ನಟ ಯಶ್ ಗುಣಗಾನ ಮಾಡಿದ ಕಾಜಲ್, ನಟಿ ಹೇಳಿದ್ದೇನು?

Kajal Aggarwal-Yash: ಯಶ್ ಜೊತೆ ಕೆಲಸ ಮಾಡಿದ ನಟ-ನಟಿಯರು ಬೇರೆ-ಬೇರೆ ಸಂದರ್ಶನಗಳಲ್ಲಿ ಮಾತನಾಡಿದ್ದು, ಯಶ್ ಅವರ ವ್ಯಕ್ತಿತ್ವ, ಅವರ ಕೆಲಸ ಮಾಡುವ ರೀತಿಯನ್ನು ಕೊಂಡಾಡಿದ್ದಾರೆ. ಇತ್ತೀಚೆಗಷ್ಟೆ ನಟಿಯರಾದ ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಇನ್ನೂ ಕೆಲವರು ಯಶ್ ಅವರ ಬಗ್ಗೆ ಮಾತನಾಡಿದ್ದರು, ಇದೀಗ ನಟಿ ಕಾಜಲ್ ಅಗರ್ವಾಲ್ ಯಶ್ ಅವರ ಬಗ್ಗೆ ಮಾತನಾಡಿದ್ದು, ಅವರ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

ನಟ ಯಶ್ ಗುಣಗಾನ ಮಾಡಿದ ಕಾಜಲ್, ನಟಿ ಹೇಳಿದ್ದೇನು?
Yash Kajol1

Updated on: Jul 04, 2026 | 7:54 PM

ಯಶ್ (Yash) ನಟನೆಯ ಎರಡು ಸಿನಿಮಾಗಳು ಈ ವರ್ಷ ಬಿಡುಗಡೆ ಆಗಲಿವೆ. ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳು ಕೇಲವೇ ತಿಂಗಳ ಅಂತರದಲ್ಲಿ ಚಿತ್ರಮಂದಿರಕ್ಕೆ ಬರಲಿವೆ. ಎರಡೂ ಸಿನಿಮಾಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಸ್ಟಾರ್ ನಟ-ನಟಿಯರು ಕೆಲಸ ಮಾಡಿದ್ದಾರೆ. ಇವರುಗಳಲ್ಲಿ ಹಲವರು ಯಶ್ ಅವರ ಬಗ್ಗೆ ಬೇರೆ-ಬೇರೆ ಸಂದರ್ಶನಗಳಲ್ಲಿ ಮಾತನಾಡಿದ್ದು, ಯಶ್ ಅವರ ವ್ಯಕ್ತಿತ್ವ, ಅವರ ಕೆಲಸ ಮಾಡುವ ರೀತಿಯನ್ನು ಕೊಂಡಾಡಿದ್ದಾರೆ. ಇತ್ತೀಚೆಗಷ್ಟೆ ನಟಿಯರಾದ ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಇನ್ನೂ ಕೆಲವರು ಯಶ್ ಅವರ ಬಗ್ಗೆ ಮಾತನಾಡಿದ್ದರು, ಇದೀಗ ನಟಿ ಕಾಜಲ್ ಅಗರ್ವಾಲ್ ಯಶ್ ಅವರ ಬಗ್ಗೆ ಮಾತನಾಡಿದ್ದು, ಅವರ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

ಪ್ಯಾನ್ ಇಂಡಿಯಾ ನಟಿಯಾಗಿರುವ ಕಾಜಲ್ ಅಗರ್ವಾಲ್ ಅವರು ‘ರಾಮಾಯಣ’ ಸಿನಿಮಾನಲ್ಲಿ ಯಶ್ ಅವರೊಟ್ಟಿಗೆ ನಟಿಸಿದ್ದಾರೆ. ‘ರಾಮಾಯಣ’ ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದರೆ, ರಾವಣನ ಪತ್ನಿ ಮಂಡೋದರಿಯ ಪಾತ್ರದಲ್ಲಿ ಕಾಜಲ್ ಅಗರ್ವಾಲ್ ನಟಿಸಿದ್ದಾರೆ. ಇತ್ತೀಚೆಗೆ ನೀಡಿರುವ ಸಂದರ್ಶನವೊಂದರಲ್ಲಿ ‘ರಾಮಾಯಣ’ ಸಿನಿಮಾ ಮತ್ತು ಯಶ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ನಟಿ ಕಾಜಲ್ ಅಗರ್ವಾಲ್ ಮಾತನಾಡಿದ್ದಾರೆ.

‘ಯಶ್ ಒಬ್ಬ ಅದ್ಭುತ ನಟ. ನಾನು ಯಾವಾಗಲೂ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದೇನೆ, ಮತ್ತು ಈ ನಿರ್ದಿಷ್ಟ ಸಿನಿಮಾನಲ್ಲಿ ಅವರೊಂದಿಗೆ ಕೆಲಸ ಮಾಡುವ ಅನುಭವ ಅದ್ಭುತವಾಗಿತ್ತು. ಯಶ್ ‘ರಾಮಾಯಣ’ ಸಿನಿಮಾಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಇದು ನಮಗೆಲ್ಲರಿಗೂ ನಿಜವಾಗಿಯೂ ರೋಮಾಂಚನಕಾರಿ ಅನುಭವ ಎಂದು ನಾನು ಭಾವಿಸುತ್ತೇನೆ. ಯಶ್ ಅತ್ಯಂತ ವೃತ್ತಿಪರರು ಮತ್ತು ಸಹಜವಾಗಿಯೇ ಅಪಾರ ಪ್ರತಿಭಾನ್ವಿತರು’ ಎಂದಿದ್ದಾರೆ.

ಇದನ್ನೂ ಓದಿ:ಯಶ್ ‘ಟಾಕ್ಸಿಕ್’ ವಿರುದ್ಧ ಸೆಣೆಸಲು ವಿವಾದ ಬಗೆಹರಿಸಿಕೊಂಡ ಶ್ರದ್ಧಾ ಕಪೂರ್

‘ರಾಮಾಯಣ’ ಸಿನಿಮಾ ಬಗ್ಗೆಯೂ ಮಾತನಾಡಿರುವ ನಟಿ ಕಾಜಲ್ ಅಗರ್ವಾಲ್, ‘ನಾವು ಮೊದಲ ಭಾಗವನ್ನು ಮಾತ್ರ ಚಿತ್ರೀಕರಿಸಿದ್ದೇವೆ ಮತ್ತು ಸಹಜವಾಗಿಯೇ, ಲಂಕೆಯ ಕತೆ ಅದರಲ್ಲಿ ಕಡಿಮೆ ಇದೆ. ನಾನು ಮಂಡೋದರಿ ಪಾತ್ರದಲ್ಲಿ ನಟಿಸಿದ್ದೇನೆ ಆದ್ದರಿಂದ ನನ್ನ ಪಾತ್ರವು ಸ್ಪಷ್ಟವಾಗಿ ಬಹಳ ಸೀಮಿತವಾಗಿದೆ. ಅದೇನೇ ಇದ್ದರೂ, ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಪ್ಯಾನ್ ವರ್ಲ್ಡ ಸಿನಿಮಾ ಆಗಲಿರುವ ಒಂದು ಮಹಾನ್ ಕೃತಿಯ ಭಾಗವಾಗಿರುವುದು ನನ್ನ ಪಾಲಿಗೆ ಅದ್ಭುತ ಅನುಭವವಾಗಿದೆ. ಈ ಅವಕಾಶ ನನಗೆ ಸಿಕ್ಕಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ’ ಎಂದಿದ್ದಾರೆ ನಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us