Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್

ಮಾರ್ಚ್​ 16ರಂದು ಚಂದ್ರು, ಉಪೇಂದ್ರ, ಕೆಪಿ ಶ್ರೀಕಾಂತ್ ಮೊದಲಾದವರು ತಿರುಪತಿಗೆ ತೆರಳಿದ್ದರು. ದೇವರ ದರ್ಶನ ಪಡೆದ ನಂತರ ಚಂದ್ರು ಅವರು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದಾರೆ.

ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್
ಆರ್​.ಚಂದ್ರು-ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on:Mar 17, 2023 | 8:49 AM

ಆರ್​. ಚಂದ್ರು (R Chandru)  ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಬ್ಜ’ ಚಿತ್ರದಿಂದ ಚಂದ್ರು ಖ್ಯಾತಿ ಸಾಕಷ್ಟು ಹೆಚ್ಚಿದೆ. ಈ ಚಿತ್ರ ಇಂದು (ಮಾರ್ಚ್​ 17) ರಿಲೀಸ್ ಆಗುತ್ತಿದೆ. ಮಲ್ಟಿ ಸ್ಟಾರರ್ ಸಿನಿಮಾ ಎಂಬ ಕಾರಣಕ್ಕೆ ಚಿತ್ರದ ಮೈಲೇಜ್ ಹೆಚ್ಚಿದೆ. ಟ್ರೇಲರ್ ಮೂಲಕ ಚಿತ್ರದ ಅದ್ದೂರಿ ಮೇಕಿಂಗ್ ಗಮನ ಸೆಳೆದಿದೆ. ‘ಕಬ್ಜ’ ರಿಲೀಸ್ (Kabzaa Movie) ಸಂದರ್ಭದಲ್ಲಿ ಚಂದ್ರು ಅವರು ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಟಾಲಿವುಡ್​ನ ಪವರ್​ ಸ್ಟಾರ್ ಪವನ್​ ಕಲ್ಯಾಣ್ ಚಿತ್ರಕ್ಕೆ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಮಾರ್ಚ್​ 16ರಂದು ಚಂದ್ರು, ಉಪೇಂದ್ರ, ಕೆಪಿ ಶ್ರೀಕಾಂತ್ ಮೊದಲಾದವರು ತಿರುಪತಿಗೆ ತೆರಳಿದ್ದರು. ದೇವರ ದರ್ಶನ ಪಡೆದ ನಂತರ ಚಂದ್ರು ಅವರು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಪವನ್ ಕಲ್ಯಾಣ್ ಅವರಿಗೆ ‘ಕಬ್ಜ’ ಚಿತ್ರವನ್ನು ಚಂದ್ರು ತೋರಿಸಿದ್ದಾರೆ. ಈ ಸಿನಿಮಾ ಪವನ್​ ಕಲ್ಯಾಣ್​​ಗೆ ಇಷ್ಟವಾಗಿದೆಯಂತೆ. ಈ ಕಾರಣಕ್ಕೆ ಚಂದ್ರು ಜೊತೆ ಸಿನಿಮಾ ಮಾಡೋಕೆ ಅವರು ಆಸಕ್ತಿ ತೋರಿಸಿದ್ದಾರೆ ಎಂದು ವರದಿ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಮಸ್ತ್ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿದೆ. ಪವನ್ ಕಲ್ಯಾಣ್ ಚಿತ್ರ ಕೂಡ ಮಾಸ್ ಆಗಿರುತ್ತದೆ. ಈ ಕಾರಣಕ್ಕೆ ಅವರಿಗೆ ‘ಕಬ್ಜ’ ಹೆಚ್ಚು ಇಷ್ಟವಾಗಿದೆ. ಈ ಎಲ್ಲಾ ಕಾರಣಕ್ಕೆ ಚಂದ್ರು ಜೊತೆ ಕೈ ಜೋಡಿಸುವ ಬಗ್ಗೆ ಅವರು ಆಸಕ್ತಿ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ತೆಲುಗು ನಟ ಪವನ್ ಕಲ್ಯಾಣ್ ಕಾರ್ ಹಿಂಬಾಲಿಸಿದ ಅನುಮಾನಾಸ್ಪದ ವ್ಯಕ್ತಿಗಳು: ಸ್ಟಾರ್ ಮನೆ ಎದುರು ನಡುರಸ್ತೆಯಲ್ಲಿ ಮಧ್ಯರಾತ್ರಿ ಜಗಳ

ತಮಿಳಿನ ‘ವಿನೋದಯಾ ಸೀತಂ’ ಚಿತ್ರದ ತೆಲುಗು ರಿಮೇಕ್​ನಲ್ಲಿ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಚಿತ್ರದ ಕೆಲಸಗಳು ಹಾಗೂ ರಾಜಕೀಯ ಕೆಲಸಗಳಲ್ಲಿ ಪವನ್ ಕಲ್ಯಾಣ್ ಬ್ಯುಸಿ ಇದ್ದಾರೆ. ಹೀಗಾಗಿ, ಚಂದ್ರು-ಪವನ್ ಕಲ್ಯಾಣ್ ಸಿನಿಮಾ ಸೆಟ್ಟೇರಲು ಸ್ವಲ್ಪ ಸಮಯ ಬೇಕಾಗಲಿದೆ. ಈ ಬಗ್ಗೆ ಪವನ್ ಕಲ್ಯಾಣ್ ಅಥವಾ ಚಂದ್ರು ಕಡೆಯಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸದ್ಯ ಚಂದ್ರು ಅವರ ಗಮನ ‘ಕಬ್ಜ’ ಚಿತ್ರದ ಮೇಲಿದೆ. ಉಪೇಂದ್ರ ಜೊತೆ, ಸುದೀಪ್, ಶಿವರಾಜ್​ಕುಮಾರ್ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:48 am, Fri, 17 March 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​