AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Movie: ಆರನೇ ವಾರವೂ ಮುನ್ನುಗ್ಗುತ್ತಿದೆ ‘ಕಾಟೇರ’; ಒಟಿಟಿಗೆ ಕಾಲಿಡೋದು ಯಾವಾಗ?

ರಾಜ್ಯಾದ್ಯಂತ ಈಗಲೂ ‘ಕಾಟೇರ’ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ದರ್ಶನ್ ಅವರನ್ನು ಎರಡು ಶೇಡ್​ನ ಪಾತ್ರದಲ್ಲಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಒಮ್ಮೆ ಸಿನಿಮಾ ನೋಡಿದ ಫ್ಯಾನ್ಸ್ ಮರಳಿ ಮರಳಿ ಥಿಯೇಟರ್​ಗೆ ಬರುತ್ತಿದ್ದಾರೆ. ಇದರಿಂದ ಚಿತ್ರದ ಗಳಿಕೆ ಹೆಚ್ಚಿದೆ.

Kaatera Movie: ಆರನೇ ವಾರವೂ ಮುನ್ನುಗ್ಗುತ್ತಿದೆ ‘ಕಾಟೇರ’; ಒಟಿಟಿಗೆ ಕಾಲಿಡೋದು ಯಾವಾಗ?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Feb 02, 2024 | 11:10 AM

Share

‘ಕಾಟೇರ’ ಸಿನಿಮಾ (Kaatera Movie) ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಆದಾಗ್ಯೂ ಸಿನಿಮಾ ಅಬ್ಬರ ಕಡಿಮೆ ಆಗುತ್ತಿಲ್ಲ. ‘ಕಾಟೇರ’ ರಿಲೀಸ್ ಆದ ಬಳಿಕ ಹಲವು ಚಿತ್ರಗಳು ರಿಲೀಸ್ ಆದವು. ಆದಾಗ್ಯೂ ಹಲವು ಥಿಯೇಟರ್​​ಗಳಲ್ಲಿ ‘ಕಾಟೇರ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಆರನೇ ವಾರಕ್ಕೆ ಕಾಲಿಟ್ಟಿರೋ ‘ಕಾಟೇರ’ ದಾಖಲೆ ಬರೆಯಲು ರೆಡಿ ಆಗಿದೆ. ಈಗಾಗಲೇ ಚಿತ್ರದ ಗಳಿಕೆ 200 ಕೋಟಿ ರೂಪಾಯಿ ದಾಟಿದ್ದು ಬಾಕ್ಸ್ ಆಫೀಸ್​ನಲ್ಲಿ ಇತಿಹಾಸ ಬರೆದಿದೆ.

ರಾಜ್ಯಾದ್ಯಂತ ಈಗಲೂ ‘ಕಾಟೇರ’ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆರನೇ ವಾರ 196 ಚಿತ್ರಮಂದಿರಗಳಲ್ಲಿ ಮತ್ತು 63 ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಮಾ ಪ್ರದರ್ಶನ ಮುಂದುವರೆಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಅಭಿಮಾನಿಗಳು ‘ಮತ್ತೊಮ್ಮೆ ಕಾಟೇರ’ ಎನ್ನುವ ಟ್ರೆಂಡ್ ಆರಂಭಿಸಿದ್ದರು. ಇದರಿಂದ ಸಿನಿಮಾದ ಗಳಿಕೆ ಹೆಚ್ಚಿತ್ತು. ಈಗಾಗಲೇ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ದೊಡ್ಡ ಗೆಲುವು ಕಂಡಿದ್ದಾರೆ. ಅವರಿಗೆ ಈ ಚಿತ್ರದಿಂದ ಹೊಸ ಸ್ಫೂರ್ತಿ ಸಿಕ್ಕಿದೆ. ಫೆಬ್ರವರಿ 9ರಂದು ಜೀ 5 ಒಟಿಟಿ ಮೂಲಕ ಸಿನಿಮಾ ಪ್ರದರ್ಶನ ಆರಂಭಿಸಲಿದೆ.

‘ಕಾಟೇರ’ ಸಿನಿಮಾ ಕುರಿತ ಟ್ವೀಟ್..

ದರ್ಶನ್ ಅಭಿಮಾನಿಗಳಿಗೆ ‘ಕಾಟೇರ’ ಸಿನಿಮಾ ಇಷ್ಟ ಆಗಿದೆ. ದರ್ಶನ್ ಅವರನ್ನು ಎರಡು ಶೇಡ್​ನ ಪಾತ್ರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಒಮ್ಮೆ ಸಿನಿಮಾ ನೋಡಿದ ಫ್ಯಾನ್ಸ್ ಮರಳಿ ಮರಳಿ ಥಿಯೇಟರ್​ಗೆ ಬರುತ್ತಿದ್ದಾರೆ. ಇದರಿಂದ ಚಿತ್ರದ ಗಳಿಕೆ ಹೆಚ್ಚಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ‘ಕಾಟೇರ’ ಯಶಸ್ಸಿನ ಸಂಭ್ರಮ; ದರ್ಶನ್​ಗೆ ‘ಭೂಮಿಪುತ್ರ’ ಬಿರುದು: ಇಲ್ಲಿದೆ ಲೈವ್​ ವಿಡಿಯೋ..

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು, ಅಚ್ಯುತ್ ಕುಮಾರ್ ಸೇರಿ ದೊಡ್ಡ ಪಾತ್ರವರ್ಗ ಸಿನಿಮಾದಲ್ಲಿ ಕೆಲಸ ಮಾಡಿದೆ. ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಚೌಕ’ ಹಾಗೂ ‘ರಾಬರ್ಟ್’ ಬಳಿಕ ಮತ್ತೊಂದು ಗೆಲುವು ಕಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Fri, 2 February 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ