AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. 

‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 22, 2023 | 6:19 PM

Share

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸುದೀಪ್ ಬರ್ತ್​​ ಡೇ ಪ್ರಯುಕ್ತ ಸೆಪ್ಟೆಂಬರ್ 2ರಂದು ಈ ಚಿತ್ರದ ಟೈಟಲ್ ಟೀಸರ್ ಅನಾವರಣಗೊಂಡಿದೆ. ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿನಿಮಾ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ವಿಲನ್ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಸುದೀಪ್ ನಟನೆಯ 46ನೇ ಸಿನಿಮಾ. ಈ ಚಿತ್ರದ ಟೈಟಲ್ ಟೀಸರ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರಕ್ಕೆ ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ಎಂ ಕಾಮರಾಜ್ ಅವರು ಸುದೀಪ್ ಎದುರು ಅಬ್ಬರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ‘ಕಬ್ಜ’ ಸಿನಿಮಾದಲ್ಲಿ ಖಲೀದ್ ಹೆಸರಿನ ಗ್ಯಾಂಗ್​ಸ್ಟರ್ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದರು. ಅವರು ಬಾಡಿ ಬಿಲ್ಡರ್ ಕೂಡ ಹೌದು. ತಮಿಳು ಚಿತ್ರರಂಗದ ಮೂಲಕ ಬಣ್ಣದ ಬದುಕನ್ನು ಆರಂಭಿಸಿದರು. ‘ಐ’ ಸಿನಿಮಾದಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದರು.

‘ಕಬ್ಜ’ ಚಿತ್ರದಲ್ಲಿ ಸುದೀಪ್ ಅವರು ನಟಿಸಿದ್ದರು. ಅವರು ಖಲೀದ್ ಪಾತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದ ಸುದೀಪ್ ಅವರೇ ಕಾಮರಾಜ್​ ಅವರ ಹೆಸರನ್ನು ಸೂಚಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Kichcha 46: ‘ಕಿಚ್ಚ 46’ ಚಿತ್ರಕ್ಕೆ ‘ಮ್ಯಾಕ್ಸ್’ ಶೀರ್ಷಿಕೆ; ಮತ್ತೆ ಖಾಕಿ ತೊಟ್ಟ ಸುದೀಪ್?

ಸದ್ಯ ‘ಮ್ಯಾಕ್ಸ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಎಲ್ಲಾ ಭಾಷೆಗಳಿಗೆ ಹೊಂದಾಣಿಕೆ ಆಗುವಂತೆ ಶೀರ್ಷಿಕೆ ಫಿಕ್ಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:36 pm, Wed, 22 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು