ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್

Kabzaa Movie Release Date: ಕಳೆದ ವರ್ಷ ಪುನೀತ್ ರಾಜ್​ಕುಮಾರ್​ ಬರ್ತ್​ಡೇ ದಿನ ‘ಜೇಮ್ಸ್​’ ಸಿನಿಮಾ ರಿಲೀಸ್ ಆಗಿತ್ತು. ಈ ವರ್ಷ ‘ಕಬ್ಜ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
ಕಬ್ಜ ಚಿತ್ರದಲ್ಲಿ ಉಪೇಂದ್ರ
Follow us
|

Updated on: Jan 24, 2023 | 10:23 AM

ಆರ್​. ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ (Kabzaa Movie) ಹಲವು ಕಾರಣಗಳಿಂದ ಕುತೂಹಲ ಮೂಡಿಸಿದೆ. ಸಿನಿಮಾದ ಗುಣಮಟ್ಟ ಹೇಗಿರಲಿದೆ ಎಂಬುದು ಈಗಾಗಲೇ ಟೀಸರ್ ಮೂಲಕ ಗೊತ್ತಾಗಿದೆ. ಉಪೇಂದ್ರ ಹಾಗೂ ಸುದೀಪ್ (Sudeep) ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಕಾರಣದಿಂದಲೂ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಈ ಮೊದಲು ರಿಲೀಸ್ ಆದ ಪೋಸ್ಟರ್​​ಗಳು ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇ ದಿನ (ಮಾರ್ಚ್​ 17) ‘ಕಬ್ಜ’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿದ್ದು ನೋವಿನ ಸಂಗತಿ. ಈ ನೋವನ್ನು ಮರೆಯೋದು ಅಭಿಮಾನಿಗಳಿಗೆ ಕಷ್ಟ ಆಗುತ್ತಿದೆ. ಅವರನ್ನು ಹಲವು ರೀತಿಯಲ್ಲಿ ನೆನಪು ಮಾಡಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಅವರ ಬರ್ತ್​ಡೇ ದಿನ ‘ಜೇಮ್ಸ್​’ ಸಿನಿಮಾ ರಿಲೀಸ್ ಆಗಿತ್ತು. ಈ ವರ್ಷ ‘ಕಬ್ಜ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ. ಮಾರ್ಚ್​ 22ರಂದು ಯುಗಾದಿ ಇದೆ. ಈ ಕಾರಣದಿಂದಲೂ ‘ಕಬ್ಜ’ ಚಿತ್ರವನ್ನು ಮಾರ್ಚ್​ 17ಕ್ಕೆ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದ ಟ್ರೇಲರ್ ಹಾಗೂ ಸಾಂಗ್​ಗಳು ಬಿಡುಗಡೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಅನೇಕ ಚಿತ್ರಗಳು ಸೂಪರ್​ ಹಿಟ್ ಆದವು. ವಿಶ್ವ ಮಟ್ಟದಲ್ಲಿ ಕನ್ನಡದ ಸಿನಿಮಾಗಳು ಸದ್ದು ಮಾಡಿದವು. 2023ರಲ್ಲೂ ಇದೇ ಸ್ಥಿರತೆ ಕಾಪಾಡಿಕೊಳ್ಳುವ ಅಗತ್ಯತೆ ಇದೆ. ಹೀಗಾಗಿ, ‘ಕಬ್ಜ’ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇದೆ.

ಇದನ್ನೂ ಓದಿ: Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದೆ. ಚಿತ್ರದ ಟೀಸರ್ ನೋಡಿದ ಅನೇಕರು ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿಕೊಂಡಿದ್ದಾರೆ. ಈ ಕಮೆಂಟ್​ಗಳನ್ನು ಚಿತ್ರತಂಡ ಪಾಸಿಟಿವ್ ಆಗಿ ತೆಗೆದುಕೊಂಡಿದೆ. ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು