AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಜೇಶ್​ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಕಲಾತಪಸ್ವಿ’ಗೆ ಅಂತಿಮ ವಿದಾಯ

Kalatapasvi Rajesh Funeral: ಹಾಲುಮತ ಸಂಪ್ರದಾಯದಂತೆ ರಾಜೇಶ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಬೆಂಗಳೂರು ಉತ್ತರ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಇರುವ ಸ್ನೇಹಿತ ಸಿದ್ದಲಿಂಗಯ್ಯನವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ನಟ ರಾಜೇಶ್​ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಕಲಾತಪಸ್ವಿ’ಗೆ ಅಂತಿಮ ವಿದಾಯ
ನಟ ರಾಜೇಶ್​ ಅಂತ್ಯಕ್ರಿಯೆ
TV9 Web
| Edited By: |

Updated on:Feb 19, 2022 | 7:14 PM

Share

ಹಿರಿಯ ನಟ ರಾಜೇಶ್​ (Kalatapasvi Rajesh) ನಿಧನದಿಂದಾಗಿ ಕನ್ನಡ ಚಿತ್ರದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ವಯೋಸಹಜ ಕಾಯಿಲೆಯಿಂದ ಇಂದು (ಫೆ.19) ಮೃತರಾದ ಅವರಿಗೆ 82 ವರ್ಷ ವಯಸ್ಸಾಗಿತ್ತು. ಶನಿವಾರ ಸಂಜೆಯೇ ಅವರ ಅವರ ಅಂತ್ಯಕ್ರಿಯೆ (Kalatapasvi Rajesh Funeral) ನೆರವೇರಿಸಲಾಗಿದೆ. ‘ಕಲಾತಪಸ್ವಿ’ ರಾಜೇಶ್​ ಅವರು ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ಅಗಲಿದ ಈ ಸಾಧಕನಿಗೆ ಪೊಲೀಸ್ ಗೌರವದೊಂದಿಗೆ ಅಂತಿಮ ವಿದಾಯ ಹೇಳಲಾಗಿದೆ. ಹಾಲುಮತ ಸಂಪ್ರದಾಯದಂತೆ ರಾಜೇಶ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಇಬ್ಬರು ಪುತ್ರರಾದ ಸದಾನಂದ, ಧನಂಜಯ ಹಾಗೂ ಅಳಿಯ ಅರ್ಜುನ್​ ಸರ್ಜ (Arjun Sarja) ಅವರು ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಇರುವ ಸ್ನೇಹಿತ ಸಿದ್ದಲಿಂಗಯ್ಯನವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್​ ಅವರನ್ನು ಫೆ.9ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಿದರೂ ಕೂಡ ಅವರು ಬದುಕುಳಿಯಲಿಲ್ಲ. ಚಿಕಿತ್ಸೆ ಫಲಿಸದೇ ಅವರು ಇಂದು ಮುಂಜಾನೆ ನಿಧನರಾದರು. ಕುಟುಂಬದವರು ಮತ್ತು ಆಪ್ತರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದಾರೆ.

ರಾಜೇಶ್​ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಲಾಗಿದೆ. ಅಂತ್ಯಸಂಸ್ಕಾರಕ್ಕೂ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್​ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಬಂದು ಹಿರಿಯ ನಟನಿಗೆ ಅಂತಿಮ ನಮನ ಸಲ್ಲಿಸಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ‘ರಾಜೇಶ್​ ಅಗಲಿಕೆ ಸದಾಕಾಲ ನಮ್ಮನ್ನು ಕಾಡಲಿದೆ. ಅವರು ನಟಿಸಿರುವ ಚಿತ್ರಗಳು ಸದಾಕಾಲ ನೆನಪಿರುತ್ತದೆ. ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ’ ಎಂದು ಬೊಮ್ಮಾಯಿ ಹೇಳಿದರು. ಸಿಎಂ ಬೊಮ್ಮಾಯಿ ಜೊತೆ ಆಗಮಿಸಿದ್ದ ಸಚಿವ ಮುರುಗೇಶ್ ನಿರಾಣಿ ಕೂಡ ಅಂತಿಮ ದರ್ಶನ ಪಡೆದರು.

ರಾಜೇಶ್​ ಜೊತೆಗಿನ ಒಡನಾಟ ಸ್ಮರಿಸಿದ ಸಿದ್ದರಾಮಯ್ಯ:

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನದ ಬಳಿಕ ರಾಜೇಶ್​ ಬಗ್ಗೆ ಸಿದ್ದರಾಮಯ್ಯ ಮಾತನಾಡಿದರು. ‘ಆ ಕಾಲದಲ್ಲಿ ರಾಜೇಶ್​ ಅವರು ಬಹಳ ಜನಪ್ರಿಯರಾಗಿದ್ದರು. ವೈಯಕ್ತಿಕವಾಗಿ ನನಗೆ ಅವರು ಹೆಚ್ಚು ಪರಿಚಯವಿದ್ದರು. ಅನೇಕ ಬಾರಿ ಕನಕ ಜಯಂತಿ ಕಾರ್ಯಕ್ರಮದ ವೇದಿಕೆಗಳಲ್ಲಿ ನಾವು ಜೊತೆಯಾಗಿದ್ದೆವು. ಹಲವು ಸಲ ಅವರು ನಮ್ಮ ಮನೆಗೆ ಬಂದಿದ್ದರು. ಕನಕದಾಸರ ಬಗ್ಗೆ ರಾಜೇಶ್​ ಅವರು ಬಹಳ ಅಧ್ಯಯನ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರನ್ನು ಭೇಟಿ ಆಗಲು ಸಾಧ್ಯವಾಗಿರಲಿಲ್ಲ. ಅವರ ಅನಾರೋಗ್ಯದ ಬಗ್ಗೆ ಪತ್ರಿಕೆಯಲ್ಲಿ ನೋಡಿದಾಗ ತಿಳಿದಿತ್ತು. ವಯೋಸಹಜ ಕಾಯಿಲೆಗಳು ಬರುತ್ತವೆ. ರಾಜೇಶ್​ ನಿಧನದಿಂದ ಕನ್ನಡ ಚಿತ್ರರಂಗ ಉತ್ತಮ ನಟನನ್ನು ಕಳೆದುಕೊಂಡಿದೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​-ರಾಜೇಶ್​ ಕೊನೇ ಭೇಟಿಯ ಕ್ಷಣಗಳು; ಅಗಲಿದ ಸಾಧಕರಿಗೆ ಇದು ಚಿತ್ರನಮನ

‘ಕಲಾ ತಪಸ್ವಿ’ ರಾಜೇಶ್​​ ಅವರಿಗಿತ್ತು ಮೂರು ಹೆಸರು; ಹೆಸರಿನ ಹಿಂದಿನ ಕುತೂಹಲಕರ ಮಾಹಿತಿ ಇಲ್ಲಿದೆ

Published On - 6:53 pm, Sat, 19 February 22

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್