AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಅವರನ್ನು ಆ್ಯಂಗ್ರಿ ಯಂಗ್ ಮ್ಯಾನ್ ಅಮಿತಾಭ್​ ಬಚ್ಚನ್​ಗೆ ಹೋಲಿಸಿದ ಕಂಗನಾ ರಣಾವತ್

1970-80ರ ಸಂದರ್ಭದಲ್ಲಿ ಅಮಿತಾಭ್ ಬಚ್ಚನ್ ಅವರು ಆ್ಯಂಗ್ರಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ‘ಡಾನ್​’, ‘ದೀವಾರ್’, ‘ಶಕ್ತಿ’, ‘ಅಗ್ನೀಪತ್’ ಸಿನಿಮಾಗಳಲ್ಲಿ ಅಮಿತಾಭ್ ಅವರು ಸಖತ್​ ರಗಡ್ ಆಗಿ ಮಿಂಚಿದ್ದರು.

ಯಶ್ ಅವರನ್ನು ಆ್ಯಂಗ್ರಿ ಯಂಗ್ ಮ್ಯಾನ್ ಅಮಿತಾಭ್​ ಬಚ್ಚನ್​ಗೆ ಹೋಲಿಸಿದ ಕಂಗನಾ ರಣಾವತ್
ಅಮಿತಾಭ್​-ಕಂಗನಾ-ಯಶ್
TV9 Web
| Edited By: |

Updated on: Apr 17, 2022 | 3:30 PM

Share

ಕಂಗನಾ ರಣಾವತ್ (Kangana Ranaut) ಬಾಯಲ್ಲಿ ಮೆಚ್ಚುಗೆ ಪಡೆಯಬೇಕು ಎಂದರೆ ಅದಕ್ಕೆ ಸಣ್ಣಪುಟ್ಟ ಸಾಧನೆ ಮಾಡಿದರೆ ಸಾಲುವುದಿಲ್ಲ. ಸುಖಾಸುಮ್ಮನೆ ಹೊಗಳುವ ಜಾಯಮಾನ ಅವರದ್ದಲ್ಲ. ಸದಾ ವಿವಾದ ಮಾಡಿಕೊಳ್ಳುವ ಅವರು, ಕೆಲವೊಮ್ಮೆ ಒಳ್ಳೆಯ ವಿಚಾರಗಳನ್ನು ಹೊಗಳುತ್ತಾರೆ. ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ‘ಕೆಜಿಎಫ್ ಚಾಪ್ಟರ್​ 2’ ಸಿನಿಮಾವನ್ನು (KGF Chapter 2) ಬಾಯ್ತುಂಬ ಹೊಗಳಿದ್ದಾರೆ ಕಂಗನಾ. ಅಷ್ಟೇ ಅಲ್ಲ ಆ್ಯಂಗ್ರಿ ಯಂಗ್ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ಅಮಿತಾಭ್ ಬಚ್ಚನ್​ಗೆ (Amitabh Bachchan) ಯಶ್ ಅವರನ್ನು ಹೋಲಿಕೆ ಮಾಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡುತ್ತಿದೆ. ಬಾಲಿವುಡ್​ನಲ್ಲಿ ಮೂರೇ ದಿನಕ್ಕೆ ಈ ಸಿನಿಮಾ 143 ಕೋಟಿ ಗಳಿಕೆ ಮಾಡಿದೆ. ಮೂರೇ ದಿನಕ್ಕೆ ಒಂದು ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದು ಬಾಲಿವುಡ್​ ಇತಿಹಾಸದಲ್ಲಿ ಇದೇ ಮೊದಲು. ಈ ಚಿತ್ರದಲ್ಲಿ ಯಶ್ ಆ್ಯಂಗ್ರಿ ಯಂಗ್ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಅನೇಕರಿಗೆ ಇಷ್ಟವಾಗಿದೆ. ರಾಕಿ ನರಾಚಿಯನ್ನು ಆಳುವ ಕಥೆ ಸಿನಿಮಾದಲ್ಲಿದೆ. ಈ ಸಿನಿಮಾ ಕಂಗನಾಗೆ ಇಷ್ಟವಾಗಿದೆ. ಅವರು ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಯಶ್ ಫೋಟೋ ಹಾಕಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಯಶ್ ಅವರು ಆ್ಯಂಗ್ರಿ ಯಂಗ್​ ಮ್ಯಾನ್. ಹಲವು ದಶಕಗಳಿಂದ ಭಾರತ ಇದನ್ನು ಮಿಸ್ ಮಾಡಿಕೊಳ್ಳುತ್ತಿತ್ತು. ಅಮಿತಾಭ್ ಅವರು 70ರ ದಶಕದಲ್ಲಿ ಹೀಗೆಯೇ ಇದ್ದರು. ಆ ಜಾಗವನ್ನು ಯಶ್​ ತುಂಬಿದ್ದಾರೆ’ ಎಂದಿದ್ದಾರೆ ಕಂಗನಾ.

1970-80ರ ಸಂದರ್ಭದಲ್ಲಿ ಅಮಿತಾಭ್ ಬಚ್ಚನ್ ಅವರು ಆ್ಯಂಗ್ರಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ‘ಡಾನ್​’, ‘ದೀವಾರ್’, ‘ಶಕ್ತಿ’, ‘ಅಗ್ನೀಪತ್’ ಸಿನಿಮಾಗಳಲ್ಲಿ ಅಮಿತಾಭ್ ಅವರು ಸಖತ್​ ರಗಡ್ ಆಗಿ ಮಿಂಚಿದ್ದರು. ಈ ಸಿನಿಮಾಗಳೂ ಈಗಲೂ ಎಪಿಕ್​ ಚಿತ್ರಗಳು ಎಂದೇ ಪರಿಗಣಿಸಲ್ಪಟ್ಟಿವೆ.  ಅವರಿಗೆ ‘ಆ್ಯಂಗ್ರಿ ಯಂಗ್ ಮ್ಯಾನ್’ ಎನ್ನುವ ಬಿರುದನ್ನೇ ನೀಡಲಾಗಿತ್ತು.

ಯಶ್, ರಾಮ್​ ಚರಣ್, ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್ ಅವರ ಕೊಲ್ಯಾಜ್ ಫೋಟೋ ಹಂಚಿಕೊಂಡಿರುವ ಕಂಗನಾ, ‘ದಕ್ಷಿಣದ ಸೂಪರ್ ಸ್ಟಾರ್‌ಗಳು ತಮ್ಮ ಸಂಸ್ಕೃತಿಯಲ್ಲಿ ನೆಲೆಗೊಂಡಿದ್ದಾರೆ ಮತ್ತು ಆಳವಾಗಿ ಅದರಲ್ಲೇ ಬೇರೂರಿದ್ದಾರೆ’ ಎಂದಿದ್ದಾರೆ ಕಂಗನಾ.

ಇತ್ತೀಚೆಗೆ ಬಾಲಿವುಡ್ ಹಂಗಾಮಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಯಶ್​ಗೆ ಪ್ರಶ್ನೆ ಒಂದು ಎದುರಾಗಿತ್ತು. ಅಮಿತಾಭ್​ ಬಚ್ಚನ್ ಸಿನಿಮಾಗಳನ್ನು ರಿಮೇಕ್ ಮಾಡುವ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಅವರು, ‘ನನಗೆ ರಿಮೇಕ್​ ಸಿನಿಮಾ ಎಂದರೆ ಇಷ್ಟವಿಲ್ಲ. ಅದರಲ್ಲೂ ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡುವ ವಿಚಾರಕ್ಕೆ ಹೋಗದೆ ಇರುವುದೇ ಉತ್ತಮ. ಅವುಗಳು ಕ್ಲಾಸಿಕ್ ಸಿನಿಮಾಗಳು’ ಎಂದಿದ್ದರು ಯಶ್.

ಇದನ್ನೂ ಓದಿ:  ‘ಆರ್​ಆರ್​ಆರ್’ ಚಿತ್ರವನ್ನೇ ಹಿಂದಿಕ್ಕಿದ ‘ಕೆಜಿಎಫ್​ 2’; ಯಶ್ ಸಿನಿಮಾ ನಡೆದಿದ್ದೇ ಹಾದಿ

‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ