AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ ಸೀಕ್ವೆಲ್ ಕಥೆ ಕೇಳಿಲ್ಲ, ಭೈರತಿ ರಣಗಲ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇನೆ’: ಶಿವರಾಜ್​ಕುಮಾರ್

‘ಕಬ್ಜ’ ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ.

ರಾಜೇಶ್ ದುಗ್ಗುಮನೆ
|

Updated on:May 01, 2023 | 11:22 AM

Share

ಮುಖ್ಯಾಂಶಗಳು

  • ‘ಕಬ್ಜ 2’ ಕಥೆ ಕೇಳಿಲ್ಲ ಎಂದ ಶಿವಣ್ಣ
  • ‘ಕಬ್ಜ’ ಸಿನಿಮಾ ಯಶಸ್ಸು ಕಂಡಿದೆ ಎಂದು ತಂಡ ಹೇಳಿಕೊಂಡಿದೆ
  • ಶೀಘ್ರವೇ ಶುರುವಾಗಲಿದೆ ಸೀಕ್ವೆಲ್

‘ಕಬ್ಜ’ ಸಿನಿಮಾ (Kabzaa Movie) ಯಶಸ್ಸು ಕಂಡಿದೆ ಎಂದು ಚಿತ್ರದ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಹೇಳಿಕೊಂಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರ ಹೈಲೈಟ್ ಆಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಶಿವರಾಜ್​ಕುಮಾರ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಶಿವಣ್ಣ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಟ ಶಿವರಾಜ್​ಕುಮಾರ್ (Shivarajkumar) ಸುದ್ದಿಗೋಷ್ಠಿ ಕರೆದಿದ್ದರು. ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಹಾಗೂ ಪ್ರಚಾರದಲ್ಲಿ ಶಿವಣ್ಣ ಭಾಗಿಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ಕಬ್ಜ 2’ ಕಥೆ ಕೇಳಿಲ್ಲ

‘ಕಬ್ಜ’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗುತ್ತದೆ. ಅವರು ಬರೋದು ಒಂದೇ ದೃಶ್ಯದಲ್ಲಾದರೂ ಸಾಕಷ್ಟು ಕುತೂಹಲ ಮೂಡಿಸುತ್ತಾರೆ. ಸೀಕ್ವೆಲ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಲಿದೆ ಎನ್ನುವ ಸೂಚನೆ ಸಿಕ್ಕಿತ್ತು. ಆದರೆ, ಶಿವರಾಜ್​ಕುಮಾರ್ ಅವರು ಇನ್ನೂ ‘ಕಬ್ಜ 2’ ಕಥೆ ಕೇಳಿಲ್ಲ. ಈ ವಿಚಾರವನ್ನು ಅವರು ರಿವೀಲ್ ಮಾಡಿದ್ದಾರೆ. ‘ನಾನಿನ್ನೂ ಕಬ್ಜ ಎರಡನೇ ಪಾರ್ಟ್​​ನ ಸ್ಟೋರಿ ಕೇಳಿಲ್ಲ’ ಎಂದಿದ್ದಾರೆ.

ಭೈರತಿ ರಣಗಲ್​ಗೆ ಹೆಚ್ಚು ಒತ್ತು

ನಿರ್ದೇಶಕ ನರ್ತನ್ ಹಾಗೂ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಮಫ್ತಿ’ ಸಿನಿಮಾ ಯಶಸ್ಸು ಕಂಡಿತ್ತು. ಈಗ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧಗೊಳ್ಳುತ್ತಿದೆ. ‘ಭೈರತಿ ರಣಗಲ್’ ಎಂದು ಹೆಸರು ಇಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಣಗಲ್ ಮೇಲೆ ಕಾನ್ಸಂಟ್ರೇಷನ್ ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪ್ರಚಾರಕ್ಕೆ ಬರ್ತಾರಾ ಶಿವಣ್ಣ? ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್ ಕೊಟ್ಟರು ಉತ್ತರ

‘ಘೋಸ್ಟ್’ ಬಗ್ಗೆ ಶಿವಣ್ಣ ಮಾತು

‘ಘೋಸ್ಟ್​ ಸಿನಿಮಾ ಕರ್ನಾಟಕ ಮಾತ್ರವಲ್ಲ ಈಡೀ ಭಾರತಕ್ಕೆ ಒಳ್ಳೆಯ ಸಿನಿಮಾ ಆಗತ್ತೆ. ಈ ವಿಚಾರದಲ್ಲಿ ಅತಿಆಸೆ ಪಡ್ತಾ ಇದಿನೋ ಗೊತ್ತಿಲ್ಲ’ ಎಂದಿದ್ದಾರೆ ಶಿವಣ್ಣ.

ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್

ಗೀತಾ ಶಿವರಾಜ್​ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರಿಗೆ ಶಿವಣ್ಣ ಬೆಂಬಲವಾಗಿ ನಿಂತಿದ್ದಾರೆ. ಅವರು ಕೂಡ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Mon, 1 May 23

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ