AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

Kamal Haasan | Vikram Movie: ಹಲವು ವಿಚಾರಗಳಲ್ಲಿ ಕನ್ನಡ ಚಿತ್ರರಂಗ ಮಾದರಿ ಆಗಿದೆ. ‘ವಿಕ್ರಾಂತ್​ ರೋಣ’ ರೀತಿಯೇ ‘ವಿಕ್ರಮ್​’ ಸಿನಿಮಾ ತಂಡ ಕೂಡ ಪ್ರಚಾರ ಮಾಡುತ್ತಿದೆ.

Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ
ಕಮಲ್ ಹಾಸನ್, ಕಿಚ್ಚ ಸುದೀಪ್
TV9 Web
| Edited By: |

Updated on:Jun 01, 2022 | 12:35 PM

Share

ಕನ್ನಡ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿವೆ. ಕಿಚ್ಚ ಸುದೀಪ್ ಅವರಂತಹ ಸ್ಟಾರ್​ ಕಲಾವಿದರನ್ನು ಅಕ್ಕ-ಪಕ್ಕದ ರಾಜ್ಯಗಳ ಹೀರೋಗಳು ಕೂಡ ಫಾಲೋ ಮಾಡುತ್ತಿದ್ದಾರೆ. ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದ ಪ್ರಚಾರಕ್ಕೆ ಸುದೀಪ್​ ಅವರು ಹೊಸ ಯೋಜನೆಯೊಂದನ್ನು ರೂಪಿಸಿದ್ದರು. ದುಬೈನ ಬುರ್ಜ್​ ಖಲೀಫಾ ಕಟ್ಟಡದ ಮೇಲೆ ‘ವಿಕ್ರಾಂತ್​ ರೋಣ’ ಚಿತ್ರದ ಟೈಟಲ್​ ಲಾಂಚ್​ ಮಾಡಲಾಗಿತ್ತು. ಈಗ ಕಾಲಿವುಡ್​ ನಟ ಕಮಲ್​ ಹಾಸನ್​ ಕೂಡ ಅದೇ ಟ್ರೆಂಡ್​ ಫಾಲೋ ಮಾಡುತ್ತಿದ್ದಾರೆ. ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ (Vikram Movie) ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ತೊಡಗಿಕೊಂಡಿದೆ. ಜೂನ್ 1ರ ರಾತ್ರಿ 8.10ಕ್ಕೆ ಬುರ್ಜ್​ ಖಲೀಫಾ (Burj Khalifa) ಕಟ್ಟಡದ ಮೇಲೆ ಈ ಸಿನಿಮಾದ ಕೆಲವು ತುಣುಕುಗಳನ್ನು ಬಿತ್ತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದನ್ನು ನೋಡಲು ಕಮಲ್​ ಹಾಸನ್​ ಫ್ಯಾನ್ಸ್​ ಕಾದಿದ್ದಾರೆ. ಪ್ರಚಾರದ ವಿಚಾರದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ ಶೈಲಿಯನ್ನೇ ‘ವಿಕ್ರಮ್​’ ಸಿನಿಮಾ ಕೂಡ ಅನುಸರಿಸುತ್ತಿರುವುದರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

‘ವಿಕ್ರಮ್​’ ಸಿನಿಮಾವನ್ನು ಕಮಲ್​ ಹಾಸನ್​ ಒಡೆತನದ ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಸಂಸ್ಥೆ ನಿರ್ಮಿಸಿದೆ. ಬುರ್ಜ್​ ಖಲೀಫಾ ಕಟ್ಟದ ಮೇಲೆ ಈ ಚಿತ್ರದ ತುಣುಕುಗಳನ್ನು ಬಿತ್ತರಿಸುವ ಕುರಿತ ಮಾಹಿತಿಯನ್ನು ಈ ನಿರ್ಮಾಣ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅದನ್ನು ಕಂಡು ಕಮಲ್​ ಹಾಸನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ. ಜೂನ್​ 3ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ
Image
‘ವೀಲ್‌ಚೇರ್‌ ರೋಮಿಯೋ’ ಚಿತ್ರಕ್ಕೆ ಕಿಚ್ಚನ ಸಾಥ್; ಇಡೀ ತಂಡಕ್ಕೆ ಸಿಕ್ತು ಸುದೀಪ್ ಕಡೆಯಿಂದ ಬೆಸ್ಟ್ ವಿಶ್
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?

ಇತ್ತೀಚೆಗೆ ‘ವಿಕ್ರಮ್​’ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿದ್ದು, 13 ಕಡೆಗಳಲ್ಲಿ ಕತ್ತರಿ ಹಾಕಲಾಗಿದೆ. ಸೆನ್ಸಾರ್​ ಮಂಡಳಿ ಸದಸ್ಯರು ಸೂಚಿಸಿದ ಕಡೆಗಳಲ್ಲಿ ಕತ್ತರಿ ಪ್ರಯೋಗ ಮಾಡಲಾಗಿದೆ. ನಂತರ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಟ್ರೇಲರ್​ನಲ್ಲಿ ಗೊತ್ತಾಗಿರುವಂತೆ ‘ವಿಕ್ರಮ್​’ ಸಿನಿಮಾ ಸಖತ್​ ಮಾಸ್​ ಆಗಿ ಮೂಡಿಬಂದಿದೆ. ಸಿಕ್ಕಾಪಟ್ಟೆ ಸಾಹಸ ದೃಶ್ಯಗಳು ಕೂಡ ಇವೆ. ಸಿನಿಮಾದ ಕೆಲವು ಸಂಭಾಷಣೆಗಳಲ್ಲಿ ಬೈಗುಳಗಳು ಕೂಡ ಇದ್ದವು. ಅತಿಯಾದ ಹಿಂಸೆಯನ್ನು ತೋರಿಸುವ ಸೀನ್​ಗಳು ಸಹ ಚಿತ್ರದಲ್ಲಿವೆ. ಅವುಗಳಿಗೆ ಕತ್ತರಿ ಹಾಕುವಂತೆ ಸೂಚಿಸಲಾಗಿದೆ.

‘ವಿಕ್ರಮ್​’ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದ ಕಾರಣದಿಂದ ‘ವಿಕ್ರಮ್​’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಮಲ್​ ಹಾಸನ್​ ಜೊತೆಗೆ ವಿಜಯ್​ ಸೇತುಪತಿ ಮತ್ತು ಫಹಾದ್​ ಫಾಸಿಲ್​ ನಟಿಸಿದ್ದಾರೆ. ಈ ಮೂವರ ಕಾಂಬಿನೇಷನ್​ ಇರುವ ಕಾರಣದಿಂದ ಈ ಚಿತ್ರಕ್ಕೆ ಮೊದಲ ದಿನ ಭರ್ಜರಿ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಮುಂಗಡ ಟಿಕೆಟ್​ ಬುಕಿಂಗ್​ ಓಪನ್​ ಆಗಿದ್ದು, ಅನೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:35 pm, Wed, 1 June 22

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು