AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಪಟ್ಟು ಬಿಡದ ಕಮಲ್ ಹಾಸನ್

Kamal Haasan: ಕನ್ನಡ ಭಾಷೆಯ ಉಗಮದ ಬಗ್ಗೆ ಕಮಲ್ ಹಾಸನ್ ಆಡಿರುವ ಮಾತುಗಳು ವಿವಾದ ಎಬ್ಬಿಸಿವೆ. ಕಮಲ್ ತಮ್ಮ ಹೇಳಿಕೆಗೆ ಕ್ಷಮೆ ಕೇಳದಿದ್ದಲ್ಲಿ ಅವರ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದಿದೆ ಫಿಲಂ ಚೇಂಬರ್, ಆದರೆ ಇಂದು ಮಾತನಾಡಿರುವ ಕಮಲ್ ಹಾಸನ್ ತಾವು ಮಂಡಿ ಊರುವುದಿಲ್ಲ ಎಂದಿದ್ದಾರೆ.

ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಪಟ್ಟು ಬಿಡದ ಕಮಲ್ ಹಾಸನ್
Kamal Haasan
ಮಂಜುನಾಥ ಸಿ.
|

Updated on:May 30, 2025 | 1:12 PM

Share

ಕಮಲ್ ಹಾಸನ್ (Kamal Haasan) ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ರಾಜ್ಯದಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಕೆಲವೆಡೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಫಿಲಂ ಚೇಂಬರ್ ಹಾಗೂ ಕೆಲ ಕನ್ನಡಪರ ಸಂಘಟನೆಗಳು, ‘ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಕಮಲ್ ಹಾಸನ್ ಕೈಯಲ್ಲಿ ಕ್ಷಮೆ ಕೇಳಿಸಿಯೇ ಸಿದ್ದ ಎಂದು ಫಿಲಂ ಚೇಂಬರ್ ಪದಾಧಿಕಾರಿಗಳು ಹೇಳಿದ್ದಾರೆ. ಆದರೆ ಕಮಲ್ ಹಾಸನ್ ಮಂಡಿಯೂರಲು ನಕಾರಿದ್ದಾರೆ.

ಇಂದು (ಮೇ 30) ಚೆನ್ನೈನಲ್ಲಿ ಈ ಬಗ್ಗೆ ಮಾತನಾಡಿರುವ ನಟ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್​ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು. ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:‘ತಮಿಳಿಗೆ ಲಿಪಿ ನೀಡಿದ್ದು ಕನ್ನಡ’: ಕಮಲ್ ಹಾಸನ್​ಗೆ ಹಂಸಲೇಖ ಖಡಕ್ ತಿರುಗೇಟು

‘ಥಗ್ ಲೈಫ್’ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ ಕಮಲ್ ಹಾಸನ್, ‘ತಮಿಳಿನಿಂದಲೇ ಕನ್ನಡ ಭಾಷೆ ಜನಿಸಿದೆ’ ಎಂದಿದ್ದರು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹಿರಿಯ ನಟರಾದ ಜಗ್ಗೇಶ್, ಸುಮಲತಾ, ಜಯಮಾಲಿನಿ, ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ರಮ್ಯಾ, ನಟ ಚೇತನ್ ಅಹಿಂಸ ಇನ್ನೂ ಕೆಲವರು ಕಮಲ್ ಹಾಸನ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಕೇರಳದಲ್ಲಿ ಇದೇ ವಿವಾದದ ಬಗ್ಗೆ ಮಾತನಾಡಿದ್ದ ಕಮಲ್ ಹಾಸನ್, ‘ಭಾಷೆಯ ಬಗ್ಗೆ ಆಳವಾದ ಚರ್ಚೆ ಮಾಡುವ ಅರ್ಹತೆ ನನ್ನನ್ನೂ ಸೇರಿದಂತೆ ಯಾವ ರಾಜಕಾರಣಿಗಳಿಗೂ ಇಲ್ಲ. ಆದರೆ ನಾನು ಕನ್ನಡದ ಮೇಲಿನ ಪ್ರೀತಿಯಿಂದಲೇ ಆ ಮಾತನ್ನು ಹೇಳಿದ್ದೆ. ಪ್ರೀತಿಯಿಂದ ಆಡಿದ ಮಾತಿಗೆ ಕ್ಷಮೆ ಕೇಳಲು ಆಗದು, ಸ್ಪಷ್ಟನೆ ಮಾತ್ರವೇ ನೀಡಬಹುದು’ ಎಂದಿದ್ದರು. ಈಗ ಮತ್ತೊಮ್ಮೆ ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Fri, 30 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ