Kaatera Movie: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ

ಕಳೆದ ವಾರಕ್ಕಿಂತ ಈ ವಾರ ‘ಕಾಟೇರ’ಕ್ಕೆ ಹೆಚ್ಚಿನ ಚಿತ್ರಮಂದಿರ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಗಳಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ. ‘ಕಾಟೇರ’ ಚಿತ್ರದ ಅಬ್ಬರದ ಎದುರು ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರ ಕಡಿಮೆ ಆಗಿದೆ.

Kaatera Movie: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ
ದರ್ಶನ್
Follow us
|

Updated on: Jan 06, 2024 | 7:02 AM

‘ಕಾಟೇರ’ ಸಿನಿಮಾ (Kaatera Movie) ರಿಲೀಸ್ ಆಗಿ ಒಂದು ವಾರ ಕಳೆದರೂ ಅಬ್ಬರ ತಗ್ಗಿಲ್ಲ. ಈಗಲೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವುದು ಚಿತ್ರದ ಹೆಚ್ಚುಗಾರಿಕೆ. ಸಿನಿಮಾ ಈಗಾಗಲೇ ನೂರು ಕೋಟಿ ರೂಪಾಯಿ ಕ್ಲಬ್ ಸೇರಿ ದಾಖಲೆ ಬರೆದಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗಲಿದೆ ಎನ್ನುವ ಕುತೂಹಲ ಮೂಡಿದೆ. ಕಳೆದ ವಾರಕ್ಕಿಂತ ಈ ವಾರ ‘ಕಾಟೇರ’ಕ್ಕೆ ಹೆಚ್ಚಿನ ಚಿತ್ರಮಂದಿರ ಸಿಕ್ಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಗಳಿಕೆ ಕೂಡ ಹೆಚ್ಚುವ ನಿರೀಕ್ಷೆ ಇದೆ.

‘ಸಲಾರ್’ ಸಿನಿಮಾ ರಿಲೀಸ್ ಆದ ವಾರ 406 ಏಕಪರದೆ ಚಿತ್ರಮಂದಿರ ಹಾಗೂ 72 ಮಲ್ಟಿಪ್ಲೆಕ್ಸ್​ನಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಮಲ್ಟಿಪ್ಲೆಕ್ಸ್​ಗಳ ಸಂಖ್ಯೆ ಅಷ್ಟೇ ಇದ್ದು ಸಿಂಗಲ್​ ಸ್ಕ್ರೀನ್ ಥಿಯೇಟರ್ ಸಂಖ್ಯೆ 462ಕ್ಕೆ ಏರಿಕೆ ಆಗಿದೆ. ಈ ಮೂಲಕ ‘ಕಾಟೇರ’ನ ಅಧಿಪತ್ಯ ಹೆಚ್ಚುತ್ತಿದೆ. ‘ಕಾಟೇರ’ ಚಿತ್ರದ ಅಬ್ಬರದ ಎದುರು ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರ ಕಡಿಮೆ ಆಗಿದೆ.

‘ಕಾಟೇರ’ ಗಳಿಕೆ ವಿವರ..

ಮೊದಲ ದಿನ ಅಂದರೆ ಡಿಸೆಂಬರ್ 29ರಂದು ಕಾಟೇರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಡಿಸೆಂಬರ್ 30ರಂದು 17.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಡಿಸೆಂಬರ್ 31ರಂದು 20.94 ಕೋಟಿ ರೂ., ಜನವರಿ 1ರಂದು 18.26 ಕೋಟಿ ರೂ., ಜನವರಿ 2ರಂದು 9.24 ಕೋಟಿ ರೂ., ಜನವರಿ 3ರಂದು 9.78 ಕೋಟಿ ರೂ., ಜನವರಿ 4ರಂದು 9.52 ಕೋಟಿ ರೂ. ಬಾಚಿಕೊಂಡಿತು. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 104.5 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: Kaatera Movie: 100 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಕಾಟೇರ’; ಮಾರಾಟ ಆದ ಟಿಕೆಟ್​ಗಳೆಷ್ಟು?

ಪಾತ್ರವರ್ಗ..

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ಆರಾಧನಾ ರಾಮ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ಶ್ರುತಿ, ವೈಜನಾಥ್ ಬಿರಾದಾರ್ ಮೊದಲಾದವರು ಸಿನಿಮಾದಲ್ಲಿ  ನಟಿಸಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಜಾತಿ ಪದ್ಧತಿ, ರೈತರ ಕಷ್ಟಗಳು ಮತ್ತಿತ್ಯಾದಿ ಸಮಸ್ಯೆಗಳ ಬಗ್ಗೆ ಸಿನಿಮಾ ಬೆಳಕು ಚೆಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ