AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಜಿಗ’ ಸಿನಿಮಾದಲ್ಲಿ ತುಳುನಾಡಿನ ದೈವದ ರೋಚಕ ಕಥೆ; ಗಮನ ಸೆಳೆದ ಟ್ರೇಲರ್​

‘ಕಲ್ಜಿಗ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಇದು ಕರಾವಳಿಯ ಕಥೆ. ಹಾಗಾಗಿ ಆ ಪ್ರದೇಶದ ಕಲಾವಿದರೇ ಹೆಚ್ಚಾಗಿ ನಟಿಸಿದ್ದಾರೆ. ‘ಎ2 ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ನಲ್ಲಿ ಟ್ರೇಲರ್​ ಬಿಡುಗಡೆಯಾಗಿದೆ. ವೀಕ್ಷಕರಿಂದ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಗೆ ‘ಕಲ್ಜಿಗ’ ಕೂಡ ಸೇರ್ಪಡೆ ಆಗಿದೆ. ಸೆಪ್ಟೆಂಬರ್​ 13ರಂದು ಈ ಚಿತ್ರಕ್ಕೆ ರಿಲೀಸ್​ ಆಗುತ್ತಿದೆ.

‘ಕಲ್ಜಿಗ’ ಸಿನಿಮಾದಲ್ಲಿ ತುಳುನಾಡಿನ ದೈವದ ರೋಚಕ ಕಥೆ; ಗಮನ ಸೆಳೆದ ಟ್ರೇಲರ್​
‘ಕಲ್ಜಿಗ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Aug 20, 2024 | 9:17 PM

Share

ತುಳುನಾಡಿನ ಸೊಗಡಿನ ಕಥೆಗಳು ಇರುವ ಸಿನಿಮಾಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ‘ಕಾಂತಾರ’ ಚಿತ್ರದ ಯಶಸ್ಸಿನ ಬಳಿಕ ಈ ಟ್ರೆಂಡ್​ ಹೆಚ್ಚಾಗಿದೆ. ಈಗ ಅದೇ ಫ್ಲೇವರ್​ನಲ್ಲಿ ‘ಕಲ್ಜಿಗ’ ಸಿನಿಮಾ ಮೂಡಿಬಂದಿದೆ. ಸುಮನ್ ಸುವರ್ಣ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಾಯಿತು. ‘ಹಿಮಾನಿ ಫಿಲ್ಮ್ಸ್​’ ಬ್ಯಾನರ್​ ಮೂಲಕ ‘ಕಲ್ಜಿಗ’ ಸಿನಿಮಾ ನಿರ್ಮಾಣ ಆಗಿದೆ. ಮಂಗಳೂರಿನ ಭಾರತ್ ಸಿನಿಮಾಸ್​ನಲ್ಲಿ ಅದ್ದೂರಿಯಾಗಿ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ನಡೆಯಿತು. ವೇದವ್ಯಾಸ ಕಾಮತ್, ರಮಾನಾಥ ರೈ, ಅಶೋಕ್ ರೈ, ದೇವದಾಸ್ ಕಾಪಿಕಾಡ್, ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

‘ಕಲ್ಜಿಗ’ ಚಿತ್ರ ರಿಲೀಸ್​ಗೆ ಸಜ್ಜಾಗಿದೆ. ಧರ್ಮದ ಹಾದಿಯಲ್ಲಿ ಅಧರ್ಮದ ನೆರಳು ಬಿದ್ದ ಬಳಿಕ ಘಟಿಸುವ ರೋಚಕ ಕಥೆ ಈ ಸಿನಿಮಾದಲ್ಲಿ ಇದೆ ಎಂದು ಚಿತ್ರತಂಡ ಹೇಳಿದೆ. ಶರತ್ ಕುಮಾರ್ ಎ.ಕೆ. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಹಂಸಲೇಖ ಅವರು ಸಂಗೀತ ನೀಡಿ, ಸಾಹಿತ್ಯ ಬರೆದಿದ್ದಾರೆ ಎಂಬುದು ವಿಶೇಷ. ಸಚಿನ್ ಶೆಟ್ಟಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಯಶ್ವಿನ್ ಕೆ. ಶೆಟ್ಟಿಗಾರ್ ಅವರ ಸಂಕಲನ ಈ ಸಿನಿಮಾಗಿದೆ. ‘ಕಾಂತಾರ’ ಖ್ಯಾತಿಯ ಸನೀಲ್ ಗುರು ಅವರು ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ.

ತುಳು ಸಿನಿಮಾರಂಗದಲ್ಲಿ ‘ಕಿಂಗ್ ಆಫ್ ಆ್ಯಕ್ಷನ್’ ಎಂದು ಫೇಮಸ್​ ಆಗಿರುವ ಅರ್ಜುನ್ ಕಾಪಿಕಾಡ್ ಅವರು ‘ಕಲ್ಜಿಗ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಸುಶ್ಮಿತಾ ಭಟ್ ಕೂಡ ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ‘ಗಿರ್ಗಿಟ್’, ‘ಸರ್ಕಸ್’, ‘ಗಮ್ಜಾಲ್’ ಮುಂತಾದ ತುಳು ಚಿತ್ರಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ಸುಮನ್ ಸುವರ್ಣ ಅವರಿಗೆ ಸ್ವತಂತ್ರ ನಿರ್ದೇಶಕನಾಗಿ ‘ಕಲ್ಜಿಗ’ ಚೊಚ್ಚಲ ಸಿನಿಮಾ.

ಇದನ್ನೂ ಓದಿ: ದೈವದ ಪಾತ್ರ ಮಾಡಿದ ರಿಷಬ್​ ಶೆಟ್ಟಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ

‘ಕಲ್ಜಿಗ’ ಸಿನಿಮಾದ ಟ್ರೇಲರ್​ ಬಿಡುಗಡೆಗೆ ಕಾರ್ಯಕ್ರಮದಲ್ಲಿ ದೈವ ನರ್ತಕರಾದ ಮಾಯಿಲ ಕುತ್ತಾರು, ರಾಘವ ಕುತ್ತಾರು ಹಾಗೂ ಜನಪದ ಪಾಡ್ದನ ಗಾಯಕಿ ಕುತ್ತಾರು ತಿಮ್ಮಕ್ಕ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ 500ಕ್ಕೂ ಅಧಿಕ ಮಂದಿ ನೆರೆದಿದ್ದರು. ಎಲ್ಲರಿಂದ ಟ್ರೇಲರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದರಿಂದ ‘ಕಲ್ಜಿಗ’ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಸೆಪ್ಟೆಂಬರ್​ 13ರಂದು ಬಿಡುಗಡೆ ಆಗಲಿದೆ. ಕರ್ನಾಟಕದ ಜೊತೆಗೆ ಹೊರರಾಜ್ಯಗಳಲ್ಲಿ ಹಾಗೂ ವಿದೇಶದಲ್ಲಿ ಸಿನಿಮಾವನ್ನು ರಿಲೀಸ್​ ಮಾಡಲು ತಯಾರಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು