AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ
IMDB
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 09, 2023 | 1:39 PM

2023ರ ಮೊದಲ ತಿಂಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’, ದಳಪತಿ ವಿಜಯ್ ನಟನೆಯ ‘ವಾರಿಸು’ (Varisu Movie), ಶಾರುಖ್ ಖಾನ್ ನಟನೆಯ ‘ಜವಾನ್​’ ಮೊದಲಾದ ಚಿತ್ರಗಳು ರಿಲೀಸ್ ಆಗುತ್ತಿವೆ. ಇನ್ನು, ಈ ವರ್ಷ ಹಲವು ದೊಡ್ಡ ಬಜೆಟ್​​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಪಟ್ಟಿಯನ್ನು ಐಎಂಡಿಬಿ ರಿಲೀಸ್ ಮಾಡಿದೆ. ಹಲವು ಚಿತ್ರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ‘ಪುಷ್ಪ 2’ ಸಿನಿಮಾ ಇದೆ. ಈ ಚಿತ್ರದ ಶೂಟಿಂಗ್ ಇನ್ನೂ ಸರಿಯಾಗಿ ಆರಂಭ ಆಗಿಲ್ಲ. ಈ ಚಿತ್ರ ಈ ವರ್ಷ ತೆರೆಗೆ ಬರುತ್ತದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಪಕ್ಕಾ ಆಗಿಲ್ಲ.

ಟಾಪ್ 20ರಲ್ಲಿ ಕನ್ನಡದ ಒಂದೇ ಸಿನಿಮಾ

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಕನ್ನಡದ ಹಲವು ಚಿತ್ರಗಳು ಗೆದ್ದಿವೆ. ಈ ವರ್ಷ ಕನ್ನಡದ ಒಂದು ಸಿನಿಮಾ ಮಾತ್ರ ಐಎಂಡಿಬಿಯ ಟಾಪ್ 20ಯಲ್ಲಿ ಇದೆ. ಉಪೇಂದ್ರ ಹಾಗೂ ಸುದೀಪ್​ ನಟನೆಯ ‘ಕಬ್ಜ’ ಏಳನೇ ಸ್ಥಾನದಲ್ಲಿದೆ. ಈ ಚಿತ್ರದ ಟೀಸರ್ ಈಗಾಗಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ಟಾಪ್​ 20 ಚಿತ್ರಗಳಿವು

  1. ಪಠಾಣ್​
  2. ಪುಷ್ಪ 2
  3. ಜವಾನ್
  4. ಆದಿಪುರುಷ್
  5. ಸಲಾರ್
  6. ವಾರಿಸು
  7. ಕಬ್ಜ
  8. ದಳಪತಿ 67
  9. ದಿ ಆರ್ಚೀಸ್​
  10. ಡಂಕಿ
  11. ಟೈಗರ್ 3
  12. ಕಿಸಿ ಕ ಭಾಯ್ ಕಿಸಿ ಕಿ ಜಾನ್
  13. ತುನಿವು
  14. ಅನಿಮಲ್
  15. ಏಜೆಂಟ್
  16. ಇಂಡಿಯನ್ 2
  17. ವಾಡಿವಾಸಲ್
  18. ಶೆಹಜಾದಾ
  19. ಬಡೆ ಮಿಯಾ ಚೋಟೆ ಮಿಯಾ
  20. ಭೋಲಾ

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Mon, 9 January 23

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ