Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು

Kamal Haasan | Prashanth Neel: ಈ ಬಗ್ಗೆ ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ.

ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು
ಕಮಲ್​ ಹಾಸನ್​, ಪ್ರಶಾಂತ್​ ನೀಲ್​, ಜ್ಯೂ. ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on:May 22, 2022 | 5:55 PM

ಯಾವಾಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತೋ ಆಗಲೇ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರ ಖ್ಯಾತಿ ಕೂಡ ರಾಷ್ಟ್ರಮಟ್ಟದಲ್ಲಿ ಹೆಚ್ಚಿತು. ಎಲ್ಲ ಸೂಪರ್​ ಸ್ಟಾರ್​ ನಟರು ಕೂಡ ಪ್ರಶಾಂತ್​ ನೀಲ್​ ಜೊತೆ ಕೆಲಸ ಮಾಡಲು ಹಾತೊರೆಯುತ್ತಿದ್ದಾರೆ. ದೊಡ್ಡ ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕೂಡ ಅವರ ಚಿತ್ರಕ್ಕೆ ಬಂಡವಾಳ ಹೂಡಲು ಮುಂದೆ ಬಂದಿವೆ. ಆದರೆ ಈ ಸಂದರ್ಭದಲ್ಲಿ ಪ್ರಶಾಂತ್​ ನೀಲ್​ ಅವರು ಯಾರ ಚಿತ್ರಕ್ಕೆ ಗ್ರೀನ್​ ಸಿಗ್ನಲ್​ ನೀಡ್ತಾರೆ ಅನ್ನೋದು ಮುಖ್ಯ. ಜ್ಯೂ. ಎನ್​ಟಿಆರ್​ ಜೊತೆ ಅವರು ಸಿನಿಮಾ ಮಾಡ್ತಾರೆ ಎನ್ನುವ ಮಾತು ಮೊದಲಿನಿಂದಲೂ ಕೇಳಿಬರುತ್ತಿತ್ತು. ಅದು ನಿಜವಾಗಿದೆ. ಮೇ 20ರಂದು ಜ್ಯೂ. ಎನ್​ಟಿಆರ್​ (Jr NTR) ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್​ ಆಯಿತು. ಈ ಚಿತ್ರದ ಬಗ್ಗೆ ಇನ್ನಷ್ಟು ಅಪ್​ಡೇಟ್​ ಕೇಳಿಬರುತ್ತಿದೆ. ಅಚ್ಚರಿಯ ವಿಷಯ ಏನೆಂದರೆ, ಇದೇ ಸಿನಿಮಾದಲ್ಲಿ ಖ್ಯಾತ ನಟ ಕಮಲ್​ ಹಾಸನ್​ (Kamal Haasan) ಕೂಡ ಅಭಿನಯಿಸಲಿದ್ದಾರೆ ಎಂಬ ಬಗ್ಗೆ ಈಗ ಗಾಸಿಪ್​ ಹರಡಿದೆ. ಈ ವಿಷಯ ಕೇಳಿ ಫ್ಯಾನ್ಸ್​ ಸಖತ್​ ಥ್ರಿಲ್​ ಆಗಿದ್ದಾರೆ.

ಪ್ರಶಾಂತ್​ ನೀಲ್​ ನಿರ್ದೇಶನದ ಸಿನಿಮಾದಲ್ಲಿ ಎಲ್ಲ ಪಾತ್ರಗಳೂ ಸ್ಟ್ರಾಂಗ್​ ಆಗಿರುತ್ತವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅದು ಸಾಬೀತಾಗಿದೆ. ಈಗ ಅವರ ಮುಂಬರುವ ಚಿತ್ರಕ್ಕೆ ಹೀರೋ ಯಾರು ಎಂಬುದನ್ನು ಕೇಳುವಷ್ಟೇ ಕುತೂಹಲದಲ್ಲಿ ವಿಲನ್​ ಯಾರು ಎಂದು ಕೇಳುತ್ತಾರೆ ಅಭಿಮಾನಿಗಳು. ಜ್ಯೂ. ಎನ್​ಟಿಆರ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನ ಸಿನಿಮಾದಲ್ಲಿ ಕಮಲ್​ ಹಾಸನ್​ ವಿಲನ್​ ಪಾತ್ರ ಮಾಡುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಇದನ್ನೂ ಓದಿ: ‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ

ಇದನ್ನೂ ಓದಿ
Image
ಸದ್ದಿಲ್ಲದೆ ಅಮೇಜಾನ್​ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್​ 2’; ಸಿನಿಮಾ ನೋಡೋಕೆ ಹಲವು ಷರತ್ತು
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
Fact Check: ‘ಕೆಜಿಎಫ್​ 3’ ಟ್ರೇಲರ್​ ಬಿಡುಗಡೆ ಆಗಿದ್ಯಾ? ವೈರಲ್ ಆಗಿರುವ ವಿಡಿಯೋದ ಅಸಲಿಯತ್ತು ಇಲ್ಲಿದೆ
Image
‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು

ಈ ಬಗ್ಗೆ ಚಿತ್ರತಂಡದಿಂದ ಯಾರೋ ಪ್ರತಿಕ್ರಿಯೆ ನೀಡಿಲ್ಲ. ಕಮಲ್​ ಹಾಸನ್​, ಜ್ಯೂ. ಎನ್​ಟಿಆರ್​ ಅಥವಾ ಪ್ರಶಾಂತ್​ ನೀಲ್​ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಅನೇಕ ಕಡೆಗಳಲ್ಲಿ ಹೀಗೊಂದು ವರದಿ ಪ್ರಕಟ ಆಗಿದೆ. ಪ್ರಶಾಂತ್​ ನೀಲ್​ ಹೇಳಿರುವ ಕಥೆ ಕೇಳಿ ಕಮಲ್​ ಹಾಸನ್​ ಇಷ್ಟಪಟ್ಟಿದ್ದಾರೆ. ಅವರು ಜ್ಯೂ. ಎನ್​ಟಿಆರ್ ಎದುರು ವಿಲನ್​ ಆಗಿ ಕಾಣಿಸಿಕೊಳ್ಳಲು ಒಪ್ಪಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಒಂದು ವೇಳೆ ಈ ಸುದ್ದಿ ನಿಜವಾದರೆ ಇದೊಂದು ಹೈ-ವೋಲ್ಟೇಜ್​ ಕಾಂಬಿನೇಷನ್​ನ ಸಿನಿಮಾ ಆಗಲಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎನ್​ಟಿಆರ್​ 31’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ: ‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

ಪೋಸ್ಟರ್​ಗಳ ಮೂಲಕ ತಲೆಗೆ ಹುಳ ಬಿಟ್ಟ ಪ್ರಶಾಂತ್​ ನೀಲ್​:

‘ಕೆಜಿಎಫ್​ 2’ ಹಾಗೂ ‘ಸಲಾರ್​’ ಜೊತೆಗೆ ‘ಎನ್​ಟಿಆರ್​31’ ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ, ತಮ್ಮ ಫೇಸ್​ ಬುಕ್​ ಹಾಗೂ ಟ್ವಿಟರ್​ ಖಾತೆಯಲ್ಲಿ ಪ್ರಶಾಂತ್​ ನೀಲ್ ಹಂಚಿಕೊಂಡಿದ್ದಾರೆ. ಮೂರು ಸಿನಿಮಾಗಳ ಪೋಸ್ಟರ್​ಗಳನ್ನು ಒಟ್ಟಿಗೆ ಜೋಡಿಸಿರುವುದರಿಂದ ಸಿನಿಪ್ರಿಯರ ಮನದಲ್ಲಿ ಹೊಸ ಪ್ರಶ್ನೆ ಮೂಡಿದೆ. ‘ಕೆಜಿಎಫ್​ 2’, ‘ಸಲಾರ್​’ ಹಾಗೂ ‘ಎನ್​ಟಿಆರ್​ 31’ ಚಿತ್ರಗಳ ಕಥೆ ಒಂದಕ್ಕೊಂದು ಕನೆಕ್ಟ್​ ಆಗಿದೆ ಎಂದು ಜನರು ಊಹಿಸುತ್ತಿದ್ದಾರೆ. ಅದನ್ನು ಕಮೆಂಟ್​ಗಳ ಮೂಲಕ ತಿಳಿಸಲಾಗುತ್ತಿದೆ. ಆದರೆ ಈ ಕಮೆಂಟ್​ಗಳಿಗೆ ಪ್ರಶಾಂತ್​ ನೀಲ್​ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ. ‘ಸಲಾರ್​’, ‘ಕೆಜಿಎಫ್​ 2’, ‘ಎನ್​ಟಿಆರ್​ 31’ ಮಾತ್ರವಲ್ಲದೇ ‘ಬಘೀರ’ ಚಿತ್ರದ ಕಥೆ ಕೂಡ ಇವುಗಳಿಗೆ ಕನೆಕ್ಟ್​ ಆಗಿರಬಹುದೇ ಎಂದು ಫ್ಯಾನ್ಸ್​ ಪ್ರಶ್ನಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Sun, 22 May 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್