AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ‘ಕಬ್ಜ 2’ ಸಿನಿಮಾದಲ್ಲಿ ಪವನ್​ ಕಲ್ಯಾಣ್​? ವೈರಲ್​ ಆಗಿದೆ ಹೊಸ ಪೋಸ್ಟರ್​

R. Chandru | Kabzaa 2: ಆರ್​. ಚಂದ್ರು ಮತ್ತು ಪವನ್​ ಕಲ್ಯಾಣ್​ ಜೊತೆಗಿರುವ ಫೋಟೋ ಇತ್ತೀಚೆಗಷ್ಟೇ ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ‘ಕಬ್ಜ 2’ ಪೋಸ್ಟರ್​ ಹರಿದಾಡುತ್ತಿದೆ.

Pawan Kalyan: ‘ಕಬ್ಜ 2’ ಸಿನಿಮಾದಲ್ಲಿ ಪವನ್​ ಕಲ್ಯಾಣ್​? ವೈರಲ್​ ಆಗಿದೆ ಹೊಸ ಪೋಸ್ಟರ್​
ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​, ಉಪೇಂದ್ರ, ಆರ್​. ಚಂದ್ರು, ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on:Mar 19, 2023 | 12:58 PM

Share

ಕನ್ನಡ ಚಿತ್ರರಂಗದ ಮಾರುಕಟ್ಟೆ ಹಿರಿದಾಗಿದೆ. ಉಪೇಂದ್ರ, ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಬೀಗುತ್ತಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿದ ಪ್ರೇಕ್ಷಕರಿಗೆ ಅಚ್ಚರಿ ಕಾದಿತ್ತು. ‘ಕಬ್ಜ 2’ ಚಿತ್ರ (Kabzaa 2 Movie) ಬರಲಿದೆ ಎಂಬುದು ಈಗ ಬಹಿರಂಗ ಆಗಿದೆ. ಸೀಕ್ವೆಲ್​ ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಆರ್​. ಚಂದ್ರು ಅವರು ‘ಕಬ್ಜ 2’ ಸಿನಿಮಾಗೆ ಬೇರೆ ಭಾಷೆಯ ಚಿತ್ರರಂಗದ ಕಲಾವಿದರನ್ನು ಕರೆತರಲಿದ್ದಾರೆ ಎಂಬುದಕ್ಕೆ ಸುಳಿವು ಸಿಕ್ಕಿದೆ. ಅಚ್ಚರಿ ಎಂದರೆ, ‘ಕಬ್ಜ’ ಸೀಕ್ವೆಲ್​ನಲ್ಲಿ ಟಾಲಿವುಡ್​ನ ‘ಪವರ್​ ಸ್ಟಾರ್​’ ಪವನ್​ ಕಲ್ಯಾಣ್​ (Pawan Kalyan) ಅವರು ನಟಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಅದಕ್ಕೆ ಪೂರಕ ಆಗುವಂತೆ ಒಂದು ಪೋಸ್ಟರ್ ಕೂಡ ವೈರಲ್​ ಆಗಿದೆ.

‘ಕಬ್ಜ’ ಪೋಸ್ಟರ್​ಗಳಲ್ಲಿ ಶಿವರಾಜ್​ಕುಮಾರ್​, ಕಿಚ್ಚ ಸುದೀಪ್​, ಉಪೇಂದ್ರ ಅವರ ಫೋಟೋ ರಾರಾಜಿಸಿತ್ತು. ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ‘ಕಬ್ಜ 2’ ಪೋಸ್ಟರ್​ನಲ್ಲಿ ಪವನ್​ ಕಲ್ಯಾಣ್​ ಕೂಡ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ. ಒಟ್ಟಿನಲ್ಲಿ ಈ ಪೋಸ್ಟರ್​ ನೋಡಿದ ಬಳಿಕ ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಾಗಿದೆ.

ಇದನ್ನೂ ಓದಿ
Image
Kabzaa 2: ಕಬ್ಜ 2 ಗೆ ಆರ್ ಚಂದ್ರು ಮಗನೇ ಹೀರೋ! ಇದೇನಿದು ಉಪ್ಪಿ ಹೇಳಿದ ಹೊಸ ಸುದ್ದಿ
Image
Kabzaa 2: ನಿರೀಕ್ಷೆ ಮೂಡಿಸಿದ ‘ಕಬ್ಜ 2’; ಕಥೆ ಇನ್ನೂ ಬಾಕಿ ಇದೆ ಎಂದ ಆರ್. ಚಂದ್ರು
Image
Kabzaa Twitter Review: ‘ಕಬ್ಜ’ ನೋಡಿ ಏನು ಹೇಳ್ತಿದ್ದಾರೆ ಫಸ್ಟ್​ ಡೇ ಪ್ರೇಕ್ಷಕರು? ಇಲ್ಲಿದೆ ಟ್ವಿಟರ್​ ವಿಮರ್ಶೆ
Image
Kabzaa Movie Review: 1970ರ ಕಾಲಕ್ಕೆ ಕರೆದೊಯ್ಯುವ ‘ಕಬ್ಜ’; ತೆರೆ ಹಿಂದಿನ ಹೀರೋಗಳ ಅದ್ದೂರಿ ಸಿನಿಮಾ

ಇದನ್ನೂ ಓದಿ: Kabzaa Collection: 100 ಕೋಟಿ ರೂಪಾಯಿ ಬಾಚಿದ ‘ಕಬ್ಜ’; 2ನೇ ದಿನಕ್ಕೆ ಕಮಾಲ್​ ಮಾಡಿದ ಉಪ್ಪಿ-ಆರ್​. ಚಂದ್ರು ಸಿನಿಮಾ

ಸೂಪರ್​ ಹಿಟ್​ ಆದ ಸಿನಿಮಾಗೆ ಸೀಕ್ವೆಲ್​ ಮಾಡುವಾಗ ಪಾತ್ರವರ್ಗ ಹಿರಿದಾಗುವುದು ಸಹಜ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರವೇ ಅದಕ್ಕೆ ಸಾಕ್ಷಿ. ಈಗ ‘ಕಬ್ಜ 2’ ಕೂಡ ಅದೇ ಮಾರ್ಗದಲ್ಲಿ ಸಾಗುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ನಿರ್ದೇಶಕ ಆರ್​. ಚಂದ್ರು ಅವರು ಪವನ್​ ಕಲ್ಯಾಣ್​ ಜೊತೆ ಇರುವ ಫೋಟೋ ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಈ ಸುದ್ದಿ ಹಬ್ಬಿರುವುದರಿಂದ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: Upendra: ‘ಕಬ್ಜ 2’ ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು? ಆರ್​. ಚಂದ್ರು ಎದುರು ನಟರ ಲಿಸ್ಟ್​ ನೀಡಿದ ಉಪೇಂದ್ರ

ಇಂದು (ಮಾರ್ಚ್​ 17) ಸಂಜೆ 4.30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ಕಬ್ಜ’ ಸಿನಿಮಾದ ಸಕ್ಸಸ್​ ಮೀಟ್​ ನಡೆಯಲಿದೆ. ಆ ವೇಳೆ ಹಲವು ವಿಚಾರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ‘ಕಬ್ಜ 2’ ಸಿನಿಮಾದಲ್ಲಿ ಪವನ್​ ಕಲ್ಯಾಣ್​ ನಟಿಸುತ್ತಾರೋ ಇಲ್ಲವೋ ಎಂಬ ಪ್ರಶ್ನೆಗೆ ನಿರ್ದೇಶಕ ಆರ್​. ಚಂದ್ರು ಉತ್ತರಿಸುವ ಸಾಧ್ಯತೆ ಇದೆ.

ಮೂರನೇ ದಿನ ಕೂಡ ಎಲ್ಲ ಕಡೆಗಳಲ್ಲಿ ‘ಕಬ್ಜ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರಿಂದ ಚಿತ್ರತಂಡಕ್ಕೆ ಭರ್ಜರಿ ಲಾಭ ಆಗಿದೆ. ಉಪೇಂದ್ರ ಅವರು ವೃತ್ತಿಜೀವನದ ಬಹುದೊಡ್ಡ ಸಿನಿಮಾವಾಗಿ ಚಿತ್ರ ಹೊರಹೊಮ್ಮಿದೆ. ಪರಭಾಷೆಯ ಸೆಲೆಬ್ರಿಟಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Sun, 19 March 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ