AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

Rishab Shetty | Kantara Movie: ‘ಕಾಂತಾರ’ ಸಿನಿಮಾ ನೋಡಿರುವ ಕಮಲ್​ ಹಾಸನ್​ ಅವರು ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದಿದ್ದಾರೆ. ದಿಗ್ಗಜ ನಟನಿಂದ ಈ ರೀತಿಯ ಮೆಚ್ಚುಗೆ ಪತ್ರ ಸಿಕ್ಕಿದ್ದಕ್ಕೆ ರಿಷಬ್​ ಖುಷಿ ಆಗಿದ್ದಾರೆ.

Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ
ರಿಷಬ್ ಶೆಟ್ಟಿ, ಕಮಲ್ ಹಾಸನ್ ಬರೆದ ಪತ್ರ, ಕಮಲ್ ಹಾಸನ್
TV9 Web
| Updated By: ಮದನ್​ ಕುಮಾರ್​|

Updated on: Jan 13, 2023 | 8:19 PM

Share

ನಟ ಕಮಲ್​ ಹಾಸನ್​ (Kamal Haasan) ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದೆ. ಚಂದನವನದ ಹಲವು ಸೆಲೆಬ್ರಿಟಿಗಳ ಜೊತೆ ಅವರು ಒಡನಾಟ ಹೊಂದಿದ್ದಾರೆ. ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಇಲ್ಲಿನ ಪ್ರೇಕ್ಷಕರಿಗೆ ಇಷ್ಟವಾಗಿದ್ದಾರೆ. ಈಗ ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಮೆಚ್ಚುಗೆ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಅವರಿಗೆ ಹೆಚ್ಚು ಖುಷಿ ನೀಡಿದೆ. ಬ್ಲಾಕ್​ ಬಸ್ಟರ್​ ಆಗಿರುವ ಈ ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ಅವರು ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದಿದ್ದಾರೆ. ‘ಕಾಂತಾರ’ ಕುರಿತು ತಮಗೆ ಏನೆಲ್ಲ ಅನಿಸಿದೆ ಎಂಬುದನ್ನು ಅವರು ಈ ಪತ್ರದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ರಿಷಬ್​ ಶೆಟ್ಟಿಗೆ (Rishab Shetty) ಒಂದು ಸಲಹೆಯನ್ನೂ ನೀಡಿದ್ದಾರೆ.

ಕಮಲ್​ ಹಾಸನ್​ ಅವರಿಂದ ಈ ರೀತಿಯ ಮೆಚ್ಚುಗೆ ಪತ್ರ ಸಿಕ್ಕಿದ್ದಕ್ಕೆ ರಿಷಬ್​ ಶೆಟ್ಟಿ ತುಂಬ ಸಂತಸಗೊಂಡಿದ್ದಾರೆ. ಆ ಪತ್ರದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತೀಯ ಸಿನಿಮಾ ಲೋಕದ ದಿಗ್ಗಜ ನಟನಿಂದ ಈ ಪತ್ರ ಬಂದಿದೆ. ಕಮಲ್​ ಸರ್​ ನೀಡಿದ ಈ ಅಚ್ಚರಿಯ ಗಿಫ್ಟ್​ ನೋಡಿ ಅಪಾರ ಸಂತಸ ಆಗಿದೆ’ ಎಂದು ರಿಷಬ್​ ಶೆಟ್ಟಿ ಮಾಡಿರುವ ಈ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಈ ಮೊದಲೇ ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ ನೋಡಿದ್ದರು. ಆಗಲೂ ಅವರು ಫೋನ್ ಮೂಲಕ ರಿಷಬ್​ ಶೆಟ್ಟಿಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ‘ಈಗಾಗಲೇ ನಾನು ಫೋನ್​ನಲ್ಲಿ ಹೇಳಿದಂತೆ ಕಾಂತಾರ ಸಿನಿಮಾದ ದಾಖಲೆಯನ್ನು ನಿಮ್ಮ ಮುಂದಿನ ಸಿನಿಮಾದಿಂದ ಮುರಿಯಿರಿ’ ಎಂದು ಸಲಹೆ ನೀಡುವ ಮೂಲಕ ಕಮಲ್​ ಹಾಸನ್​ ಅವರು ಪತ್ರವನ್ನು ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ರಿಷಬ್​ ಶೆಟ್ಟಿ ಅವರ ಮುಂದಿನ ಸಿನಿಮಾ ಯಾವುದು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ‘ಕಾಂತಾರ’ ರಿಲೀಸ್​ ಆಗುವುದಕ್ಕೂ ಮುನ್ನ ಅವರು ಒಂದಷ್ಟು ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಅವುಗಳನ್ನು ಮುಂದುವರಿಸುತ್ತಾರೋ ಅಥವಾ ಬೇರೆ ಪ್ರಾಜೆಕ್ಟ್​ ಕೈಗೆತ್ತಿಕೊಳ್ಳುತ್ತಾರೋ ಎಂಬ ಕೌತುಕ ಅಭಿಮಾನಿಗಳಲ್ಲಿ ಇದೆ. ‘ಕಾಂತಾರ 2’ ಬರಲಿ ಎಂದು ಕೂಡ ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಎಫೆಕ್ಟ್​; ರಿಷಬ್​ ಶೆಟ್ಟಿ ಜತೆ ಸಿನಿಮಾ ಮಾಡುವ ಹಂಬಲ ವ್ಯಕ್ತಪಡಿಸಿದ ಅನಿಲ್​ ಕಪೂರ್​

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿಯ ಸ್ಪರ್ಧೆಯಲ್ಲಿ ಭಾಗವಹಿಸಲು ‘ಕಾಂತಾರ’ ಚಿತ್ರ ಅರ್ಹತೆ ಪಡೆದಿದೆ. ಈ ಸುದ್ದಿಯನ್ನು ಇತ್ತೀಚೆಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಅಂತಿಮ ನಾಮಿನೇಷನ್​ಗೆ ಈ ಸಿನಿಮಾ ಎಂಟ್ರಿ ನೀಡಲಿ ಮತ್ತು ಆಸ್ಕರ್​ ಪ್ರಶಸ್ತಿ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ