AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ‘ಕಾಲವೇ ಮೋಸಗಾರ’ ರಿಲೀಸ್; ಜೋರಾಗಿದೆ ಪರಭಾಷೆ ಸಿನಿಮಾಗಳ ಪೈಪೋಟಿ

ಹೊಸಬರಿಗಾದರೂ, ಸ್ಟಾರ್ ನಟರಿಗಾದರೂ ಶುಕ್ರವಾರ ಎಂದರೆ ಹೊಸ ಅಧ್ಯಾಯ ಇದ್ದಂತೆ. ವರ್ಷವಿಡೀ ಕಷ್ಟಪಟ್ಟು ಮಾಡಿದ ಸಿನಿಮಾಗೆ ಜನರ ಪ್ರತಿಕ್ರಿಯೆ ತಿಳಿಯುವ ದಿನ ಅದು. ಈ ಶುಕ್ರವಾರ (ಜೂ.20) ‘ಕಾಲವೇ ಮೋಸಗಾರ’, ‘ಬುಲೆಟ್’ ಸೇರಿದಂತೆ ಒಂದಷ್ಟು ಸಿನಿಮಾಗಳು ತೆರೆಕಾಣುತ್ತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಈ ವಾರ ‘ಕಾಲವೇ ಮೋಸಗಾರ’ ರಿಲೀಸ್; ಜೋರಾಗಿದೆ ಪರಭಾಷೆ ಸಿನಿಮಾಗಳ ಪೈಪೋಟಿ
Bharath Sagar, Dhanush, Nagarjuna, Aamir Khan
ಮದನ್​ ಕುಮಾರ್​
|

Updated on: Jun 19, 2025 | 7:09 PM

Share

ಪ್ರತಿ ಶುಕ್ರವಾರ ಬಂದರೆ ಹೊಸ ಚಿತ್ರಗಳ (New Movies) ನಡುವೆ ಪೈಪೋಟಿ ಜೋರಾಗುತ್ತದೆ. ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಹೊಸ ಹೊಸ ತಂಡಗಳು ಚಿತ್ರಮಂದಿರಕ್ಕೆ ಕಾಲಿಡುತ್ತವೆ. ಈ ವಾರ (ಜೂನ್ 20) ಕೂಡ ಹೊಸ ಕಲಾವಿದರ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಹಾಗಂತ ಈ ಸಿನಿಮಾಗಳ ಹಾದಿ ಸುಗಮವಾಗಿಲ್ಲ. ಯಾಕೆಂದರೆ ಪರಭಾಷೆಯ ದೊಡ್ಡ ದೊಡ್ಡ ಸ್ಟಾರ್ ನಟರ ಸಿನಿಮಾಗಳು ಪೈಪೋಟಿ ನೀಡುತ್ತಿವೆ. ಕನ್ನಡದಲ್ಲಿ ‘ಕಾಲವೇ ಮೋಸಗಾರ’ (Kalave Mosagara), ‘ಬುಲೆಟ್’, ‘ಡೆಡ್ಲಿ ಲವರ್ಸ್’ ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ.

ಬಹಳ ಹಿಂದಿಯೇ ಸೆಟ್ಟೇರಿದ ಸಿನಿಮಾ ‘ಕಾಲವೇ ಮೋಸಗಾರ’. ಈ ಚಿತ್ರದಲ್ಲಿ ಭರತ್ ಸಾಗರ್ ಅವರು ಹೀರೋ ಆಗಿ ನಟಿಸಿದ್ದಾರೆ. ಸಂಜಯ್ ಪುರಾಣಿಕ್ ಅವರು ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಆ್ಯಕ್ಷನ್-ಥ್ರಿಲ್ಲರ್ ಲವ್ ಸ್ಟೋರಿ ಈ ಸಿನಿಮಾದಲ್ಲಿದೆ. ಮೊದಲ ಬಾರಿ ಹೀರೋ ಆಗಿ ನಟಿಸಿರುವ ಭರತ್ ಸಾಗರ್ ಅವರು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದಾರೆ.

‘ಕಾಲವೇ ಮೋಸಗಾರ’ ಸಿನಿಮಾದ ಜೊತೆಗೆ ಕನ್ನಡದಲ್ಲಿ ಇನ್ನೂ ಕೆಲವು ಸಿನಿಮಾಗಳು ತೆರೆ ಕಾಣುತ್ತಿವೆ. ಧರ್ಮ ಕೀರ್ತಿರಾಜ್ ನಟಿಸಿರುವ ‘ಬುಲೆಟ್’ ಸಿನಿಮಾ ಸಹ ಜೂನ್ 20ಕ್ಕೆ ಬಿಡುಗಡೆ ಆಗುತ್ತಿದೆ. ಹೊಸ ಕಲಾವಿದರು ನಟಿಸಿರುವ ‘ಡೆಡ್ಲಿ ಲವರ್ಸ್’ ಸಿನಿಮಾ ಕೂಡ ತೆರೆಕಾಣುತ್ತಿದೆ. ಹೊಸಬರ ‘ಬ್ಲ್ಯಾಕ್ ಶೀಪ್’ ಸಿನಿಮಾ ಸಹ ರಿಲೀಸ್ ಆಗುತ್ತಿದೆ. ಈ ಎಲ್ಲ ಸಿನಿಮಾಗಳ ನಡುವೆ ಈಗಾಗಲೇ ಬಿಡುಗಡೆ ಆಗಿರುವ ‘ಮಾದೇವ’, ‘ಸಂಜು ವೆಡ್ಸ್ ಗೀತಾ 2’, ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗಳು ಕೂಡ ಪೈಪೋಟಿ ನೀಡುತ್ತಿವೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಇದನ್ನೂ ಓದಿ: ‘ಕಾಲವೇ ಮೋಸಗಾರ’ ಚಿತ್ರದಿಂದ ಗಾಂಧಿನಗರಕ್ಕೆ ಹೊಸ ಹೀರೋ ಭರತ್ ಸಾಗರ್ ಎಂಟ್ರಿ

ಪರಭಾಷೆಯ ಸ್ಟಾರ್ ನಟರ ಸಿನಿಮಾಗಳು ಕೂಡ ಜೂನ್ 20ಕ್ಕೆ ಬಿಡುಗಡೆ ಆಗುತ್ತಿವೆ. ಆಮಿರ್ ಖಾನ್ ಅವರು ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಮತ್ತು ಧನುಷ್, ನಾಗಾರ್ಜುನ, ರಶ್ಮಿಕಾ ಮಂದಣ್ಣ ನಟಿಸಿರುವ ‘ಕುಬೇರ’ ಸಿನಿಮಾ ಕೂಡ ತೆರೆಕಾಣುತ್ತಿದೆ. ಕುಬೇರ ಸಿನಿಮಾ ಕನ್ನಡಕ್ಕೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಪೈಪೋಟಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ