AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?

ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. 

‘ಕಬ್ಜ’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದ ಈ ಕಲಾವಿದ ‘ಮ್ಯಾಕ್ಸ್’ ಚಿತ್ರಕ್ಕೆ ವಿಲನ್?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 22, 2023 | 6:19 PM

Share

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸುದೀಪ್ ಬರ್ತ್​​ ಡೇ ಪ್ರಯುಕ್ತ ಸೆಪ್ಟೆಂಬರ್ 2ರಂದು ಈ ಚಿತ್ರದ ಟೈಟಲ್ ಟೀಸರ್ ಅನಾವರಣಗೊಂಡಿದೆ. ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿನಿಮಾ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡುತ್ತಿದೆ. ಈ ಚಿತ್ರದಲ್ಲಿ ವಿಲನ್ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಸುದೀಪ್ ನಟನೆಯ 46ನೇ ಸಿನಿಮಾ. ಈ ಚಿತ್ರದ ಟೈಟಲ್ ಟೀಸರ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರಕ್ಕೆ ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಕಾರ್ತಿಕೇಯ ನಿರ್ದೇಶನ ಈ ಚಿತ್ರಕ್ಕೆ ಇದೆ. ಈ ಚಿತ್ರಕ್ಕೆ ವಿಲನ್ ಯಾರು ಎನ್ನುವ ಪ್ರಶ್ನೆ ಅಭಿಮಾನಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ಎಂ ಕಾಮರಾಜ್ ಅವರು ಸುದೀಪ್ ಎದುರು ಅಬ್ಬರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ‘ಕಬ್ಜ’ ಸಿನಿಮಾದಲ್ಲಿ ಖಲೀದ್ ಹೆಸರಿನ ಗ್ಯಾಂಗ್​ಸ್ಟರ್ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದರು. ಅವರು ಬಾಡಿ ಬಿಲ್ಡರ್ ಕೂಡ ಹೌದು. ತಮಿಳು ಚಿತ್ರರಂಗದ ಮೂಲಕ ಬಣ್ಣದ ಬದುಕನ್ನು ಆರಂಭಿಸಿದರು. ‘ಐ’ ಸಿನಿಮಾದಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದರು.

‘ಕಬ್ಜ’ ಚಿತ್ರದಲ್ಲಿ ಸುದೀಪ್ ಅವರು ನಟಿಸಿದ್ದರು. ಅವರು ಖಲೀದ್ ಪಾತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದ ಸುದೀಪ್ ಅವರೇ ಕಾಮರಾಜ್​ ಅವರ ಹೆಸರನ್ನು ಸೂಚಿಸಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Kichcha 46: ‘ಕಿಚ್ಚ 46’ ಚಿತ್ರಕ್ಕೆ ‘ಮ್ಯಾಕ್ಸ್’ ಶೀರ್ಷಿಕೆ; ಮತ್ತೆ ಖಾಕಿ ತೊಟ್ಟ ಸುದೀಪ್?

ಸದ್ಯ ‘ಮ್ಯಾಕ್ಸ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ‘ಮ್ಯಾಕ್ಸ್’ ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಎಲ್ಲಾ ಭಾಷೆಗಳಿಗೆ ಹೊಂದಾಣಿಕೆ ಆಗುವಂತೆ ಶೀರ್ಷಿಕೆ ಫಿಕ್ಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:36 pm, Wed, 22 November 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?