AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

Kabza Movie: ಆರ್. ಚಂದ್ರು ನಿರ್ದೇಶನ ಮಾಡುತ್ತಿರುವ ‘ಕಬ್ಜ’ ಸಿನಿಮಾದ ಚಿತ್ರೀಕರಣದ ವೇಳೆ ಸಹನಟ ರಾಡ್​ ಬೀಸಿದಾಗ ಉಪೇಂದ್ರ ತಪ್ಪಿಸಿಕೊಳ್ಳಬೇಕಿತ್ತು. ಆದರೆ ತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣ ರಿಯಲ್​ ಸ್ಟಾರ್​ ತಲೆಗೆ ಗಾಯವಾಗಿದೆ.

Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ
ಉಪೇಂದ್ರ - ಕಬ್ಜ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Apr 03, 2021 | 10:46 AM

Share

‘ರಿಯಲ್​ ಸ್ಟಾರ್​’ ಉಪೇಂದ್ರ ಅಭಿಮಾನಿಗಳ ಪಾಲಿಗೆ ಇದು ಬ್ಯಾಡ್​ ನ್ಯೂಸ್​. ಬಹುನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್​ ಸಮಯದಲ್ಲಿ ಅವಘಡ ಸಂಭವಿಸಿದ್ದು, ನಟ ಉಪೇಂದ್ರ ತಲೆಗೆ ಪೆಟ್ಟಾಗಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಫೈಟಿಂಗ್​ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ಸಹ ನಟ ಮಾಡಿದ ತಪ್ಪಿನಿಂದಾಗಿ ಉಪೇಂದ್ರ ಗಾಯಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ಆರ್​. ಚಂದ್ರು ಅವರು ‘ಕಬ್ಜ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ವಿಭಿನ್ನ ಗೆಟಪ್​ ಇದೆ. ಅಂಡರ್​ವರ್ಲ್ಡ್​ ಕಥಾಹಂದರ ಇರುವುದರಿಂದ ಆ್ಯಕ್ಷನ್​ ದೃಶ್ಯಗಳು ಭರ್ಜರಿಯಾಗಿ ಇರಲಿವೆ. ಅದಕ್ಕಾಗಿ ಹಲವು ಬಗೆಯ ಸೆಟ್​ಗಳನ್ನು ಹಾಕಲಾಗಿದೆ. ಮಿನರ್ವ ಮಿಲ್​ನಲ್ಲಿ ಆಯಿಲ್​ ಮಾರ್ಕೆಟ್​ನ ಸೆಟ್​ ಹಾಕಿ ಚಿತ್ರೀಕರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಉಪೇಂದ್ರ ಅವರಿಗೆ ಪೆಟ್ಟಾಗಿದೆ.

ಸಾಹಸ ನಿರ್ದೇಶಕ ರವಿವರ್ಮಾ ಅವರ ನೇತೃತ್ವದಲ್ಲಿ ಫೈಟಿಂಗ್​ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಹನಟ ರಾಡ್​ ಬೀಸಿದಾಗ ಉಪೇಂದ್ರ ತಪ್ಪಿಸಿಕೊಳ್ಳಬೇಕಿತ್ತು. ಆದರೆ ತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣ ರಿಯಲ್​ ಸ್ಟಾರ್​ ತಲೆಗೆ ಗಾಯವಾಗಿದೆ. ಪೆಟ್ಟಾಗಿದ್ದರೂ ಕೂಡ ಅವರು ಶೂಟಿಂಗ್​ ಮುಗಿಸಿ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಡಿಫರೆಂಟ್​ ಆದ ಪೋಸ್ಟರ್​ಗಳ ಮೂಲಕವೇ ಕಬ್ಜ ಸಿನಿಮಾ ಗಮನ ಸೆಳೆದಿದೆ. ಜಗಪತಿ ಬಾಬು ಅವರಂತಹ ಘಟಾನುಘಟಿ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ಕಿಚ್ಚ ಸುದೀಪ್​ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ. ರವಿ ಬಸ್ರೂರು ಸಂಗೀತ ನಿರ್ದೇಶನ ಹಾಗೂ ಎ.ಜೆ. ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಉಪೇಂದ್ರ ಗಾಯಗೊಂಡಿರುವುದರಿಂದ ತಂಡಕ್ಕೆ ಮತ್ತೆ ವಿಘ್ನ ಎದುರಾದಂತಾಗಿದೆ.

ಇದನ್ನೂ ಓದಿ: ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ