AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ

‘ಕಬ್ಜ’ ಚಿತ್ರದ ಬಗ್ಗೆ ಹಲವರಿಂದ ಟೀಕೆಗಳು ವ್ಯಕ್ತವಾಗಿದ್ದವು. ‘ಈ ಚಿತ್ರದ ವಿಶ್ಯುವಲ್ಸ್ ಕೆಜಿಎಫ್ ಸಿನಿಮಾ ರೀತಿಯೇ ಇದೆ’ ಎಂದು ಅನೇಕರು ಟೀಕೆ ಮಾಡಿದ್ದರು. ಇದಕ್ಕೆ ಟೀಂ ಕಡೆಯಿಂದ ಸ್ಪಷ್ಟನೆ ಬಂದಿತ್ತು. ‘

‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ
ಆರ್​ ಚಂದ್ರು-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Feb 01, 2023 | 9:30 AM

Share

‘ಕಬ್ಜ’ ಸಿನಿಮಾಗೆ (Kabzaa Movie) ಪ್ರಚಾರ ನೀಡುವ ಕೆಲಸ ಆರಂಭ ಆಗಿದೆ. ಮಾರ್ಚ್​ 17ರಂದು ಈ ಚಿತ್ರ ಕನ್ನಡ, ಹಿಂದಿ ಸೇರಿ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ರಮೋಷನ್ ಕಾರ್ಯಗಳು ನಡೆಯಲಿವೆ. ಟ್ರೇಲರ್ ರಿಲೀಸ್​ಗೂ ಮೊದಲು ಬೇರೆ ರಾಜ್ಯದ ಹಲವು ನಗರಗಳಲ್ಲಿ ಸಿನಿಮಾದ ಸಾಂಗ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಈಗ ‘ಕಬ್ಜ ಸಿನಿಮಾದ ಹಕ್ಕುಗಳು ಮಾರಾಟ ಆಗಿರುವ ಬಗ್ಗೆ ನಿರ್ದೇಶಕ ಆರ್. ಚಂದ್ರು (R. Chandru) ಅವರು ಮಾತನಾಡಿದ್ದಾರೆ.

‘ಕಬ್ಜ’ ಚಿತ್ರದ ಬಗ್ಗೆ ಹಲವರಿಂದ ಟೀಕೆಗಳು ವ್ಯಕ್ತವಾಗಿದ್ದವು. ‘ಈ ಚಿತ್ರದ ವಿಶ್ಯುವಲ್ಸ್ ಕೆಜಿಎಫ್ ಸಿನಿಮಾ ರೀತಿಯೇ ಇದೆ’ ಎಂದು ಅನೇಕರು ಟೀಕೆ ಮಾಡಿದ್ದರು. ಇದಕ್ಕೆ ಟೀಂ ಕಡೆಯಿಂದ ಸ್ಪಷ್ಟನೆ ಬಂದಿತ್ತು. ‘ಕೆಜಿಎಫ್ ರೀತಿ ಇರುವುದಕ್ಕೆ ಕಬ್ಜ ಸಿನಿಮಾಗೆ ಒಟಿಟಿ ಕಡೆಯಿಂದ ದೊಡ್ಡ ಆಫರ್ ಬಂದಿದೆ’ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಆರ್. ಚಂದ್ರು ಕಡೆಯಿಂದ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.

‘ನಿರ್ದೇಶಕನಾಗಿ, ನಿರ್ಮಾಪಕನಾಗಿ ಖುಷಿಯಾಗಿದ್ದೇನೆ. ಅಮೇಜಾನ್ ಪ್ರೈಮ್ ವಿಡಿಯೋದವರು ಕಬ್ಜ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದ್ದಾರೆ. ದೊಡ್ಡ ಮೊತ್ತಕ್ಕೆ ಕಬ್ಜ ಹಕ್ಕು ಮಾರಾಟ ಆಗಿದೆ. ಅವರು ಕಣ್ಣುಮುಚ್ಚಿಕೊಂಡು ಸಿನಿಮಾನ ಖರೀದಿಸಿಲ್ಲ. ನಾನು ಕಂಟೆಂಟ್​​ಗಳನ್ನು ಕಟ್ ಮಾಡಿ, ಎಡಿಟ್ ಮಾಡಿಸಿ ಅವರ ಮುಂದೆ ಇಟ್ಟಿದ್ದೇನೆ. ಇದು ಕಬ್ಜ ಎಂದು ತೋರಿಸಿದ್ದೇನೆ. ಆಮೇಲೆ ಅವರು ಖರೀದಿ ಮಾಡಿದ್ದಾರೆ’ ಎಂದಿದ್ದಾರೆ ಚಂದ್ರು.

‘ಕನ್ನಡದ ಹಂಚಿಕೆ ಬಗ್ಗೆ ನಾನು ಇನ್ನೂ ಮಾತುಕತೆ ಆಗಿಲ್ಲ. ಹಿಂದಿಯಲ್ಲಿ ಆನಂದ್ ಪಂಡಿತ್ ಹಂಚಿಕೆ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಸುಧಾಕರ್ ರೆಡ್ಡಿ, ಮಲಯಾಳಂನಲ್ಲಿ ಬಾಂಬೆ ರಮೇಶ್, ತಮಿಳಿನಲ್ಲಿ ಲೈಕಾ ಅವರ ಜತೆ ಮಾತುಕತೆ ನಡೆಯುತ್ತಿದೆ. ನಾವು ಮೂರು ವರ್ಷ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಹೀಗಾಗಿ, ನಮ್ಮ ರೇಟ್​​ಗೆ ಅವರು ಬಂದರೆ ಮಾತ್ರ ನಾವು ಹಂಚಿಕೆ ಹಕ್ಕನ್ನು ನೀಡ್ತೀವಿ’ ಎಂದು ಚಂದ್ರು ಹೇಳಿದ್ದಾರೆ.

ಇದನ್ನೂ ಓದಿ: Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ

‘ಕಬ್ಜ’ ಸಿನಿಮಾಗೆ ಆರ್​.ಚಂದ್ರು ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್​. ಶ್ರೀಯಾ ಶರಣ್​ ಮೊದಲಾದವರು ನಟಿಸಿದ್ದಾರೆ. ಪುನೀತ್ ರಾಜ್​ಕುಮಾರ್ ಜನ್ಮದಿನದ ಪ್ರಯುಕ್ತ ಈ ಸಿನಿಮಾ ಮಾರ್ಚ್​ 17ರಂದು ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Wed, 1 February 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ