AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ; ಅಪ್ಪು ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ

Puneeth Rajkumar: ಗಂಡು ಮಗು ಜನಿಸಿದರೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಲು ದಂಪತಿ ನಿರ್ಧರಿಸಿದ್ದರು. ಅವರ ಆಸೆಯಂತೆಯೇ ಡಿ.5ರಂದು ಈ ಜೋಡಿಗೆ ಗಂಡು ಮಗು ಜನಿಸಿತು.

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ; ಅಪ್ಪು ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ
ಕಾವೇರಿ-ಸಿದ್ದು ದಂಪತಿ, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Dec 31, 2021 | 10:05 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಅದರ ನಡುವೆಯೂ ಕೆಲವು ವಿಶೇಷ ಘಟನೆಗಳು ವರದಿ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರನ್ನು ಇಡುವ ಕಾರ್ಯ ನಡೆದಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ. ಆ ಮೂಲಕ ಅಪ್ಪು ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ. ಪುನೀತ್​ ಎಂದರೆ ಜನರಿಗೆ ಎಷ್ಟು ಇಷ್ಟ ಎಂಬುದಕ್ಕೆ ಇಂಥ ಘಟನೆಗಳೇ ಸಾಕ್ಷಿ. ಸದ್ಯ ಈ ದಂಪತಿ ಮತ್ತು ಮಗುವಿನ ಫೋಟೋ ವೈರಲ್​ ಆಗುತ್ತಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿಗೆ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಹಾಗಾಗಿ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ. ಡಿ.5ರಂದು ಈ ಜೋಡಿಗೆ ಗಂಡು ಮಗು ಜನಿಸಿತು. ಹೆರಿಗೆಗೂ ಮುನ್ನವೇ ಅವರು ಈ ತೀರ್ಮಾನಕ್ಕೆ ಬಂದಿದ್ದರು. ಒಂದುವೇಳೆ ಗಂಡು ಮಗು ಜನಿಸಿದರೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಲು ದಂಪತಿ ನಿರ್ಧರಿಸಿದ್ದರು. ಅವರ ಆಸೆ ನೆರವೇರಿದೆ.

ಅಪ್ಪು ಇಲ್ಲದೇ ಕಳೆಯಿತು ಎರಡು ತಿಂಗಳು:

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರು ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಭೌತಿಕವಾಗಿ ಪುನೀತ್​ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಪುನೀತ್​ ಎಂದೆಂದಿಗೂ ಅಮರ. ಕಂಠೀರವ ಸ್ಡುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಪ್ರತಿದಿನ ನೂರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪುನೀತ್​ ನಿಧನರಾಗಿ ಎರಡು ತಿಂಗಳು ಕಳೆದಿದ್ದರೂ ಕೂಡ ಸಮಾಧಿಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆ ಆಗಿಲ್ಲ.

ಪುನೀತ್​ ನಿಧನರಾಗಿ ಎರಡು ತಿಂಗಳು ಕಳೆದ ಹಿನ್ನೆಲೆಯಲ್ಲಿ ಡಿ.29ರಂದು ಅವರ ಕುಟುಂಬದವರು ಬಂದು ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಪುನೀತ್​ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನ ಮಾಡುತ್ತಿದ್ದಾರೆ. ಆ ಮೂಲಕ ಅಪ್ಪು ಅಭಿಮಾನಿಗಳು ಎಲ್ಲರಿಗೂ ಮಾದರಿ ಆಗುತ್ತಿದ್ದಾರೆ. ಪುನೀತ್​ ನಿಧನದ ಬಳಿಕ ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಹೆಚ್ಚಿದೆ. ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದು ಸಂತಸದ ವಿಚಾರ.

ಇದನ್ನೂ ಓದಿ:

ಅಪ್ಪು ಇಲ್ಲದೇ 2 ತಿಂಗಳು: ಪುನೀತ್​​ ನಿಧನದ ಬಳಿಕ ನಡೆದ 10 ಪ್ರಮುಖ ಘಟನೆಗಳೇನು?

ಅಪ್ಪು ಸಮಾಧಿ ಬಳಿ ಅಶ್ವಿನಿ ಮತ್ತು ಮಕ್ಕಳ ಕಣ್ಣೀರು; ಪುನೀತ್​ ನಿಧನರಾಗಿ ಇಂದಿಗೆ 2 ತಿಂಗಳು

Published On - 9:54 am, Fri, 31 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ