AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಪುಷ್ಪಕ ವಿಮಾನ’ ರೀ-ರಿಲೀಸ್; ಮಾಹಿತಿ ಕೊಟ್ಟ ನಟ ಕಮಲ್ ಹಾಸನ್

ಸಿಂಗೀತಂ ಶ್ರೀನಿವಾಸ ರಾವ್ ಅವರು ‘ಪುಷ್ಪಕ ವಿಮಾನ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 1987ರಲ್ಲಿ. 35 ಲಕ್ಷ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಕೋಟಿಗಟ್ಟಲೆ ಕಮಾಯಿ ಮಾಡಿತ್ತು. ಈಗ ಸಿನಿಮಾ ರೀ-ರಿಲೀಸ್ ಆಗುತ್ತಿದೆ.

 ‘ಪುಷ್ಪಕ ವಿಮಾನ’ ರೀ-ರಿಲೀಸ್; ಮಾಹಿತಿ ಕೊಟ್ಟ ನಟ ಕಮಲ್ ಹಾಸನ್
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on:Sep 17, 2023 | 10:04 AM

Share

ಕಮಲ್ ಹಾಸನ್ (Kamal Haasan) ಅವರು ತಾವು ಎಂಥ ಅದ್ಭುತ ನಟ ಎಂಬುದನ್ನು ಸಾಬೀತು ಮಾಡಿ ತೋರಿಸಿದ್ದಾರೆ. ಅಭಿನಯದ ಮೂಲಕ ತಮ್ಮ ಕೈಚಳಕ ತೋರಿಸಿದ್ದಾರೆ. ‘ಪುಷ್ಪಕ ವಿಮಾನ’ ಮೂಲಕ ಕಮಲ್ ಹಾಸನ್ ಮತ್ತೊಮ್ಮೆ ಇದನ್ನು ಸಾಬೀತು ಮಾಡಿದ್ದರು. ಈ ಮೂಕಿ ಸಿನಿಮಾ ಈಗ ರೀ-ರಿಲೀಸ್ ಆಗುತ್ತಿದೆ. ಈ ಬಗ್ಗೆ ಕಮಲ್ ಹಾಸನ್ ಅವರೇ ಮಾಹಿತಿ ನೀಡಿದ್ದಾರೆ. ಈ ಸಿನಿಮಾನ ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಕಾದು ಕುಳಿತಿದಿದ್ದಾರೆ. ಹೊಸ ತಂತ್ರಜ್ಞಾನದೊಂದಿಗೆ ಸಿನಿಮಾ ಬರಲಿದೆಯೇ ಎನ್ನುವ ಕುತೂಹಲವೂ ಮೂಡಿದೆ.

ಸಿಂಗೀತಂ ಶ್ರೀನಿವಾಸ ರಾವ್ ಅವರು ‘ಪುಷ್ಪಕ ವಿಮಾನ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 1987ರಲ್ಲಿ. 35 ಲಕ್ಷ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣವಾದ ಈ ಸಿನಿಮಾ ಕೋಟಿಗಟ್ಟಲೆ ಕಮಾಯಿ ಮಾಡಿತ್ತು. ಈಗ ಸಿನಿಮಾ ರೀ-ರಿಲೀಸ್ ಆಗುತ್ತಿರುವ ಬಗ್ಗೆ ಕಮಲ್ ಹಾಸನ್ ನಿರ್ಮಾಣ ಸಂಸ್ಥೆ ಕಡೆಯಿಂದ ಮಾಹಿತಿ ಸಿಕ್ಕಿದೆ.

ಕಮಲ್ ಹಾಸನ್ ಅವರು ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್​ನ್ಯಾಷನಲ್’ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ಮೂಲಕ ‘ಪುಷ್ಪಕ ವಿಮಾನ’ ರೀ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಬೇರೆ ಬೇರೆ ಭಾಷೆಯಲ್ಲಿ ಬೇರೆ ಬೇರೆ ಟೈಟಲ್ ನೀಡಲಾಗಿದೆ. ಹಿಂದಿಯಲ್ಲಿ ‘ಪುಷ್ಪಕ್’, ತೆಲುಗಿನಲ್ಲಿ ‘ಪುಷ್ಪಕ ವಿಮಾನಂ’ ಎಂದು ಟೈಟಲ್ ನೀಡಲಾಗಿತ್ತು.

ಇಡೀ ಸಿನಿಮಾದಲ್ಲಿ ಎಲ್ಲಿಯೂ ಸಂಭಾಷಣೆ ಬರುವುದಿಲ್ಲ. ಹೀಗಾಗಿ ಪರಭಾಷೆಯಲ್ಲಿ ಸಿನಿಮಾ ರಿಲೀಸ್ ಮಾಡಲು ಯಾವುದೇ ಡಬ್ಬಿಂಗ್ ಸಮಸ್ಯೆ ಬಂದಿಲ್ಲ. ಇನ್ನು, ಚಿತ್ರದಲ್ಲಿ ಹಾಸ್ಯ ಇದೆ. ಮಾತಿಲ್ಲದೆ ಹಾಸ್ಯವನ್ನು ತೋರಿಸಲಾಗಿದೆ. ಈ ಕಾರಣದಿಂದ ಸಿನಿಮಾ ಅನೇಕರಿಗೆ ಇಷ್ಟವಾಗಿತ್ತು. ಈಗಲೂ ಈ ಚಿತ್ರವನ್ನು ಇಷ್ಪಡುವವರು ಅನೇಕರಿದ್ದಾರೆ. ಈ ಕಾರಣದಿಂದ ‘ಪುಷ್ಪಕ ವಿಮಾನ’ ರೀ-ರಿಲೀಸ್​ಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಇದನ್ನೂ ಓದಿ: 25 ಕೋಟಿ ರೂಪಾಯಿ ಮೋಸ ಹೋದ ಕಮಲ್ ಹಾಸನ್ ಮಾಜಿ ಪಾರ್ಟ್ನರ್ ಗೌತಮಿ

ಕಮಲ್ ಹಾಸನ್ ಜೊತೆ ಸಮೀರ್ ಕಕ್ಕರ್, ಟೀನು ಆನಂದ್, ಕೆಎಸ್ ರಮೇಶ್, ಅಮಲಾ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಶೂಟಿಂಗ್ ಬೆಂಗಳೂರಿನ ಹೈಲ್ಯಾಂಡ್ ಹೋಟೆಲ್​ನಲ್ಲಿ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:44 am, Sun, 17 September 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ