ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ.

ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ
ಕದ್ದ ಚಿತ್ರದ ಪೋಸ್ಟರ್

Updated on: Sep 01, 2023 | 12:58 PM

ವಿಜಯ್ ರಾಘವೇಂದ್ರ (Vijay Raghavendra) ಅವರ ಬಾಳಲ್ಲಿ ಈ ತಿಂಗಳು ಕಹಿ ಘಟನೆ ಸಂಭವಿಸಿತು. ಅವರ ಪತ್ನಿ ಸ್ಪಂದನಾ ಅವರು ಆಗಸ್ಟ್ 6ರಂದು ಥೈಲ್ಯಾಂಡ್​ನಲ್ಲಿ ಮೃತಪಟ್ಟರು. ಈಗ ಅವರು ಪತ್ನಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೂ ಜೀವನ ಸಾಗಲೇಬೇಕು. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ರಿಲೀಸ್​ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ತಂಡದವರು ಹೊಸ ಬಿಡುಗಡೆ ದಿನಾಂಕ ತಿಳಿಸಿದ್ದಾರೆ. ನೋವಿನಲ್ಲೂ ವಿಜಯ್ ಸಿನಿಮಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.

ವಿಜಯ್ ರಾಘವೇಂದ್ರ ಅವರು ಭಿನ್ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ವಿಶೇಷ ಕಥೆಗಳನ್ನು ಆಯ್ಕೆ ಮಾಡಿಕೊಂಡು ನಟಿಸುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ರಾಘು’ ಸಿನಿಮಾ ರಿಲೀಸ್ ಆಯಿತು. ಚಿತ್ರದುದ್ದಕ್ಕೂ ತೆರೆಮೇಲೆ ಕಾಣಿಸುವ ಏಕೈಕ ವ್ಯಕ್ಯಿ ಎಂದರೆ ಅದು ಅವರು ಮಾತ್ರ. ಈಗ ಅವರು ‘ಕದ್ದ ಚಿತ್ರ’ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲೂ ಅವರು ಭಿನ್ನ ಪಾತ್ರ ಮಾಡಿದ್ದಾರೆ. ಬರಹಗಾರನ ಪಾತ್ರದಲ್ಲಿ ಅವರು ನಟಿಸಿದ್ದಾರೆ.

ಆಗಸ್ಟ್ 25ರಂದು ‘ಕದ್ದ ಚಿತ್ರ’ ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿ ಇದ್ದಿದ್ದರಿಂದ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಯಿತು. ಈಗ ಹೊಸ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ. ಸೆಪ್ಟೆಂಬರ್ 8ರಂದು ‘ಕದ್ದ ಚಿತ್ರ’ ತೆರೆಗೆ ಬರುತ್ತಿದೆ. ಸುಹಾಸ್ ಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ವಿಜಯ್ ರಾಘವೇಂದ್ರ ಹಾಜರಿ ಹಾಕಿ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

ಸದ್ಯ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ರಿಲೀಸ್ ಆದ ಎಲ್ಲಾ ಚಿತ್ರಗಳು ಉತ್ತಮ ಬೆಳೆ ತೆಗೆಯುತ್ತಿವೆ. ‘ಕದ್ದ ಚಿತ್ರ’ ಕೂಡ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸೆಪ್ಟೆಂಬರ್ 7ರಂದು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಜೊತೆ ‘ಕದ್ದ ಚಿತ್ರ’ ಸ್ಪರ್ಧೆ ಮಾಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Tue, 29 August 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us