AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Kabza Movie: ಆರ್. ಚಂದ್ರು ನಿರ್ದೇಶನ ಮಾಡುತ್ತಿರುವ ‘ಕಬ್ಜ’ ಸಿನಿಮಾದ ಚಿತ್ರೀಕರಣದ ವೇಳೆ ಸಹನಟ ರಾಡ್​ ಬೀಸಿದಾಗ ಉಪೇಂದ್ರ ತಪ್ಪಿಸಿಕೊಳ್ಳಬೇಕಿತ್ತು. ಆದರೆ ತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣ ರಿಯಲ್​ ಸ್ಟಾರ್​ ತಲೆಗೆ ಗಾಯವಾಗಿದೆ.

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ
ಉಪೇಂದ್ರ - ಕಬ್ಜ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Apr 03, 2021 | 10:46 AM

‘ರಿಯಲ್​ ಸ್ಟಾರ್​’ ಉಪೇಂದ್ರ ಅಭಿಮಾನಿಗಳ ಪಾಲಿಗೆ ಇದು ಬ್ಯಾಡ್​ ನ್ಯೂಸ್​. ಬಹುನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್​ ಸಮಯದಲ್ಲಿ ಅವಘಡ ಸಂಭವಿಸಿದ್ದು, ನಟ ಉಪೇಂದ್ರ ತಲೆಗೆ ಪೆಟ್ಟಾಗಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಫೈಟಿಂಗ್​ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ಸಹ ನಟ ಮಾಡಿದ ತಪ್ಪಿನಿಂದಾಗಿ ಉಪೇಂದ್ರ ಗಾಯಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ಆರ್​. ಚಂದ್ರು ಅವರು ‘ಕಬ್ಜ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ವಿಭಿನ್ನ ಗೆಟಪ್​ ಇದೆ. ಅಂಡರ್​ವರ್ಲ್ಡ್​ ಕಥಾಹಂದರ ಇರುವುದರಿಂದ ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರಲಿವೆ. ಅದಕ್ಕಾಗಿ ಹಲವು ಬಗೆಯ ಸೆಟ್​ಗಳನ್ನು ಹಾಕಲಾಗಿದೆ. ಮಿನರ್ವ ಮಿಲ್​ನಲ್ಲಿ ಆಯಿಲ್​ ಮಾರ್ಕೆಟ್​ನ ಸೆಟ್​ ಹಾಕಿ ಚಿತ್ರೀಕರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಉಪೇಂದ್ರ ಅವರಿಗೆ ಪೆಟ್ಟಾಗಿದೆ.

ಸಾಹಸ ನಿರ್ದೇಶಕ ರವಿವರ್ಮಾ ಅವರ ನೇತೃತ್ವದಲ್ಲಿ ಫೈಟಿಂಗ್​ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಹನಟ ರಾಡ್​ ಬೀಸಿದಾಗ ಉಪೇಂದ್ರ ತಪ್ಪಿಸಿಕೊಳ್ಳಬೇಕಿತ್ತು. ಆದರೆ ತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣ ರಿಯಲ್​ ಸ್ಟಾರ್​ ತಲೆಗೆ ಗಾಯವಾಗಿದೆ. ಪೆಟ್ಟಾಗಿದ್ದರೂ ಕೂಡ ಅವರು ಶೂಟಿಂಗ್​ ಮುಗಿಸಿ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಡಿಫರೆಂಟ್​ ಆದ ಪೋಸ್ಟರ್​ಗಳ ಮೂಲಕವೇ ಕಬ್ಜ ಸಿನಿಮಾ ಗಮನ ಸೆಳೆದಿದೆ. ಜಗಪತಿ ಬಾಬು ಅವರಂತಹ ಘಟಾನುಘಟಿ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ಕಿಚ್ಚ ಸುದೀಪ್​ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ. ರವಿ ಬಸ್ರೂರು ಸಂಗೀತ ನಿರ್ದೇಶನ ಹಾಗೂ ಎ.ಜೆ. ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಉಪೇಂದ್ರ ಗಾಯಗೊಂಡಿರುವುದರಿಂದ ತಂಡಕ್ಕೆ ಮತ್ತೆ ವಿಘ್ನ ಎದುರಾದಂತಾಗಿದೆ.

ಇದನ್ನೂ ಓದಿ: ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ