AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ ಸೀಕ್ವೆಲ್ ಕಥೆ ಕೇಳಿಲ್ಲ, ಭೈರತಿ ರಣಗಲ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇನೆ’: ಶಿವರಾಜ್​ಕುಮಾರ್

‘ಕಬ್ಜ’ ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ.

ರಾಜೇಶ್ ದುಗ್ಗುಮನೆ
|

Updated on:May 01, 2023 | 11:22 AM

Share

‘ಕಬ್ಜ’ ಸಿನಿಮಾ (Kabzaa Movie) ಯಶಸ್ಸು ಕಂಡಿದೆ ಎಂದು ಚಿತ್ರದ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಹೇಳಿಕೊಂಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರ ಹೈಲೈಟ್ ಆಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಶಿವರಾಜ್​ಕುಮಾರ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಶಿವಣ್ಣ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಟ ಶಿವರಾಜ್​ಕುಮಾರ್ (Shivarajkumar) ಸುದ್ದಿಗೋಷ್ಠಿ ಕರೆದಿದ್ದರು. ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಹಾಗೂ ಪ್ರಚಾರದಲ್ಲಿ ಶಿವಣ್ಣ ಭಾಗಿಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ಕಬ್ಜ 2’ ಕಥೆ ಕೇಳಿಲ್ಲ

‘ಕಬ್ಜ’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗುತ್ತದೆ. ಅವರು ಬರೋದು ಒಂದೇ ದೃಶ್ಯದಲ್ಲಾದರೂ ಸಾಕಷ್ಟು ಕುತೂಹಲ ಮೂಡಿಸುತ್ತಾರೆ. ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ. ಈ ವಿಚಾರವನ್ನು ಅವರು ರಿವೀಲ್ ಮಾಡಿದ್ದಾರೆ. ‘ನಾನಿನ್ನೂ ಕಬ್ಜ ಎರಡನೇ ಪಾರ್ಟ್​​ನ ಸ್ಟೋರಿ ಕೇಳಿಲ್ಲ’ ಎಂದಿದ್ದಾರೆ.

ಭೈರತಿ ರಣಗಲ್​ಗೆ ಹೆಚ್ಚು ಒತ್ತು

ನಿರ್ದೇಶಕ ನರ್ತನ್ ಹಾಗೂ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಮಫ್ತಿ’ ಸಿನಿಮಾ ಯಶಸ್ಸು ಕಂಡಿತ್ತು. ಈಗ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧಗೊಳ್ಳುತ್ತಿದೆ. ‘ಭೈರತಿ ರಣಗಲ್’ ಎಂದು ಹೆಸರು ಇಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಣಗಲ್ ಮೇಲೆ ಕಾನ್ಸಂಟ್ರೇಷನ್ ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪ್ರಚಾರಕ್ಕೆ ಬರ್ತಾರಾ ಶಿವಣ್ಣ? ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್ ಕೊಟ್ಟರು ಉತ್ತರ

‘ಘೋಸ್ಟ್’ ಬಗ್ಗೆ ಶಿವಣ್ಣ ಮಾತು

‘ಘೋಸ್ಟ್​ ಸಿನಿಮಾ ಕರ್ನಾಟಕ ಮಾತ್ರವಲ್ಲ ಈಡೀ ಭಾರತಕ್ಕೆ ಒಳ್ಳೆಯ ಸಿನಿಮಾ ಆಗತ್ತೆ. ಈ ವಿಚಾರದಲ್ಲಿ ಅತಿಆಸೆ ಪಡ್ತಾ ಇದಿನೋ ಗೊತ್ತಿಲ್ಲ’ ಎಂದಿದ್ದಾರೆ ಶಿವಣ್ಣ.

ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್

ಗೀತಾ ಶಿವರಾಜ್​ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರಿಗೆ ಶಿವಣ್ಣ ಬೆಂಬಲವಾಗಿ ನಿಂತಿದ್ದಾರೆ. ಅವರು ಕೂಡ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Mon, 1 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!