AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Movie: ಆರನೇ ವಾರವೂ ಮುನ್ನುಗ್ಗುತ್ತಿದೆ ‘ಕಾಟೇರ’; ಒಟಿಟಿಗೆ ಕಾಲಿಡೋದು ಯಾವಾಗ?

ರಾಜ್ಯಾದ್ಯಂತ ಈಗಲೂ ‘ಕಾಟೇರ’ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ದರ್ಶನ್ ಅವರನ್ನು ಎರಡು ಶೇಡ್​ನ ಪಾತ್ರದಲ್ಲಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಒಮ್ಮೆ ಸಿನಿಮಾ ನೋಡಿದ ಫ್ಯಾನ್ಸ್ ಮರಳಿ ಮರಳಿ ಥಿಯೇಟರ್​ಗೆ ಬರುತ್ತಿದ್ದಾರೆ. ಇದರಿಂದ ಚಿತ್ರದ ಗಳಿಕೆ ಹೆಚ್ಚಿದೆ.

Kaatera Movie: ಆರನೇ ವಾರವೂ ಮುನ್ನುಗ್ಗುತ್ತಿದೆ ‘ಕಾಟೇರ’; ಒಟಿಟಿಗೆ ಕಾಲಿಡೋದು ಯಾವಾಗ?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Feb 02, 2024 | 11:10 AM

Share

‘ಕಾಟೇರ’ ಸಿನಿಮಾ (Kaatera Movie) ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಆದಾಗ್ಯೂ ಸಿನಿಮಾ ಅಬ್ಬರ ಕಡಿಮೆ ಆಗುತ್ತಿಲ್ಲ. ‘ಕಾಟೇರ’ ರಿಲೀಸ್ ಆದ ಬಳಿಕ ಹಲವು ಚಿತ್ರಗಳು ರಿಲೀಸ್ ಆದವು. ಆದಾಗ್ಯೂ ಹಲವು ಥಿಯೇಟರ್​​ಗಳಲ್ಲಿ ‘ಕಾಟೇರ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಆರನೇ ವಾರಕ್ಕೆ ಕಾಲಿಟ್ಟಿರೋ ‘ಕಾಟೇರ’ ದಾಖಲೆ ಬರೆಯಲು ರೆಡಿ ಆಗಿದೆ. ಈಗಾಗಲೇ ಚಿತ್ರದ ಗಳಿಕೆ 200 ಕೋಟಿ ರೂಪಾಯಿ ದಾಟಿದ್ದು ಬಾಕ್ಸ್ ಆಫೀಸ್​ನಲ್ಲಿ ಇತಿಹಾಸ ಬರೆದಿದೆ.

ರಾಜ್ಯಾದ್ಯಂತ ಈಗಲೂ ‘ಕಾಟೇರ’ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆರನೇ ವಾರ 196 ಚಿತ್ರಮಂದಿರಗಳಲ್ಲಿ ಮತ್ತು 63 ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಮಾ ಪ್ರದರ್ಶನ ಮುಂದುವರೆಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಅಭಿಮಾನಿಗಳು ‘ಮತ್ತೊಮ್ಮೆ ಕಾಟೇರ’ ಎನ್ನುವ ಟ್ರೆಂಡ್ ಆರಂಭಿಸಿದ್ದರು. ಇದರಿಂದ ಸಿನಿಮಾದ ಗಳಿಕೆ ಹೆಚ್ಚಿತ್ತು. ಈಗಾಗಲೇ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ದೊಡ್ಡ ಗೆಲುವು ಕಂಡಿದ್ದಾರೆ. ಅವರಿಗೆ ಈ ಚಿತ್ರದಿಂದ ಹೊಸ ಸ್ಫೂರ್ತಿ ಸಿಕ್ಕಿದೆ. ಫೆಬ್ರವರಿ 9ರಂದು ಜೀ 5 ಒಟಿಟಿ ಮೂಲಕ ಸಿನಿಮಾ ಪ್ರದರ್ಶನ ಆರಂಭಿಸಲಿದೆ.

‘ಕಾಟೇರ’ ಸಿನಿಮಾ ಕುರಿತ ಟ್ವೀಟ್..

ದರ್ಶನ್ ಅಭಿಮಾನಿಗಳಿಗೆ ‘ಕಾಟೇರ’ ಸಿನಿಮಾ ಇಷ್ಟ ಆಗಿದೆ. ದರ್ಶನ್ ಅವರನ್ನು ಎರಡು ಶೇಡ್​ನ ಪಾತ್ರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಒಮ್ಮೆ ಸಿನಿಮಾ ನೋಡಿದ ಫ್ಯಾನ್ಸ್ ಮರಳಿ ಮರಳಿ ಥಿಯೇಟರ್​ಗೆ ಬರುತ್ತಿದ್ದಾರೆ. ಇದರಿಂದ ಚಿತ್ರದ ಗಳಿಕೆ ಹೆಚ್ಚಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ‘ಕಾಟೇರ’ ಯಶಸ್ಸಿನ ಸಂಭ್ರಮ; ದರ್ಶನ್​ಗೆ ‘ಭೂಮಿಪುತ್ರ’ ಬಿರುದು: ಇಲ್ಲಿದೆ ಲೈವ್​ ವಿಡಿಯೋ..

‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು, ಅಚ್ಯುತ್ ಕುಮಾರ್ ಸೇರಿ ದೊಡ್ಡ ಪಾತ್ರವರ್ಗ ಸಿನಿಮಾದಲ್ಲಿ ಕೆಲಸ ಮಾಡಿದೆ. ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಚೌಕ’ ಹಾಗೂ ‘ರಾಬರ್ಟ್’ ಬಳಿಕ ಮತ್ತೊಂದು ಗೆಲುವು ಕಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Fri, 2 February 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ