AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರು 5 ರೂಪಾಯಿ ಕೊಟ್ಟರೂ ಅದು ಮಹಾ ದೇಣಿಗೆಯಾಗಲಿದೆ’; ವಿಶೇಷ ಮನವಿ ಮಾಡಿದ ಗಾಯಕ ವಿಜಯ್​ ಪ್ರಕಾಶ್​

ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

‘ಜನರು 5 ರೂಪಾಯಿ ಕೊಟ್ಟರೂ ಅದು ಮಹಾ ದೇಣಿಗೆಯಾಗಲಿದೆ’; ವಿಶೇಷ ಮನವಿ ಮಾಡಿದ ಗಾಯಕ ವಿಜಯ್​ ಪ್ರಕಾಶ್​
ವಿಜಯ್​ ಪ್ರಕಾಶ್
ರಾಜೇಶ್ ದುಗ್ಗುಮನೆ
|

Updated on: Jun 24, 2021 | 4:26 PM

Share

ಕೊವಿಡ್​ ಸಂಕಷ್ಟದ ಸಂದರ್ಭದಿಂದ ಸಾಕಷ್ಟು ಜನರಿಗೆ ತೊಂದರೆ ಎದುರಾಗಿದೆ. ಇದಕ್ಕೆ ಕಲಾವಿದರು ಕೂಡ ಹೊರತಾಗಿಲ್ಲ. ಸಾಕಷ್ಟು ಕಲಾವಿದರು ಶೂಟಿಂಗ್​ ಇಲ್ಲದೆ, ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ಸಹಾಯಕ್ಕೆ ಗಾಯಕ ವಿಜಯ್​ ಪ್ರಕಾಶ್​ ನೇತೃತ್ವದ ತಂಡ ಮುಂದೆ ಬಂದಿದೆ. ‘ಕಲಾನಿಧಿ’ ಕಾರ್ಯಕ್ರಮದ ಮೂಲಕ ಅವರು ಕಲಾವಿದರ ಸಹಾಯಕ್ಕೆ ನಿಂತಿದ್ದಾರೆ.

ಗಾಯಕ ವಿಜಯ್‌ಪ್ರಕಾಶ್ ಈ ಕಾರ್ಯಕ್ರಮದ ನೇತೃತ್ವ ಹೊತ್ತುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಂಸದ ತೇಜಸ್ವಿ ಸೂರ್ಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆದಿದೆ. ಜೂನ್ 25-27 ಅವಧಿಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ವಿಜಯ್​ ಪ್ರಕಾಶ್, ‘ಈ ಕಲಾನಿಧಿಯ ನಿಧಿ ಕಲಾವಿದರಿಗೆ ಸಲ್ಲಲಿದೆ. ಸಮಾಜದಲ್ಲಿ ಹಲವರು ಕಷ್ಟ ಅನುಭವಿಸುತ್ತಿದ್ದಾರೆ. ಇವರ ಜೊತೆ ಕಲಾವಿದರು ಕಷ್ಟದಲ್ಲಿದ್ದಾರೆ. ಇದಕ್ಕೆ ಪರಿಹಾರವಾಗಿ ಸಿಕ್ಕಿದ್ದೇ ಕಲಾನಿಧಿ ಕಾರ್ಯಕ್ರಮ. ಕಲಾವಿದರು ಪ್ರತಿನಿತ್ಯ ಕನಸಿನಲ್ಲೇ ಇರುತ್ತಾರೆ. ಈ ಕಾರ್ಯಕ್ರಮಕ್ಕಾಗಿ ಕಲಾವಿದರು ಸಂಭಾವನೆ ಪಡೆಯದೆ ಹಾಡಿದ್ದಾರೆ. ಇದರಿಂದ ಸಂಗ್ರಹವಾಗುವ ನಿಧಿ ಕಲಾವಿದರಿಗೆ ಹಂಚುತ್ತೇವೆ. ಜನರು 5 ರೂಪಾಯಿ ಕೊಟ್ಟರು ಅದು ಮಹಾ ದೇಣಿಗೆಯಾಗಲಿದೆ’ ಎಂದಿದ್ದಾರೆ.

ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟ ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​ ಹತ್ತು ಲಕ್ಷ ರೂ. ಧನಸಹಾಯ ಮಾಡಿದ್ದರು. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ವಿಜಯ್​ ಕಿರಗಂದೂರು ಅವರು ಕನ್ನಡ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಒಕ್ಕೂಟದ ಸುಮಾರು 3200ಕ್ಕೂ ಅಧಿಕ ಮಂದಿಗೆ ಧನಸಹಾಯ ಮಾಡಿದ್ದರು. ಉಪೇಂದ್ರ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಸೇರಿದಂತೆ ಹಲವರು ಜನಪರ ಕಾರ್ಯ ಮಾಡುತ್ತಿದ್ದಾರೆ. ನಟ ಯಶ್​ ಕೂಡ ಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರಿಗೆ ತಲಾ 5 ಸಾವಿರ ರೂಪಾಯಿ ನೀಡುವ ಮೂಲಕ ಸಹಾಯ ಮಾಡಿದ್ದರು. ಈಗ ವಿಜಯ್​ ಪ್ರಕಾಶ್​ ಭಿನ್ನ ರೂಪದಲ್ಲಿ ಸಹಾಯ ಮಾಡೋಕೆ ಮುಂದಾಗಿದ್ದಾರೆ.

ಇದನ್ನೂ ಓದಿ:

 ಕನ್ನಡ ಚಿತ್ರರಂಗದ ಜೋಡೆತ್ತು ಡಿ ಬಾಸ್; ಯಶ್ ಬಾಸ್ ಸಹಾಯಕ್ಕೆ ಅಭಿಮಾನಿಗಳ ಸಲ್ಯೂಟ್

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್