AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ.

ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ
ಕದ್ದ ಚಿತ್ರದ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Sep 01, 2023 | 12:58 PM

Share

ವಿಜಯ್ ರಾಘವೇಂದ್ರ (Vijay Raghavendra) ಅವರ ಬಾಳಲ್ಲಿ ಈ ತಿಂಗಳು ಕಹಿ ಘಟನೆ ಸಂಭವಿಸಿತು. ಅವರ ಪತ್ನಿ ಸ್ಪಂದನಾ ಅವರು ಆಗಸ್ಟ್ 6ರಂದು ಥೈಲ್ಯಾಂಡ್​ನಲ್ಲಿ ಮೃತಪಟ್ಟರು. ಈಗ ಅವರು ಪತ್ನಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೂ ಜೀವನ ಸಾಗಲೇಬೇಕು. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ರಿಲೀಸ್​ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ತಂಡದವರು ಹೊಸ ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ನೋವಿನಲ್ಲೂ ವಿಜಯ್ ಸಿನಿಮಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.

ವಿಜಯ್ ರಾಘವೇಂದ್ರ ಅವರು ಭಿನ್ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ವಿಶೇಷ ಕಥೆಗಳನ್ನು ಆಯ್ಕೆ ಮಾಡಿಕೊಂಡು ನಟಿಸುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ರಾಘು’ ಸಿನಿಮಾ ರಿಲೀಸ್ ಆಯಿತು. ಚಿತ್ರದುದ್ದಕ್ಕೂ ತೆರೆಮೇಲೆ ಕಾಣಿಸುವ ಏಕೈಕ ವ್ಯಕ್ಯಿ ಎಂದರೆ ಅದು ಅವರು ಮಾತ್ರ. ಈಗ ಅವರು ‘ಕದ್ದ ಚಿತ್ರ’ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲೂ ಅವರು ಭಿನ್ನ ಪಾತ್ರ ಮಾಡಿದ್ದಾರೆ. ಬರಹಗಾರನ ಪಾತ್ರದಲ್ಲಿ ಅವರು ನಟಿಸಿದ್ದಾರೆ.

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಸುಹಾಸ್ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ವಿಜಯ್ ರಾಘವೇಂದ್ರ ಹಾಜರಿ ಹಾಕಿ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

ಸದ್ಯ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ರಿಲೀಸ್ ಆದ ಎಲ್ಲಾ ಚಿತ್ರಗಳು ಉತ್ತಮ ಬೆಳೆ ತೆಗೆಯುತ್ತಿವೆ. ‘ಕದ್ದ ಚಿತ್ರ’ ಕೂಡ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸೆಪ್ಟೆಂಬರ್ 7ರಂದು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಜೊತೆ ‘ಕದ್ದ ಚಿತ್ರ’ ಸ್ಪರ್ಧೆ ಮಾಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Tue, 29 August 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ