AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ.

ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ
ಕದ್ದ ಚಿತ್ರದ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Sep 01, 2023 | 12:58 PM

Share

ವಿಜಯ್ ರಾಘವೇಂದ್ರ (Vijay Raghavendra) ಅವರ ಬಾಳಲ್ಲಿ ಈ ತಿಂಗಳು ಕಹಿ ಘಟನೆ ಸಂಭವಿಸಿತು. ಅವರ ಪತ್ನಿ ಸ್ಪಂದನಾ ಅವರು ಆಗಸ್ಟ್ 6ರಂದು ಥೈಲ್ಯಾಂಡ್​ನಲ್ಲಿ ಮೃತಪಟ್ಟರು. ಈಗ ಅವರು ಪತ್ನಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೂ ಜೀವನ ಸಾಗಲೇಬೇಕು. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ರಿಲೀಸ್​ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ತಂಡದವರು ಹೊಸ ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ನೋವಿನಲ್ಲೂ ವಿಜಯ್ ಸಿನಿಮಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.

ವಿಜಯ್ ರಾಘವೇಂದ್ರ ಅವರು ಭಿನ್ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ವಿಶೇಷ ಕಥೆಗಳನ್ನು ಆಯ್ಕೆ ಮಾಡಿಕೊಂಡು ನಟಿಸುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ರಾಘು’ ಸಿನಿಮಾ ರಿಲೀಸ್ ಆಯಿತು. ಚಿತ್ರದುದ್ದಕ್ಕೂ ತೆರೆಮೇಲೆ ಕಾಣಿಸುವ ಏಕೈಕ ವ್ಯಕ್ಯಿ ಎಂದರೆ ಅದು ಅವರು ಮಾತ್ರ. ಈಗ ಅವರು ‘ಕದ್ದ ಚಿತ್ರ’ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲೂ ಅವರು ಭಿನ್ನ ಪಾತ್ರ ಮಾಡಿದ್ದಾರೆ. ಬರಹಗಾರನ ಪಾತ್ರದಲ್ಲಿ ಅವರು ನಟಿಸಿದ್ದಾರೆ.

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಸುಹಾಸ್ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ವಿಜಯ್ ರಾಘವೇಂದ್ರ ಹಾಜರಿ ಹಾಕಿ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

ಸದ್ಯ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ರಿಲೀಸ್ ಆದ ಎಲ್ಲಾ ಚಿತ್ರಗಳು ಉತ್ತಮ ಬೆಳೆ ತೆಗೆಯುತ್ತಿವೆ. ‘ಕದ್ದ ಚಿತ್ರ’ ಕೂಡ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸೆಪ್ಟೆಂಬರ್ 7ರಂದು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಜೊತೆ ‘ಕದ್ದ ಚಿತ್ರ’ ಸ್ಪರ್ಧೆ ಮಾಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Tue, 29 August 23

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?