AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ‘ಕಲಾ ತಪಸ್ವಿ’ ರಾಜೇಶ್​ ನಿಧನ; ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಹಿರಿಯ ನಟ

Actor Rajesh Death: ಹಿರಿಯ ನಟ ರಾಜೇಶ್​ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

Breaking: ‘ಕಲಾ ತಪಸ್ವಿ’ ರಾಜೇಶ್​ ನಿಧನ; ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಹಿರಿಯ ನಟ
ಕಲಾ ತಪಸ್ವಿ ರಾಜೇಶ್​
TV9 Web
| Edited By: |

Updated on:Feb 19, 2022 | 11:00 AM

Share

ಚಂದನವನದ ಖ್ಯಾತ ನಟ ‘ಕಲಾ ತಪಸ್ವಿ’ ರಾಜೇಶ್​ (Kalatapasvi Rajesh) ಅವರು ಇಂದು ಮುಂಜಾನೆ (ಶನಿವಾರ, ಫೆ.19)​ ಕೊನೆಯುಸಿರು ಎಳೆದಿದ್ದಾರೆ. ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ರಾಜೇಶ್ (Actor Rajesh)​ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್​​ ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಕಡೆಗೂ ರಾಜೇಶ್​ ಬದುಕುಳಿಯಲಿಲ್ಲ ಎಂಬುದು ನೋವಿನ ಸಂಗತಿ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಆಪ್ತರು ಕಂಬಿನಿ ಮಿಡಿಯುತ್ತಿದ್ದಾರೆ. ರಾಜೇಶ್​ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

1932ರ ಏ.15ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್, ಅಭಿನಯದ ಬಗ್ಗೆ ರಾಜೇಶ್​ ಅವರು ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಮನೆಯವರಿಗೆ ಗೊತ್ತಿಲ್ಲದಂತೆಯೇ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ರಾಜೇಶ್​ ಜನಿಸಿದ್ದು ಬೆಂಗಳೂರಿನಲ್ಲಿ. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್​ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ಕಲಾ ತಪಸ್ವಿ’ ರಾಜೇಶ್​ ಎಂದೇ ಅವರು ಫೇಮಸ್​ ಆದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.

ರಾಜೇಶ್​ ಅವರ ಪುತ್ರಿ ಆಶಾ ರಾಣಿ ಕೂಡ ಚಿತ್ರರಂಗದಲ್ಲಿ ಯಶಸ್ಸು ಕಂಡವರು. ಆಶಾ ರಾಣಿ ಅವರನ್ನು ನಟ ಅರ್ಜುನ್​ ಸರ್ಜಾ 1988ರಲ್ಲಿ ಮದುವೆ ಆದರು. ಹೀಗೆ ರಾಜೇಶ್​ ಅವರ ಕುಟುಂಬದ ಹಲವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಇಂದು ರಾಜೇಶ್​ ನಿಧನದಿಂದ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಸೊಸೆ ತಂದ ಸೌಭಾಗ್ಯ, ದೇವರ ದುಡ್ಡ, ಕಲಿಯುಗ, ದೇವರ ಗುಡಿ, ವೀರ ಸಂಕಲ್ಪ, ಗಂಗೆ ಗೌರಿ ಸೇರಿದಂತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್​ ಬಣ್ಣ ಹಚ್ಚಿದ್ದರು. ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್​ ಮಾಂಕ್​’ ಸಿನಿಮಾದಲ್ಲಿ ಅವರೊಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ:

Shamita Shetty: ಬಿಗ್​ ಬಾಸ್​ ಎಫೆಕ್ಟ್​; ಥೆರೆಪಿಗೆ ಒಳಗಾಗುತ್ತಿದ್ದಾರೆ ಶಮಿತಾ ಶೆಟ್ಟಿ

Published On - 7:14 am, Sat, 19 February 22

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ