AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ನಾಟಕ ನನಗೆ ಸಾಕಷ್ಟು ಗುರುಗಳನ್ನು ಕೊಟ್ಟಿದೆ’; ‘ವಿಕ್ರಮ್’ ಸಿನಿಮಾ ಪ್ರಚಾರದ ವೇಳೆ ಅಣ್ಣಾವ್ರ ನೆನೆದ ಕಮಲ್ ಹಾಸನ್

ದಕ್ಷಿಣ ಭಾರತದ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್ ಕುಟುಂಬದ ಜತೆ ಒಳ್ಳೆಯ ಒಡನಾಟವಿದೆ. ಇದಕ್ಕೆ ಕಮಲ್​ ಹಾಸನ್ ಕೂಡ ಹೊರತಾಗಿಲ್ಲ. ಈ ಬಗ್ಗೆ ಕಮಲ್​ ಹಾಸನ್ ಮಾತನಾಡಿದ್ದಾರೆ.

‘ಕರ್ನಾಟಕ ನನಗೆ ಸಾಕಷ್ಟು ಗುರುಗಳನ್ನು ಕೊಟ್ಟಿದೆ’; ‘ವಿಕ್ರಮ್’ ಸಿನಿಮಾ ಪ್ರಚಾರದ ವೇಳೆ ಅಣ್ಣಾವ್ರ ನೆನೆದ ಕಮಲ್ ಹಾಸನ್
ರಾಜ್​ಕುಮಾರ್-ಕಮಲ್ ಹಾಸನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 02, 2022 | 8:51 PM

Share

ಕಮಲ್​ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಸಿನಿಮಾ (Vikram Movie) ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹೀಗಾಗಿ ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ಸಿನಿಮಾ ಬಗ್ಗೆ ಹೇಳುವುದರ ಜತೆಗೆ ಅವರು ಇಲ್ಲಿನ ನೆನಪು ಹಾಗೂ ರಾಜ್​ಕುಮಾರ್ ಕುಟುಂಬದ ಬಗ್ಗೆ ಮಾತನಾಡಿದ್ದಾರೆ.

ಸಾವಿರಾರು ಅಭಿಮಾನಿಗಳ ಎದುರು ಮಾತನಾಡಿದ ಕಮಲ್ ಹಾಸನ್, ‘ನನಗೆ ಬೆಂಗಳೂರಿನ ಜತೆ ಒಂದಲ್ಲ ಸಾಕಷ್ಟು ನೆನಪುಗಳು ಇವೆ. ಪುಟ್ಟಣ್ಣ ಕಣಗಾಲ್ ಸಿನಿಮಾ ರಿಲೀಸ್ ಆದರೆ ಫಸ್ಟ್ ಡೇ ಫಸ್ಟ್ ಶೋ ನೋಡೋಕೆ  ಚೆನ್ನೈನಿಂದ ಬೆಂಗಳೂರಿಗೆ ಬಾಲಚಂದರ್​ ಜೊತೆ ಬರುತ್ತಿದೆ. ನಾನು ಗಿರೀಶ್ ಕಾರ್ನಾಡ್ ಅವರ ದೊಡ್ಡ ಫ್ಯಾನ್. ಬಿ.ವಿ .ಕಾರಂತ್ ಅವರನ್ನು ಮಾತನಾಡಿಸಲು ಬರುತ್ತಿದ್ದೆ’ ಎಂದಿದ್ದಾರೆ ಅವರು.

ಕನ್ನಡದ ಕೋಕಿಲ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸಿದ್ದರು. ಈ ಚಿತ್ರ ತೆರೆಗೆ ಬಂದಿದ್ದು 1977ರಲ್ಲಿ. ಬಾಲು ಮಹೇಂದ್ರ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ‘ಕೋಕಿಲ ಚಿತ್ರವನ್ನು ಕನ್ನಡದಲ್ಲೇ ಮಾಡಲಾಗಿತ್ತು. ಶೂಟಿಂಗ್​ಗಾಗಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ನಾನು ಪರಾಗ್ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದೆ’ ಎಂದು ಹಳೆ ನೆನಪು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ
Image
ಪಾರ್ವತಮ್ಮ ಐದನೇ ವರ್ಷದ ಪುಣ್ಯಸ್ಮರಣೆ; ರಾಜ್​ಕುಮಾರ್ ಅಕಾಡೆಮಿ ಸಾಧನೆಯನ್ನು ಅಮ್ಮನಿಗೆ ಅರ್ಪಿಸಿದ ರಾಘಣ್ಣ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
Image
ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

ಇದನ್ನೂ ಓದಿ: 1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್

ರಾಜ್​ ಕುಟುಂಬದ ಜತೆಗಿನ ನೆನಪು ಹಂಚಿಕೊಂಡ ಕಮಲ್

ದಕ್ಷಿಣ ಭಾರತದ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್ ಕುಟುಂಬದ ಜತೆ ಒಳ್ಳೆಯ ಒಡನಾಟವಿದೆ. ಇದಕ್ಕೆ ಕಮಲ್​ ಹಾಸನ್ ಕೂಡ ಹೊರತಾಗಿಲ್ಲ. ಈ ಬಗ್ಗೆ ಕಮಲ್​ ಹಾಸನ್ ಮಾತನಾಡಿದ್ದಾರೆ. ‘ನಾನು 21ನೇ ವಯಸ್ಸಿನಲ್ಲಿ ಇದ್ದಾಗ ರಾಜ್‌ಕುಮಾರ್ ಅವರು ನನ್ನ ನಟನೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು. ‘ಪುಷ್ಪಕ ವಿಮಾನ’ ಸಿನಿಮಾ ಮೊದಲ ದಿನದ ಶೂಟಿಂಗ್​ ವೇಳೆ ಅವರು ಬಂದು ಬೆನ್ನು ತಟ್ಟಿದ್ದರು’ ಎಂದಿದ್ದಾರೆ ಕಮಲ್ ಹಾಸನ್.

‘ನನಗೆ ಕರ್ನಾಟಕ ಸಾಕಷ್ಟು ಗುರುಗಳನ್ನು ಕೊಟ್ಟಿದೆ. ಬೇರೆಯವರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತಿದ್ದು ರಾಜ್​ಕುಮಾರ್ ಅವರಿಂದ. ಅವರು ತಮ್ಮ ಗುಣವನ್ನು ತಮ್ಮ ಮಕ್ಕಳಿಗೂ ನೀಡಿದ್ದಾರೆ. ನಾನು ಪುನೀತ್ ಹಾಗು ಅಣ್ಣಾವ್ರು ಇಬ್ಬರನ್ನೂ ಮಿಸ್ ಮಾಡಿಕೊಳ್ಳುತ್ತೇನೆ. ಅವರ ಮನೆಗೆ ನಾನು ಹೋಗಿದ್ದೆ. ಈಗ ಎನನ್ನೂ ಮಾಡಲು ಆಗುವುದಿಲ್ಲ. ಎಲ್ಲ ವಿಧಿ ಆಟ’ ಎಂದರು ಕಮಲ್ ಹಾಸನ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:30 pm, Thu, 2 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!