AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ‘ಕಲಾ ತಪಸ್ವಿ’ ರಾಜೇಶ್​ ನಿಧನ; ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಹಿರಿಯ ನಟ

Actor Rajesh Death: ಹಿರಿಯ ನಟ ರಾಜೇಶ್​ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

Breaking: ‘ಕಲಾ ತಪಸ್ವಿ’ ರಾಜೇಶ್​ ನಿಧನ; ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಹಿರಿಯ ನಟ
ಕಲಾ ತಪಸ್ವಿ ರಾಜೇಶ್​
TV9 Web
| Edited By: |

Updated on:Feb 19, 2022 | 11:00 AM

Share

ಚಂದನವನದ ಖ್ಯಾತ ನಟ ‘ಕಲಾ ತಪಸ್ವಿ’ ರಾಜೇಶ್​ (Kalatapasvi Rajesh) ಅವರು ಇಂದು ಮುಂಜಾನೆ (ಶನಿವಾರ, ಫೆ.19)​ ಕೊನೆಯುಸಿರು ಎಳೆದಿದ್ದಾರೆ. ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ರಾಜೇಶ್ (Actor Rajesh)​ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್​​ ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಕಡೆಗೂ ರಾಜೇಶ್​ ಬದುಕುಳಿಯಲಿಲ್ಲ ಎಂಬುದು ನೋವಿನ ಸಂಗತಿ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಆಪ್ತರು ಕಂಬಿನಿ ಮಿಡಿಯುತ್ತಿದ್ದಾರೆ. ರಾಜೇಶ್​ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

1932ರ ಏ.15ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್, ಅಭಿನಯದ ಬಗ್ಗೆ ರಾಜೇಶ್​ ಅವರು ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಮನೆಯವರಿಗೆ ಗೊತ್ತಿಲ್ಲದಂತೆಯೇ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ರಾಜೇಶ್​ ಜನಿಸಿದ್ದು ಬೆಂಗಳೂರಿನಲ್ಲಿ. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್​ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ಕಲಾ ತಪಸ್ವಿ’ ರಾಜೇಶ್​ ಎಂದೇ ಅವರು ಫೇಮಸ್​ ಆದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.

ರಾಜೇಶ್​ ಅವರ ಪುತ್ರಿ ಆಶಾ ರಾಣಿ ಕೂಡ ಚಿತ್ರರಂಗದಲ್ಲಿ ಯಶಸ್ಸು ಕಂಡವರು. ಆಶಾ ರಾಣಿ ಅವರನ್ನು ನಟ ಅರ್ಜುನ್​ ಸರ್ಜಾ 1988ರಲ್ಲಿ ಮದುವೆ ಆದರು. ಹೀಗೆ ರಾಜೇಶ್​ ಅವರ ಕುಟುಂಬದ ಹಲವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಇಂದು ರಾಜೇಶ್​ ನಿಧನದಿಂದ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಸೊಸೆ ತಂದ ಸೌಭಾಗ್ಯ, ದೇವರ ದುಡ್ಡ, ಕಲಿಯುಗ, ದೇವರ ಗುಡಿ, ವೀರ ಸಂಕಲ್ಪ, ಗಂಗೆ ಗೌರಿ ಸೇರಿದಂತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್​ ಬಣ್ಣ ಹಚ್ಚಿದ್ದರು. ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್​ ಮಾಂಕ್​’ ಸಿನಿಮಾದಲ್ಲಿ ಅವರೊಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ.

ಇದನ್ನೂ ಓದಿ:

Shamita Shetty: ಬಿಗ್​ ಬಾಸ್​ ಎಫೆಕ್ಟ್​; ಥೆರೆಪಿಗೆ ಒಳಗಾಗುತ್ತಿದ್ದಾರೆ ಶಮಿತಾ ಶೆಟ್ಟಿ

Published On - 7:14 am, Sat, 19 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ