ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು

Kamal Haasan | Prashanth Neel: ಈ ಬಗ್ಗೆ ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ.

ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು
ಕಮಲ್​ ಹಾಸನ್​, ಪ್ರಶಾಂತ್​ ನೀಲ್​, ಜ್ಯೂ. ಎನ್​ಟಿಆರ್​
Follow us
| Edited By: ಮದನ್​ ಕುಮಾರ್​

Updated on:May 22, 2022 | 5:55 PM

ಯಾವಾಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತೋ ಆಗಲೇ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ಕೂಡ ರಾಷ್ಟ್ರಮಟ್ಟದಲ್ಲಿ ಹೆಚ್ಚಿತು. ಎಲ್ಲ ಸೂಪರ್​ ಸ್ಟಾರ್​ ನಟರು ಕೂಡ ಪ್ರಶಾಂತ್​ ನೀಲ್​ ಜೊತೆ ಕೆಲಸ ಮಾಡಲು ಹಾತೊರೆಯುತ್ತಿದ್ದಾರೆ. ದೊಡ್ಡ ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕೂಡ ಅವರ ಚಿತ್ರಕ್ಕೆ ಬಂಡವಾಳ ಹೂಡಲು ಮುಂದೆ ಬಂದಿವೆ. ಆದರೆ ಈ ಸಂದರ್ಭದಲ್ಲಿ ಪ್ರಶಾಂತ್​ ನೀಲ್​ ಅವರು ಯಾರ ಚಿತ್ರಕ್ಕೆ ಗ್ರೀನ್​ ಸಿಗ್ನಲ್​ ನೀಡ್ತಾರೆ ಅನ್ನೋದು ಮುಖ್ಯ. ಜ್ಯೂ. ಎನ್​ಟಿಆರ್​ ಜೊತೆ ಅವರು ಸಿನಿಮಾ ಮಾಡ್ತಾರೆ ಎನ್ನುವ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದು ನಿಜವಾಗಿದೆ. ಮೇ 20ರಂದು ಜ್ಯೂ. ಎನ್​ಟಿಆರ್​ (Jr NTR) ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್​ ಆಯಿತು. ಈ ಚಿತ್ರದ ಬಗ್ಗೆ ಇನ್ನಷ್ಟು ಅಪ್​ಡೇಟ್​ ಕೇಳಿಬರುತ್ತಿದೆ. ಅಚ್ಚರಿಯ ವಿಷಯ ಏನೆಂದರೆ, ಇದೇ ಸಿನಿಮಾದಲ್ಲಿ ಖ್ಯಾತ ನಟ ಕಮಲ್​ ಹಾಸನ್​ (Kamal Haasan) ಕೂಡ ಅಭಿನಯಿಸಲಿದ್ದಾರೆ ಎಂಬ ಬಗ್ಗೆ ಈಗ ಗಾಸಿಪ್​ ಹರಡಿದೆ. ಈ ವಿಷಯ ಕೇಳಿ ಫ್ಯಾನ್ಸ್​ ಸಖತ್​ ಥ್ರಿಲ್​ ಆಗಿದ್ದಾರೆ.

ಪ್ರಶಾಂತ್​ ನೀಲ್​ ನಿರ್ದೇಶನದ ಸಿನಿಮಾದಲ್ಲಿ ಎಲ್ಲ ಪಾತ್ರಗಳೂ ಸ್ಟ್ರಾಂಗ್​ ಆಗಿರುತ್ತವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅದು ಸಾಬೀತಾಗಿದೆ. ಈಗ ಅವರ ಮುಂಬರುವ ಚಿತ್ರಕ್ಕೆ ಹೀರೋ ಯಾರು ಎಂಬುದನ್ನು ಕೇಳುವಷ್ಟೇ ಕುತೂಹಲದಲ್ಲಿ ವಿಲನ್​ ಯಾರು ಎಂದು ಕೇಳುತ್ತಾರೆ ಅಭಿಮಾನಿಗಳು. ಜ್ಯೂ. ಎನ್​ಟಿಆರ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನ ಸಿನಿಮಾದಲ್ಲಿ ಕಮಲ್​ ಹಾಸನ್​ ವಿಲನ್​ ಪಾತ್ರ ಮಾಡುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಇದನ್ನೂ ಓದಿ: ‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ

ಇದನ್ನೂ ಓದಿ
Image
ಸದ್ದಿಲ್ಲದೆ ಅಮೇಜಾನ್​ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್​ 2’; ಸಿನಿಮಾ ನೋಡೋಕೆ ಹಲವು ಷರತ್ತು
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
Fact Check: ‘ಕೆಜಿಎಫ್​ 3’ ಟ್ರೇಲರ್​ ಬಿಡುಗಡೆ ಆಗಿದ್ಯಾ? ವೈರಲ್ ಆಗಿರುವ ವಿಡಿಯೋದ ಅಸಲಿಯತ್ತು ಇಲ್ಲಿದೆ
Image
‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು

ಈ ಬಗ್ಗೆ ಚಿತ್ರತಂಡದಿಂದ ಯಾರೋ ಪ್ರತಿಕ್ರಿಯೆ ನೀಡಿಲ್ಲ. ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ. ಪ್ರಶಾಂತ್​ ನೀಲ್​ ಹೇಳಿರುವ ಕಥೆ ಕೇಳಿ ಕಮಲ್​ ಹಾಸನ್​ ಇಷ್ಟಪಟ್ಟಿದ್ದಾರೆ. ಅವರು ಜ್ಯೂ. ಎನ್​ಟಿಆರ್ ಎದುರು ವಿಲನ್​ ಆಗಿ ಕಾಣಿಸಿಕೊಳ್ಳಲು ಒಪ್ಪಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಒಂದು ವೇಳೆ ಈ ಸುದ್ದಿ ನಿಜವಾದರೆ ಇದೊಂದು ಹೈ-ವೋಲ್ಟೇಜ್​ ಕಾಂಬಿನೇಷನ್​ನ ಸಿನಿಮಾ ಆಗಲಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎನ್​ಟಿಆರ್​ 31’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ: ‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

ಪೋಸ್ಟರ್​ಗಳ ಮೂಲಕ ತಲೆಗೆ ಹುಳ ಬಿಟ್ಟ ಪ್ರಶಾಂತ್​ ನೀಲ್​:

‘ಕೆಜಿಎಫ್​ 2’ ಹಾಗೂ ‘ಸಲಾರ್​’ ಜೊತೆಗೆ ‘ಎನ್​ಟಿಆರ್​31’ ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ, ತಮ್ಮ ಫೇಸ್​ ಬುಕ್​ ಹಾಗೂ ಟ್ವಿಟರ್​ ಖಾತೆಯಲ್ಲಿ ಪ್ರಶಾಂತ್​ ನೀಲ್ ಹಂಚಿಕೊಂಡಿದ್ದಾರೆ. ಮೂರು ಸಿನಿಮಾಗಳ ಪೋಸ್ಟರ್​ಗಳನ್ನು ಒಟ್ಟಿಗೆ ಜೋಡಿಸಿರುವುದರಿಂದ ಸಿನಿಪ್ರಿಯರ ಮನದಲ್ಲಿ ಹೊಸ ಪ್ರಶ್ನೆ ಮೂಡಿದೆ. ‘ಕೆಜಿಎಫ್​ 2’, ‘ಸಲಾರ್​’ ಹಾಗೂ ‘ಎನ್​ಟಿಆರ್​ 31’ ಚಿತ್ರಗಳ ಕಥೆ ಒಂದಕ್ಕೊಂದು ಕನೆಕ್ಟ್​ ಆಗಿದೆ ಎಂದು ಜನರು ಊಹಿಸುತ್ತಿದ್ದಾರೆ. ಅದನ್ನು ಕಮೆಂಟ್​ಗಳ ಮೂಲಕ ತಿಳಿಸಲಾಗುತ್ತಿದೆ. ಆದರೆ ಈ ಕಮೆಂಟ್​ಗಳಿಗೆ ಪ್ರಶಾಂತ್​ ನೀಲ್​ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ. ‘ಸಲಾರ್​’, ‘ಕೆಜಿಎಫ್​ 2’, ‘ಎನ್​ಟಿಆರ್​ 31’ ಮಾತ್ರವಲ್ಲದೇ ‘ಬಘೀರ’ ಚಿತ್ರದ ಕಥೆ ಕೂಡ ಇವುಗಳಿಗೆ ಕನೆಕ್ಟ್​ ಆಗಿರಬಹುದೇ ಎಂದು ಫ್ಯಾನ್ಸ್​ ಪ್ರಶ್ನಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Sun, 22 May 22

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್