‘ಕರ್ನಾಟಕ ನನಗೆ ಸಾಕಷ್ಟು ಗುರುಗಳನ್ನು ಕೊಟ್ಟಿದೆ’; ‘ವಿಕ್ರಮ್’ ಸಿನಿಮಾ ಪ್ರಚಾರದ ವೇಳೆ ಅಣ್ಣಾವ್ರ ನೆನೆದ ಕಮಲ್ ಹಾಸನ್

ದಕ್ಷಿಣ ಭಾರತದ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್ ಕುಟುಂಬದ ಜತೆ ಒಳ್ಳೆಯ ಒಡನಾಟವಿದೆ. ಇದಕ್ಕೆ ಕಮಲ್​ ಹಾಸನ್ ಕೂಡ ಹೊರತಾಗಿಲ್ಲ. ಈ ಬಗ್ಗೆ ಕಮಲ್​ ಹಾಸನ್ ಮಾತನಾಡಿದ್ದಾರೆ.

‘ಕರ್ನಾಟಕ ನನಗೆ ಸಾಕಷ್ಟು ಗುರುಗಳನ್ನು ಕೊಟ್ಟಿದೆ’; ‘ವಿಕ್ರಮ್’ ಸಿನಿಮಾ ಪ್ರಚಾರದ ವೇಳೆ ಅಣ್ಣಾವ್ರ ನೆನೆದ ಕಮಲ್ ಹಾಸನ್
ರಾಜ್​ಕುಮಾರ್-ಕಮಲ್ ಹಾಸನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 02, 2022 | 8:51 PM

ಕಮಲ್​ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಸಿನಿಮಾ (Vikram Movie) ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹೀಗಾಗಿ ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ಸಿನಿಮಾ ಬಗ್ಗೆ ಹೇಳುವುದರ ಜತೆಗೆ ಅವರು ಇಲ್ಲಿನ ನೆನಪು ಹಾಗೂ ರಾಜ್​ಕುಮಾರ್ ಕುಟುಂಬದ ಬಗ್ಗೆ ಮಾತನಾಡಿದ್ದಾರೆ.

ಸಾವಿರಾರು ಅಭಿಮಾನಿಗಳ ಎದುರು ಮಾತನಾಡಿದ ಕಮಲ್ ಹಾಸನ್, ‘ನನಗೆ ಬೆಂಗಳೂರಿನ ಜತೆ ಒಂದಲ್ಲ ಸಾಕಷ್ಟು ನೆನಪುಗಳು ಇವೆ. ಪುಟ್ಟಣ್ಣ ಕಣಗಾಲ್ ಸಿನಿಮಾ ರಿಲೀಸ್ ಆದರೆ ಫಸ್ಟ್ ಡೇ ಫಸ್ಟ್ ಶೋ ನೋಡೋಕೆ  ಚೆನ್ನೈನಿಂದ ಬೆಂಗಳೂರಿಗೆ ಬಾಲಚಂದರ್​ ಜೊತೆ ಬರುತ್ತಿದೆ. ನಾನು ಗಿರೀಶ್ ಕಾರ್ನಾಡ್ ಅವರ ದೊಡ್ಡ ಫ್ಯಾನ್. ಬಿ.ವಿ .ಕಾರಂತ್ ಅವರನ್ನು ಮಾತನಾಡಿಸಲು ಬರುತ್ತಿದ್ದೆ’ ಎಂದಿದ್ದಾರೆ ಅವರು.

ಕನ್ನಡದ ಕೋಕಿಲ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸಿದ್ದರು. ಈ ಚಿತ್ರ ತೆರೆಗೆ ಬಂದಿದ್ದು 1977ರಲ್ಲಿ. ಬಾಲು ಮಹೇಂದ್ರ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ‘ಕೋಕಿಲ ಚಿತ್ರವನ್ನು ಕನ್ನಡದಲ್ಲೇ ಮಾಡಲಾಗಿತ್ತು. ಶೂಟಿಂಗ್​ಗಾಗಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ನಾನು ಪರಾಗ್ ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದೆ’ ಎಂದು ಹಳೆ ನೆನಪು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ
Image
ಪಾರ್ವತಮ್ಮ ಐದನೇ ವರ್ಷದ ಪುಣ್ಯಸ್ಮರಣೆ; ರಾಜ್​ಕುಮಾರ್ ಅಕಾಡೆಮಿ ಸಾಧನೆಯನ್ನು ಅಮ್ಮನಿಗೆ ಅರ್ಪಿಸಿದ ರಾಘಣ್ಣ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
Image
ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಕಮಲ್ ಹಾಸನ್, ಇಳಯರಾಜ​ ಹೇಳಿದ್ದೇನು?

ಇದನ್ನೂ ಓದಿ: 1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್

ರಾಜ್​ ಕುಟುಂಬದ ಜತೆಗಿನ ನೆನಪು ಹಂಚಿಕೊಂಡ ಕಮಲ್

ದಕ್ಷಿಣ ಭಾರತದ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್ ಕುಟುಂಬದ ಜತೆ ಒಳ್ಳೆಯ ಒಡನಾಟವಿದೆ. ಇದಕ್ಕೆ ಕಮಲ್​ ಹಾಸನ್ ಕೂಡ ಹೊರತಾಗಿಲ್ಲ. ಈ ಬಗ್ಗೆ ಕಮಲ್​ ಹಾಸನ್ ಮಾತನಾಡಿದ್ದಾರೆ. ‘ನಾನು 21ನೇ ವಯಸ್ಸಿನಲ್ಲಿ ಇದ್ದಾಗ ರಾಜ್‌ಕುಮಾರ್ ಅವರು ನನ್ನ ನಟನೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು. ‘ಪುಷ್ಪಕ ವಿಮಾನ’ ಸಿನಿಮಾ ಮೊದಲ ದಿನದ ಶೂಟಿಂಗ್​ ವೇಳೆ ಅವರು ಬಂದು ಬೆನ್ನು ತಟ್ಟಿದ್ದರು’ ಎಂದಿದ್ದಾರೆ ಕಮಲ್ ಹಾಸನ್.

‘ನನಗೆ ಕರ್ನಾಟಕ ಸಾಕಷ್ಟು ಗುರುಗಳನ್ನು ಕೊಟ್ಟಿದೆ. ಬೇರೆಯವರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತಿದ್ದು ರಾಜ್​ಕುಮಾರ್ ಅವರಿಂದ. ಅವರು ತಮ್ಮ ಗುಣವನ್ನು ತಮ್ಮ ಮಕ್ಕಳಿಗೂ ನೀಡಿದ್ದಾರೆ. ನಾನು ಪುನೀತ್ ಹಾಗು ಅಣ್ಣಾವ್ರು ಇಬ್ಬರನ್ನೂ ಮಿಸ್ ಮಾಡಿಕೊಳ್ಳುತ್ತೇನೆ. ಅವರ ಮನೆಗೆ ನಾನು ಹೋಗಿದ್ದೆ. ಈಗ ಎನನ್ನೂ ಮಾಡಲು ಆಗುವುದಿಲ್ಲ. ಎಲ್ಲ ವಿಧಿ ಆಟ’ ಎಂದರು ಕಮಲ್ ಹಾಸನ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:30 pm, Thu, 2 June 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ