AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Movie: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ

ಕಳೆದ ವಾರಕ್ಕಿಂತ ಈ ವಾರ ‘ಕಾಟೇರ’ಕ್ಕೆ ಹೆಚ್ಚಿನ ಚಿತ್ರಮಂದಿರ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಗಳಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ. ‘ಕಾಟೇರ’ ಚಿತ್ರದ ಅಬ್ಬರದ ಎದುರು ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರ ಕಡಿಮೆ ಆಗಿದೆ.

Kaatera Movie: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 06, 2024 | 7:02 AM

Share

‘ಕಾಟೇರ’ ಸಿನಿಮಾ (Kaatera Movie) ರಿಲೀಸ್ ಆಗಿ ಒಂದು ವಾರ ಕಳೆದರೂ ಅಬ್ಬರ ತಗ್ಗಿಲ್ಲ. ಈಗಲೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವುದು ಚಿತ್ರದ ಹೆಚ್ಚುಗಾರಿಕೆ. ಸಿನಿಮಾ ಈಗಾಗಲೇ ನೂರು ಕೋಟಿ ರೂಪಾಯಿ ಕ್ಲಬ್ ಸೇರಿ ದಾಖಲೆ ಬರೆದಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗಲಿದೆ ಎನ್ನುವ ಕುತೂಹಲ ಮೂಡಿದೆ. ಕಳೆದ ವಾರಕ್ಕಿಂತ ಈ ವಾರ ‘ಕಾಟೇರ’ಕ್ಕೆ ಹೆಚ್ಚಿನ ಚಿತ್ರಮಂದಿರ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಗಳಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ.

‘ಸಲಾರ್’ ಸಿನಿಮಾ ರಿಲೀಸ್ ಆದ ವಾರ 406 ಏಕಪರದೆ ಚಿತ್ರಮಂದಿರ ಹಾಗೂ 72 ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಮಲ್ಟಿಪ್ಲೆಕ್ಸ್​ಗಳ ಸಂಖ್ಯೆ ಅಷ್ಟೇ ಇದ್ದು ಸಿಂಗಲ್​ ಸ್ಕ್ರೀನ್ ಥಿಯೇಟರ್ ಸಂಖ್ಯೆ 462ಕ್ಕೆ ಏರಿಕೆ ಆಗಿದೆ. ಈ ಮೂಲಕ ‘ಕಾಟೇರ’ನ ಅಧಿಪತ್ಯ ಹೆಚ್ಚುತ್ತಿದೆ. ‘ಕಾಟೇರ’ ಚಿತ್ರದ ಅಬ್ಬರದ ಎದುರು ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರ ಕಡಿಮೆ ಆಗಿದೆ.

‘ಕಾಟೇರ’ ಗಳಿಕೆ ವಿವರ..

ಮೊದಲ ದಿನ ಅಂದರೆ ಡಿಸೆಂಬರ್ 29ರಂದು ಕಾಟೇರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಡಿಸೆಂಬರ್ 30ರಂದು 17.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಡಿಸೆಂಬರ್ 31ರಂದು 20.94 ಕೋಟಿ ರೂ., ಜನವರಿ 1ರಂದು 18.26 ಕೋಟಿ ರೂ., ಜನವರಿ 2ರಂದು 9.24 ಕೋಟಿ ರೂ., ಜನವರಿ 3ರಂದು 9.78 ಕೋಟಿ ರೂ., ಜನವರಿ 4ರಂದು 9.52 ಕೋಟಿ ರೂ. ಬಾಚಿಕೊಂಡಿತು. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 104.5 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: Kaatera Movie: 100 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಕಾಟೇರ’; ಮಾರಾಟ ಆದ ಟಿಕೆಟ್​ಗಳೆಷ್ಟು?

ಪಾತ್ರವರ್ಗ..

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ಆರಾಧನಾ ರಾಮ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ಶ್ರುತಿ, ವೈಜನಾಥ್ ಬಿರಾದಾರ್ ಮೊದಲಾದವರು ಸಿನಿಮಾದಲ್ಲಿ  ನಟಿಸಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಜಾತಿ ಪದ್ಧತಿ, ರೈತರ ಕಷ್ಟಗಳು ಮತ್ತಿತ್ಯಾದಿ ಸಮಸ್ಯೆಗಳ ಬಗ್ಗೆ ಸಿನಿಮಾ ಬೆಳಕು ಚೆಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ