AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಚೆನ್ನೈನಲ್ಲೂ ಧೂಳೆಬ್ಬಿಸಲಿದೆ ಕನ್ನಡದ ‘ಕಬ್ಜ’; ಹೊಸ ಹಾಡು ಬಿಡುಗಡೆಗೆ ಸಜ್ಜಾದ ಆರ್​. ಚಂದ್ರು

Kabzaa Movie Songs | R Chandru: ಫೆಬ್ರವರಿ 16ರಂದು ‘ಕಬ್ಜ’ ಚಿತ್ರತಂಡ ಚೆನ್ನೈಗೆ ತೆರಳಲಿದೆ. ಅಂದು ಸಂಜೆ ಗ್ರ್ಯಾಂಡ್​ ಇವೆಂಟ್​ ಮೂಲಕ ಎರಡನೇ ಹಾಡು ರಿಲೀಸ್​ ಆಗಲಿದೆ.

Shriya Saran: ಚೆನ್ನೈನಲ್ಲೂ ಧೂಳೆಬ್ಬಿಸಲಿದೆ ಕನ್ನಡದ ‘ಕಬ್ಜ’; ಹೊಸ ಹಾಡು ಬಿಡುಗಡೆಗೆ ಸಜ್ಜಾದ ಆರ್​. ಚಂದ್ರು
ಶ್ರೀಯಾ ಶರಣ್, ಆರ್. ಚಂದ್ರು
ಮದನ್​ ಕುಮಾರ್​
|

Updated on: Feb 15, 2023 | 7:45 AM

Share

ನಿರ್ದೇಶಕ ಆರ್​. ಚಂದ್ರು (R Chandru) ಅವರು ‘ಕಬ್ಜ’ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ತೆರೆಕಾಣಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶಾದ್ಯಂತ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಉಪೇಂದ್ರ (Upendra), ಕಿಚ್ಚ ಸುದೀಪ್​, ಶ್ರೀಯಾ ಶರಣ್​ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಚಿತ್ರದ ಬಗ್ಗೆ ಸಿನಿಪ್ರಿಯರಿಗೆ ನಿರೀಕ್ಷೆ ಇದೆ. ದೇಶದ ಪ್ರಮುಖ ನಗರಗಳಲ್ಲಿ ‘ಕಬ್ಜ’ (Kabzaa Movie) ಹಾಡುಗಳನ್ನು ರಿಲೀಸ್​ ಮಾಡಲಾಗುತ್ತಿದೆ. ಹೈದರಾಬಾದ್​ನಲ್ಲಿ ಟೈಟಲ್​ ಟ್ರ್ಯಾಕ್​ ಬಿಡುಗಡೆ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈಗ ಚೆನ್ನೈನಲ್ಲೂ ಅದೇ ರೀತಿ ದೊಡ್ಡ ಇವೆಂಟ್​ ಮಾಡಿ, ಹೊಸ ಹಾಡು ರಿಲೀಸ್​ ಮಾಡಲು ಆರ್​. ಚಂದ್ರು ಸಜ್ಜಾಗಿದ್ದಾರೆ.

ಫೆಬ್ರವರಿ 16ರಂದು ಇಡೀ ‘ಕಬ್ಜ’ ತಂಡ ಚೆನ್ನೈಗೆ ತೆರಳಲಿದೆ. ಅಂದು ಸಂಜೆ ಗ್ರ್ಯಾಂಡ್​ ಇವೆಂಟ್​ ಮೂಲಕ ಎರಡನೇ ಹಾಡು ರಿಲೀಸ್​ ಆಗಲಿದೆ. ತಮಿಳು ಚಿತ್ರರಂಗದ ಖ್ಯಾತ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ. ಚಿತ್ರದ ನಾಯಕಿ ಶ್ರೀಯಾ ಶರಣ್​ ಅವರ ಪಾತ್ರ ಮೇಲೆ ಚಿತ್ರಿತವಾಗಿರುವ ಈ ಹಾಡು ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
Image
Kabzaa Movie: ‘ಕಬ್ಜ’ ಆಡಿಯೋ ರಿಲೀಸ್​ಗೆ ಶಿಡ್ಲಘಟ್ಟದಲ್ಲಿ ಸಿದ್ಧವಾಗ್ತಿದೆ ಬೃಹತ್​ ವೇದಿಕೆ; ಸರ್ವರಿಗೂ ಆಹ್ವಾನ ನೀಡಿದ ಚಿತ್ರತಂಡ
Image
Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ
Image
‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

ಇದನ್ನೂ ಓದಿ: ‘ಕಬ್ಜ’ ಬೆಡಗಿ ಶ್ರೀಯಾ ಶರಣ್​ ಸುಂದರ ಫೋಟೋಸ್​

ರವಿ ಬಸ್ರೂರು ಅವರು ‘ಕಬ್ಜ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇದು ಈ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಬಂತು. ಬಾಲಿವುಡ್​ ಸಿನಿಮಾಗಳಿಗೂ ಅವರು ಕೆಲಸ ಮಾಡುತ್ತಿದ್ದಾರೆ. ‘ಕಬ್ಜ’ ಸಿನಿಮಾದ ಶೀರ್ಷಿಕೆ ಗೀತೆ ಈಗಾಗಲೇ ಸೌಂಡು ಮಾಡಿದೆ. ಟೀಸರ್​ನಲ್ಲಿನ ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ.

ಶಿಡ್ಲಘಟ್ಟದಲ್ಲಿ ಫೆಬ್ರವರಿ 26ರಂದು ‘ಕಬ್ಜ’ ಆಡಿಯೋ ರಿಲೀಸ್​:

ಪುನೀತ್ ರಾಜ್​ಕುಮಾರ್​​ ಜನ್ಮದಿನವಾದ ಮಾರ್ಚ್​ 17ರಂದು ವಿಶ್ವಾದ್ಯಂತ ‘ಕಬ್ಜ’ ತೆರೆಕಾಣಲಿದೆ. ಬಿಡುಗಡೆಗೆ ಇನ್ನು ಒಂದು ತಿಂಗಳು ಬಾಕಿ ಇದ್ದು, ಪೂರ್ಣ ಪ್ರಮಾಣದಲ್ಲಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಫೆಬ್ರವರಿ 26ರಂದು ಶಿಡ್ಲಘಟ್ಟದಲ್ಲಿ ‘ಕಬ್ಜ’ ಆಡಿಯೋ ರಿಲೀಸ್ ಆಗಲಿದೆ. ಅಂದು ಸಂಜೆ 6 ಗಂಟೆಗೆ ಆರಂಭ ಆಗುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ಚಿತ್ರರಂಗದ ಹಲವು ದಿಗ್ಗಜ ನಟರಿಗೆ ಆಹ್ವಾನ ನೀಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ