಯಿ ಆಗಿದೆ. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನು ಬೇಕಿರುವುದು ಕೇವಲ 25 ಕೋಟಿ ರೂಪಾಯಿ ಮಾತ್ರ. ಈ ವಾರವೇ ಸಿನಿಮಾ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಅನಗತ್ಯವಾಗಿ ಎಲ್ಲಿಯೂ ಫೈಟ್ ತುರುಕಿಲ್ಲ. ಜಾತಿಗಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎನ್ನುವ ಅಂಶವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.

ನಾಲ್ಕನೇ ದಿನವಾದ ಸೋಮವಾರ (ಜನವರಿ 1) ಸಿನಿಮಾ 18.20 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ದರ್ಶನ್ ಆಪ್ತರು ಹೇಳಿದ್ದಾರೆ. ಈ ಮೂಲಕ ಸಿನಿಮಾದ ಗಳಿಕೆ 77.6 ಕೋಟಿ ರೂಪಾಯಿ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಡಿ ಬಾಸ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ

ಕಲೆಕ್ಷನ್ ವಿಚಾರದಲ್ಲಿ ಸ್ಪಷ್ಟನೆ ನೀಡೋಕೆ ರಾಕ್​ಲೈನ್ ವೆಂಕಟೇಶ್ ನಿರಾಕರಿಸಿದ್ದಾರೆ. ‘ನನ್ನ ಚಿತ್ರಗಳ ಬಜೆಟ್, ಲಾಭ, ನಷ್ಟದ ಕುರಿತು ಯಾರೊಂದಿಗೂ ಚರ್ಚಿಸಲ್ಲ. ಕಾಟೇರ ಕಲೆಕ್ಷನ್ ಬಗ್ಗೆ ಹಲವು ಸುದ್ದಿಗಳು ಹರಿದಾಡಿವೆ. ಅದೇ ರೀತಿ ಆಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿ ಸುಮ್ಮನೆ ಇದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿದೆ. ನಾನು ಲೆಕ್ಕ ನೋಡೋಕೆ ಹೋಗಿಲ್ಲ. ನಾನು ಲೆಕ್ಕಾಚಾರ ಮಾಡೋದು ಕೊನೆಯಲ್ಲಿ’ ಎಂದಿದ್ದಾರೆ ಅವರು. ಇದರಿಂದ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Tue, 2 January 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು