
ನಟಿ ಬಿ. ಸರೋಜಾದೇವಿ (B Saroja Devi) ಅವರು ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾಗಳಲ್ಲಿ ಕೂಡ ನಟಿಸಿ ಫೇಮಸ್ ಆಗಿದ್ದರು. ಇಂದು (ಜುಲೈ 14) ಅವರು ನಿಧನರಾಗಿದ್ದು, ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ತಮಿಳು ಚಿತ್ರರಂಗದ ಕಮಲ್ ಹಾಸನ್, ರಜನಿಕಾಂತ್ (Rajinikanth) ಕೂಡ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಕಮಲ್ ಹಾಸನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬಿ. ಸರೋಜಾದೇವಿ ಬಗ್ಗೆ ಬರೆದುಕೊಂಡಿದ್ದಾರೆ. ‘ಸರೋಜಾ ದೇವಿ ಅಮ್ಮ ನನ್ನನ್ನು ಎಲ್ಲಿ ನೋಡಿದರೂ, ಯಾವುದೇ ವಯಸ್ಸಿನಲ್ಲಿಯೂ, ನನ್ನ ಕೆನ್ನೆಯನ್ನು ಬೆರಳಿನಿಂದ ಚಿವುಟಿ ಪ್ರೀತಿಯ ಮಗನೇ ಅಂತ ಕರೆಯುತ್ತಿದ್ದ ಮತ್ತೊಬ್ಬ ತಾಯಿ’ ಎಂದು ಕಮಲ್ ಹಾಸನ್ (Kamal Haasan) ನೆನಪಿಸಿಕೊಂಡಿದ್ದಾರೆ.
‘ಭಾಷೆ ಅಥವಾ ಪ್ರಾದೇಶಿಕ ಗಡಿಗಳಿಲ್ಲದೇ ಬದುಕಿದ ಕಲಾವಿದೆ ಬಿ. ಸರೋಜಾದೇವಿ ಅವರು ನಿಧನರಾಗಿದ್ದಾರೆ. ನನ್ನ ಎರಡನೇ ಸಿನಿಮಾ ಪಾರ್ಥಲ್ ಪಸಿ ತಿರುಮ್ ಚಿತ್ರೀಕರಣದ ಕ್ಷಣಗಳಿಂದ ಪ್ರಾರಂಭಿಸಿ, ನನ್ನ ಮನಸ್ಸಿನಲ್ಲಿ ಹಲವಾರು ಅಮರ ನೆನಪುಗಳು ತುಂಬಿ ತುಳುಕುತ್ತಿವೆ. ನನ್ನ ಕಣ್ಣುಗಳು ತೇವ ಆಗುತ್ತಿವೆ. ನನ್ನನ್ನು ನೋಡಲು ಯಾವಾಗಲೂ ಬಯಸುತ್ತಿದ್ದ ನನ್ನ ತಾಯಿಗೆ ನಾನು ನಮಸ್ಕರಿಸುತ್ತೇನೆ’ ಎಂದು ಕಮಲ್ ಹಾಸನ್ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ಲಕ್ಷಾಂತರ ಅಭಿಮಾನಿಗಳ ಹೃದಯಗಳನ್ನು ಸೂರೆಗೊಂಡ ಮಹಾನ್ ನಟಿ ಸರೋಜಾ ದೇವಿ ಈಗ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಜನಿಕಾಂತ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚಿತ್ರರಂಗಕ್ಕೆ ಸರೋಜಾದೇವಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತಿದೆ.
என்னைப் பார்க்கும் இடமெல்லாம் – என் எந்த வயதிலும் – கன்னம் கிள்ளும் விரலோடு, ‘செல்ல மகனே’ என்னும் குரலோடு இன்னொரு தாயாக இருந்தவர் சரோஜா தேவி அம்மா. மொழி, பிரதேச எல்லை இல்லாது வாழ்ந்த கலைஞர். மறைந்துவிட்டார். என் இரண்டாம் படமான ‘பார்த்தால் பசி தீரும்’ படப்பிடிப்புத் தருணங்கள்…
— Kamal Haasan (@ikamalhaasan) July 14, 2025
ಮಂಗಳವಾರ (ಜುಲೈ 15) ಚನ್ನಪಟ್ಟಣದಲ್ಲಿರುವ ತೋಟದಲ್ಲಿ ಬಿ. ಸರೋಜಾದೇವಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ಸರೋಜಾದೇವಿ ಅವರು ನಟಿಸಿದ್ದರು. ಬೆಂಗಳೂರಿನಲ್ಲಿ ಅನೇಕ ಸೆಲೆಬ್ರಿಟಿಗಳು ಮತ್ತು ಆಪ್ತರು ಬಂದು ಅಂತಿಮ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ: ನಟಿ ಬಿ. ಸರೋಜಾದೇವಿ ಬರೆದಿದ್ದ ವಿಲ್ಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹಿ
ನಟ ದರ್ಶನ್ ಅವರು ಸರೋಜಾದೇವಿ ಆತ್ಮಕ್ಕೆ ಶಾಂತಿಕೋರಿದ್ದಾರೆ. ‘ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ. ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ದರ್ಶನ್ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.