AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ

‘ಕಬ್ಜ’ ಚಿತ್ರದ ಬಗ್ಗೆ ಹಲವರಿಂದ ಟೀಕೆಗಳು ವ್ಯಕ್ತವಾಗಿದ್ದವು. ‘ಈ ಚಿತ್ರದ ವಿಶ್ಯುವಲ್ಸ್ ಕೆಜಿಎಫ್ ಸಿನಿಮಾ ರೀತಿಯೇ ಇದೆ’ ಎಂದು ಅನೇಕರು ಟೀಕೆ ಮಾಡಿದ್ದರು. ಇದಕ್ಕೆ ಟೀಂ ಕಡೆಯಿಂದ ಸ್ಪಷ್ಟನೆ ಬಂದಿತ್ತು. ‘

‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
ಆರ್​ ಚಂದ್ರು-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Feb 01, 2023 | 9:30 AM

Share

‘ಕಬ್ಜ’ ಸಿನಿಮಾಗೆ (Kabzaa Movie) ಪ್ರಚಾರ ನೀಡುವ ಕೆಲಸ ಆರಂಭ ಆಗಿದೆ. ಮಾರ್ಚ್​ 17ರಂದು ಈ ಚಿತ್ರ ಕನ್ನಡ, ಹಿಂದಿ ಸೇರಿ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ರಮೋಷನ್ ಕಾರ್ಯಗಳು ನಡೆಯಲಿವೆ. ಟ್ರೇಲರ್ ರಿಲೀಸ್​ಗೂ ಮೊದಲು ಬೇರೆ ರಾಜ್ಯದ ಹಲವು ನಗರಗಳಲ್ಲಿ ಸಿನಿಮಾದ ಸಾಂಗ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಈಗ ‘ಕಬ್ಜ ಸಿನಿಮಾದ ಹಕ್ಕುಗಳು ಮಾರಾಟ ಆಗಿರುವ ಬಗ್ಗೆ ನಿರ್ದೇಶಕ ಆರ್. ಚಂದ್ರು (R. Chandru) ಅವರು ಮಾತನಾಡಿದ್ದಾರೆ.

‘ಕಬ್ಜ’ ಚಿತ್ರದ ಬಗ್ಗೆ ಹಲವರಿಂದ ಟೀಕೆಗಳು ವ್ಯಕ್ತವಾಗಿದ್ದವು. ‘ಈ ಚಿತ್ರದ ವಿಶ್ಯುವಲ್ಸ್ ಕೆಜಿಎಫ್ ಸಿನಿಮಾ ರೀತಿಯೇ ಇದೆ’ ಎಂದು ಅನೇಕರು ಟೀಕೆ ಮಾಡಿದ್ದರು. ಇದಕ್ಕೆ ಟೀಂ ಕಡೆಯಿಂದ ಸ್ಪಷ್ಟನೆ ಬಂದಿತ್ತು. ‘ಕೆಜಿಎಫ್ ರೀತಿ ಇರುವುದಕ್ಕೆ ಕಬ್ಜ ಸಿನಿಮಾಗೆ ಒಟಿಟಿ ಕಡೆಯಿಂದ ದೊಡ್ಡ ಆಫರ್ ಬಂದಿದೆ’ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಆರ್. ಚಂದ್ರು ಕಡೆಯಿಂದ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.

‘ನಿರ್ದೇಶಕನಾಗಿ, ನಿರ್ಮಾಪಕನಾಗಿ ಖುಷಿಯಾಗಿದ್ದೇನೆ. ಅಮೇಜಾನ್ ಪ್ರೈಮ್ ವಿಡಿಯೋದವರು ಕಬ್ಜ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದ್ದಾರೆ. ದೊಡ್ಡ ಮೊತ್ತಕ್ಕೆ ಕಬ್ಜ ಹಕ್ಕು ಮಾರಾಟ ಆಗಿದೆ. ಅವರು ಕಣ್ಣುಮುಚ್ಚಿಕೊಂಡು ಸಿನಿಮಾನ ಖರೀದಿಸಿಲ್ಲ. ನಾನು ಕಂಟೆಂಟ್​​ಗಳನ್ನು ಕಟ್ ಮಾಡಿ, ಎಡಿಟ್ ಮಾಡಿಸಿ ಅವರ ಮುಂದೆ ಇಟ್ಟಿದ್ದೇನೆ. ಇದು ಕಬ್ಜ ಎಂದು ತೋರಿಸಿದ್ದೇನೆ. ಆಮೇಲೆ ಅವರು ಖರೀದಿ ಮಾಡಿದ್ದಾರೆ’ ಎಂದಿದ್ದಾರೆ ಚಂದ್ರು.

‘ಕನ್ನಡದ ಹಂಚಿಕೆ ಬಗ್ಗೆ ನಾನು ಇನ್ನೂ ಮಾತುಕತೆ ಆಗಿಲ್ಲ. ಹಿಂದಿಯಲ್ಲಿ ಆನಂದ್ ಪಂಡಿತ್ ಹಂಚಿಕೆ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಸುಧಾಕರ್ ರೆಡ್ಡಿ, ಮಲಯಾಳಂನಲ್ಲಿ ಬಾಂಬೆ ರಮೇಶ್, ತಮಿಳಿನಲ್ಲಿ ಲೈಕಾ ಅವರ ಜತೆ ಮಾತುಕತೆ ನಡೆಯುತ್ತಿದೆ. ನಾವು ಮೂರು ವರ್ಷ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಹೀಗಾಗಿ, ನಮ್ಮ ರೇಟ್​​ಗೆ ಅವರು ಬಂದರೆ ಮಾತ್ರ ನಾವು ಹಂಚಿಕೆ ಹಕ್ಕನ್ನು ನೀಡ್ತೀವಿ’ ಎಂದು ಚಂದ್ರು ಹೇಳಿದ್ದಾರೆ.

ಇದನ್ನೂ ಓದಿ: Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ

‘ಕಬ್ಜ’ ಸಿನಿಮಾಗೆ ಆರ್​.ಚಂದ್ರು ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್​. ಶ್ರೀಯಾ ಶರಣ್​ ಮೊದಲಾದವರು ನಟಿಸಿದ್ದಾರೆ. ಪುನೀತ್ ರಾಜ್​ಕುಮಾರ್ ಜನ್ಮದಿನದ ಪ್ರಯುಕ್ತ ಈ ಸಿನಿಮಾ ಮಾರ್ಚ್​ 17ರಂದು ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Wed, 1 February 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ