AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು

Kamal Haasan | Prashanth Neel: ಈ ಬಗ್ಗೆ ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ.

ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು
ಕಮಲ್​ ಹಾಸನ್​, ಪ್ರಶಾಂತ್​ ನೀಲ್​, ಜ್ಯೂ. ಎನ್​ಟಿಆರ್​
TV9 Web
| Edited By: |

Updated on:May 22, 2022 | 5:55 PM

Share

ಯಾವಾಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತೋ ಆಗಲೇ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ಕೂಡ ರಾಷ್ಟ್ರಮಟ್ಟದಲ್ಲಿ ಹೆಚ್ಚಿತು. ಎಲ್ಲ ಸೂಪರ್​ ಸ್ಟಾರ್​ ನಟರು ಕೂಡ ಪ್ರಶಾಂತ್​ ನೀಲ್​ ಜೊತೆ ಕೆಲಸ ಮಾಡಲು ಹಾತೊರೆಯುತ್ತಿದ್ದಾರೆ. ದೊಡ್ಡ ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕೂಡ ಅವರ ಚಿತ್ರಕ್ಕೆ ಬಂಡವಾಳ ಹೂಡಲು ಮುಂದೆ ಬಂದಿವೆ. ಆದರೆ ಈ ಸಂದರ್ಭದಲ್ಲಿ ಪ್ರಶಾಂತ್​ ನೀಲ್​ ಅವರು ಯಾರ ಚಿತ್ರಕ್ಕೆ ಗ್ರೀನ್​ ಸಿಗ್ನಲ್​ ನೀಡ್ತಾರೆ ಅನ್ನೋದು ಮುಖ್ಯ. ಜ್ಯೂ. ಎನ್​ಟಿಆರ್​ ಜೊತೆ ಅವರು ಸಿನಿಮಾ ಮಾಡ್ತಾರೆ ಎನ್ನುವ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದು ನಿಜವಾಗಿದೆ. ಮೇ 20ರಂದು ಜ್ಯೂ. ಎನ್​ಟಿಆರ್​ (Jr NTR) ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್​ ಆಯಿತು. ಈ ಚಿತ್ರದ ಬಗ್ಗೆ ಇನ್ನಷ್ಟು ಅಪ್​ಡೇಟ್​ ಕೇಳಿಬರುತ್ತಿದೆ. ಅಚ್ಚರಿಯ ವಿಷಯ ಏನೆಂದರೆ, ಇದೇ ಸಿನಿಮಾದಲ್ಲಿ ಖ್ಯಾತ ನಟ ಕಮಲ್​ ಹಾಸನ್​ (Kamal Haasan) ಕೂಡ ಅಭಿನಯಿಸಲಿದ್ದಾರೆ ಎಂಬ ಬಗ್ಗೆ ಈಗ ಗಾಸಿಪ್​ ಹರಡಿದೆ. ಈ ವಿಷಯ ಕೇಳಿ ಫ್ಯಾನ್ಸ್​ ಸಖತ್​ ಥ್ರಿಲ್​ ಆಗಿದ್ದಾರೆ.

ಪ್ರಶಾಂತ್​ ನೀಲ್​ ನಿರ್ದೇಶನದ ಸಿನಿಮಾದಲ್ಲಿ ಎಲ್ಲ ಪಾತ್ರಗಳೂ ಸ್ಟ್ರಾಂಗ್​ ಆಗಿರುತ್ತವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅದು ಸಾಬೀತಾಗಿದೆ. ಈಗ ಅವರ ಮುಂಬರುವ ಚಿತ್ರಕ್ಕೆ ಹೀರೋ ಯಾರು ಎಂಬುದನ್ನು ಕೇಳುವಷ್ಟೇ ಕುತೂಹಲದಲ್ಲಿ ವಿಲನ್​ ಯಾರು ಎಂದು ಕೇಳುತ್ತಾರೆ ಅಭಿಮಾನಿಗಳು. ಜ್ಯೂ. ಎನ್​ಟಿಆರ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನ ಸಿನಿಮಾದಲ್ಲಿ ಕಮಲ್​ ಹಾಸನ್​ ವಿಲನ್​ ಪಾತ್ರ ಮಾಡುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಇದನ್ನೂ ಓದಿ: ‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ

ಇದನ್ನೂ ಓದಿ
Image
ಸದ್ದಿಲ್ಲದೆ ಅಮೇಜಾನ್​ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್​ 2’; ಸಿನಿಮಾ ನೋಡೋಕೆ ಹಲವು ಷರತ್ತು
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
Fact Check: ‘ಕೆಜಿಎಫ್​ 3’ ಟ್ರೇಲರ್​ ಬಿಡುಗಡೆ ಆಗಿದ್ಯಾ? ವೈರಲ್ ಆಗಿರುವ ವಿಡಿಯೋದ ಅಸಲಿಯತ್ತು ಇಲ್ಲಿದೆ
Image
‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು

ಈ ಬಗ್ಗೆ ಚಿತ್ರತಂಡದಿಂದ ಯಾರೋ ಪ್ರತಿಕ್ರಿಯೆ ನೀಡಿಲ್ಲ. ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ. ಪ್ರಶಾಂತ್​ ನೀಲ್​ ಹೇಳಿರುವ ಕಥೆ ಕೇಳಿ ಕಮಲ್​ ಹಾಸನ್​ ಇಷ್ಟಪಟ್ಟಿದ್ದಾರೆ. ಅವರು ಜ್ಯೂ. ಎನ್​ಟಿಆರ್ ಎದುರು ವಿಲನ್​ ಆಗಿ ಕಾಣಿಸಿಕೊಳ್ಳಲು ಒಪ್ಪಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಒಂದು ವೇಳೆ ಈ ಸುದ್ದಿ ನಿಜವಾದರೆ ಇದೊಂದು ಹೈ-ವೋಲ್ಟೇಜ್​ ಕಾಂಬಿನೇಷನ್​ನ ಸಿನಿಮಾ ಆಗಲಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎನ್​ಟಿಆರ್​ 31’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ: ‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

ಪೋಸ್ಟರ್​ಗಳ ಮೂಲಕ ತಲೆಗೆ ಹುಳ ಬಿಟ್ಟ ಪ್ರಶಾಂತ್​ ನೀಲ್​:

‘ಕೆಜಿಎಫ್​ 2’ ಹಾಗೂ ‘ಸಲಾರ್​’ ಜೊತೆಗೆ ‘ಎನ್​ಟಿಆರ್​31’ ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ, ತಮ್ಮ ಫೇಸ್​ ಬುಕ್​ ಹಾಗೂ ಟ್ವಿಟರ್​ ಖಾತೆಯಲ್ಲಿ ಪ್ರಶಾಂತ್​ ನೀಲ್ ಹಂಚಿಕೊಂಡಿದ್ದಾರೆ. ಮೂರು ಸಿನಿಮಾಗಳ ಪೋಸ್ಟರ್​ಗಳನ್ನು ಒಟ್ಟಿಗೆ ಜೋಡಿಸಿರುವುದರಿಂದ ಸಿನಿಪ್ರಿಯರ ಮನದಲ್ಲಿ ಹೊಸ ಪ್ರಶ್ನೆ ಮೂಡಿದೆ. ‘ಕೆಜಿಎಫ್​ 2’, ‘ಸಲಾರ್​’ ಹಾಗೂ ‘ಎನ್​ಟಿಆರ್​ 31’ ಚಿತ್ರಗಳ ಕಥೆ ಒಂದಕ್ಕೊಂದು ಕನೆಕ್ಟ್​ ಆಗಿದೆ ಎಂದು ಜನರು ಊಹಿಸುತ್ತಿದ್ದಾರೆ. ಅದನ್ನು ಕಮೆಂಟ್​ಗಳ ಮೂಲಕ ತಿಳಿಸಲಾಗುತ್ತಿದೆ. ಆದರೆ ಈ ಕಮೆಂಟ್​ಗಳಿಗೆ ಪ್ರಶಾಂತ್​ ನೀಲ್​ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ. ‘ಸಲಾರ್​’, ‘ಕೆಜಿಎಫ್​ 2’, ‘ಎನ್​ಟಿಆರ್​ 31’ ಮಾತ್ರವಲ್ಲದೇ ‘ಬಘೀರ’ ಚಿತ್ರದ ಕಥೆ ಕೂಡ ಇವುಗಳಿಗೆ ಕನೆಕ್ಟ್​ ಆಗಿರಬಹುದೇ ಎಂದು ಫ್ಯಾನ್ಸ್​ ಪ್ರಶ್ನಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Sun, 22 May 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!