AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಮಾಫಿಯಾ ಕುರಿತ, “ಕದನ ವಿರಾಮ” ಸಿನಿಮಾಕ್ಕೆ ಚಾಲನೆ

Sandalwood: ಗೆಲ್ಲುವ ಆಸೆಯನ್ನಿಟ್ಟುಕೊಂಡು, ಒಂದೊಳ್ಳೆ ಕತೆ ಹೇಳುವ ಆಸೆಯನ್ನು ಹೊತ್ತು ಪ್ರತಿ ವಾರ ಹೊಸದೊಂದು ತಂಡ ಗಾಂಧಿನಗರಕ್ಕೆ ಬರುತ್ತದೆ. ಇದೀಗ ಮತ್ತೊಂದು ತಂಡ ಭೂ-ಮಾಫಿಯಾ ಕುರಿತಾದ ಕತೆ ಹೇಳಲು ಬಂದಿದೆ.

ಭೂ ಮಾಫಿಯಾ ಕುರಿತ, ಕದನ ವಿರಾಮ ಸಿನಿಮಾಕ್ಕೆ ಚಾಲನೆ
ಮಂಜುನಾಥ ಸಿ.
|

Updated on: Dec 09, 2023 | 8:20 PM

Share

ಒಟಿಟಿಗಳ ಅಬ್ಬರ ಹಾಗೂ ಒಳ್ಳೆಯ ಸಿನಿಮಾಗಳ ಬೇಡಿಕೆ, ಹೊಸಬರು ಚಿತ್ರರಂಗದಲ್ಲಿ ಗೆಲ್ಲುತ್ತಿರುವ ಉದಾಹರಣೆಗಳಿಂದ ಪ್ರೇರಿತವಾಗಿ ಹೊಸ-ಹೊಸ ತಂಡಗಳು ಚಿತ್ರರಂಗಕ್ಕೆ (Sandalwood) ಕಾಲಿಡುತ್ತಲೇ ಇವೆ. ಹೊಸ ಕತೆಯೊಟ್ಟಿಗೆ ಬರುತ್ತಿರುವ ಹೊಸ ತಂಡಗಳು ಕೆಲವು ಗೆಲ್ಲುತ್ತಿವೆ, ಹಲವು ಸೋಲುತ್ತಿವೆ. ಇದೀಗ ಗೆಲ್ಲುವ ಉತ್ಸಾಹದೊಂದಿಗೆ ಹೊಸ ಸಿನಿಮಾ ತಂಡವೊಂದು ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ತಂಡ ಭೂ-ಮಾಫಿಯಾದ ಕತೆ ಹೇಳಲು ಬರುತ್ತಿದೆ.

ಶ್ರೀಬ್ರಹ್ಮಲಿಂಗೇಶ್ವರ ಫಿಲಂಸ್ ಲಾಂಛನದಲ್ಲಿ ಕೆ.ಭಾಸ್ಕರ್ ನಾಯ್ಕ್ (ಮಾರಣಕಟ್ಟೆ) ಹಾಗೂ ಸಾಮ್ರಾಟ್ ಮಂಜುನಾಥ್.ವಿ ಅವರು ಜಂಟಿಯಾಗಿ ‘ಕದನ ವಿರಾಮ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಮುರಳಿ ಎಸ್ ವೈ ನಿರ್ದೇಶನ ಮಾಡುತ್ತಿದ್ದಾರೆ. “ಕದನ ವಿರಾಮ” ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ಮಾಡಲಾಯ್ತು. ಸಿನಿಮಾದ ಮೊದಲ ದೃಶ್ಯಕ್ಕೆ ಬಿಲ್ಡರ್ ಸುರೇಶ್ ಆರಂಭ‌ ಫಲಕ ತೋರಿದರು. ಉದ್ಯಮಿ ಚಿಕ್ಕಣ್ಣ ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಬಂದು ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಇದನ್ನೂ ಓದಿ:ನರಕವಾಯ್ತು ಬಿಗ್​ಬಾಸ್ ಮನೆ: ಇದಕ್ಕೆಲ್ಲ ಕಾರಣ ಯಾರು?

ಈ ಹಿಂದೆ “ರಿವಿಲ್” ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದ ಮುರಳಿ ಎಸ್ ವೈ ಅವರಿಗೆ ಎರಡನೇ ಸಿನಿಮಾ ಇದು. ‘ಕದನ ವಿರಾಮ’ ಎಂದರೆ ಭೂಮಿ ಹಾಗೂ ಮನುಷ್ಯನ ನಡುವೆ ನಡೆಯುವ ಕಥೆ. ನಿರ್ಮಾಪಕ ಭಾಸ್ಕರ್ ನಾಯ್ಕ್ ಈ ಸಿನಿಮಾಕ್ಕೆ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ಐದು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಸಿನಿಮಾದಲ್ಲಿ ಇರಲಿವೆ. ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಅವರು ಸಂಗೀತ ನಿರ್ದೇಶನ ಮಾಡಲಿದ್ದಾರೆ. ರಿಜೊ ಪಿ ಜಾನ್ ಅವರು ಛಾಯಾಗ್ರಹಣ ಮಾಡಲಿದ್ದಾರೆ. ‘ಕದನ ವಿರಾಮ’ ಚಿತ್ರದ ಬಹುತೇಕ ಚಿತ್ರೀಕರಣ ಕುಂದಾಪುರದಲ್ಲಿ ನಡೆಯಲಿದೆ. ಈ ತಿಂಗಳ ಕೊನೆಗೆ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಮುರಳಿ ಎಸ್ ವೈ ಮಾಹಿತಿ ನೀಡಿದರು.

ಈ ಸಿನಿಮಾಕ್ಕೆ ಆಕಾಶ್ ಶೆಟ್ಟಿ ನಾಯಕ. ಆಕಾಶ್ ಶೆಟ್ಟಿ ಈ ಹಿಂದೆ “ನವರಂಗಿ” ಸೇರಿದಂತೆ ಇನ್ನೂ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸುಮಾರು ಏಳು ವರ್ಷಗಳ ನಂತರ ಆಕಾಶ್ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಛಾಯಾಶ್ರೀ “ಕದನ ವಿರಾಮ” ಸಿನಿಮಾದ ನಾಯಕಿ. ಕನ್ನಡ ಚಿತ್ರರಂಗದ ಹಲವು ಹೆಸರಾಂತ ಕಲಾವಿದರು ಈ ಸಿನಿಮಾದ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ