AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಯ ಸಂಭಾವನೆ ಹೆಚ್ಚಿಸಿದ ರಿವಾಲ್ವಾರ್ ರಾಣಿ, ಕಂಗನಾ ನಡೆ ಕಂಡು ಬೆಚ್ಚಿಬಿದ್ದ ಬಾಲಿವುಡ್

ಕಂಗನಾ ರನೌತ್.. ಸದ್ಯ ಬಾಲಿವುಡ್​ನ ಟಾಪ್ ನಟಿ.. ಚಿತ್ರರಂಗಕ್ಕೆ ಎಂಟ್ರಿಕೊಟ್ಟಾಗಿನಿಂದಲೂ ವಿಭಿನ್ನ ಪಾತ್ರಗಳ ಮೂಲವೇ ಗುರುತಿಸಿಕೊಂಡಿರೋ ಕಂಗನಾಗೆ, ಬಿ ಟೌನ್​ನಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪಾದರಸದಂತಾ ಅಭಿನಯವೇ ಕಂಗನಾ ಸ್ಟ್ರೆಂಥ್. ಮೊದ ಮೊದಲು ಸಿಕ್ಕ ಸಿಕ್ಕ ಪಾತ್ರಗಳಲ್ಲಿ ನಟಿಸಿ ಕಂಗನಾ ರನೌತ್ ಸೈ ಎನ್ನಿಸಿಕೊಂಡಿದ್ರು. ಆದ್ರೆ, ಇತ್ತೀಚೆಗಂತೂ ಕಂಗನಾರನ್ನ ಮನಸ್ಸಿನಲ್ಲಿಟ್ಟುಕೊಂಡೇ ನಿರ್ದೇಶಕರು ಪಾತ್ರ ಹೆಣೆಯುತ್ತಿದ್ದಾರೆ. ಹಣ ಎಷ್ಟೇ ಖರ್ಚಾದ್ರೂ ಪರವಾಗಿಲ್ಲ. ಕಂಗನಾರ ಕಾಲ್​ ಶೀಟ್ ಪಡೆದು ಸಿನಿಮಾ ಮಾಡಬೇಕು ಅನ್ನೋ ನಿರ್ಮಾಪಕರಿಗೆ ಈಗ ಕಂಗನಾ ನಡೆಯೇ […]

ಸಿಬ್ಬಂದಿಯ ಸಂಭಾವನೆ ಹೆಚ್ಚಿಸಿದ ರಿವಾಲ್ವಾರ್ ರಾಣಿ, ಕಂಗನಾ ನಡೆ ಕಂಡು ಬೆಚ್ಚಿಬಿದ್ದ ಬಾಲಿವುಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 25, 2019 | 11:24 AM

Share

ಕಂಗನಾ ರನೌತ್.. ಸದ್ಯ ಬಾಲಿವುಡ್​ನ ಟಾಪ್ ನಟಿ.. ಚಿತ್ರರಂಗಕ್ಕೆ ಎಂಟ್ರಿಕೊಟ್ಟಾಗಿನಿಂದಲೂ ವಿಭಿನ್ನ ಪಾತ್ರಗಳ ಮೂಲವೇ ಗುರುತಿಸಿಕೊಂಡಿರೋ ಕಂಗನಾಗೆ, ಬಿ ಟೌನ್​ನಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪಾದರಸದಂತಾ ಅಭಿನಯವೇ ಕಂಗನಾ ಸ್ಟ್ರೆಂಥ್.

ಮೊದ ಮೊದಲು ಸಿಕ್ಕ ಸಿಕ್ಕ ಪಾತ್ರಗಳಲ್ಲಿ ನಟಿಸಿ ಕಂಗನಾ ರನೌತ್ ಸೈ ಎನ್ನಿಸಿಕೊಂಡಿದ್ರು. ಆದ್ರೆ, ಇತ್ತೀಚೆಗಂತೂ ಕಂಗನಾರನ್ನ ಮನಸ್ಸಿನಲ್ಲಿಟ್ಟುಕೊಂಡೇ ನಿರ್ದೇಶಕರು ಪಾತ್ರ ಹೆಣೆಯುತ್ತಿದ್ದಾರೆ. ಹಣ ಎಷ್ಟೇ ಖರ್ಚಾದ್ರೂ ಪರವಾಗಿಲ್ಲ. ಕಂಗನಾರ ಕಾಲ್​ ಶೀಟ್ ಪಡೆದು ಸಿನಿಮಾ ಮಾಡಬೇಕು ಅನ್ನೋ ನಿರ್ಮಾಪಕರಿಗೆ ಈಗ ಕಂಗನಾ ನಡೆಯೇ ತಲೆ ಬಿಸಿ ತಂದಿದೆ.

ಕಂಗನಾ ಸದ್ಯ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವತಾರ ತಾಳೋದಕ್ಕಾಗಿ ಬರೋಬ್ಬರಿ 24 ಕೋಟಿ ಸಂಭಾವನೆ ಪಡೆದಿದ್ದಾರಂತೆ. ಆದ್ರೀಗ ಚರ್ಚೆಗೆ ಕಾರಣವಾಗಿರೋ ವಿಚಾರ ಅಂದ್ರೆ ಕಂಗನಾಗೆ ಸಂಭಾವನೆ ಕೊಡೋದಲ್ಲ. ಬದಲಿಗೆ ಕಂಗನಾ ರನೌತ್ ಸಹೋದ್ಯೋಗಿಗಳಿಗೆ ಸಂಭಾವನೆ ನೀಡೋ ವಿಚಾರ.

ಅಂದ ಹಾಗೆ ಕಂಗಾನಾ ಎಲ್ಲೇ ಹೋದ್ರೂ, ಅವರ ಜೊತೆ 8 ಜನ ಅಸಿಸ್ಟೆಂಟ್​ಗಳಿರ್ತಾರಂತೆ. ಯಾವುದೇ ನಿರ್ಮಾಪಕರನ್ನ ಭೇಟಿ ಮಾಡಿದ್ರೂ, ಸಿನಿಮಾದ ಅಥವಾ ಯಾವುದೇ ಖಾಸಗಿ ಕಾರ್ಯಕ್ರಮಕ್ಕೆ ಹೋದ್ರೂ ಕಂಗನಾ ರನೌತ್ ಜೊತೆ ಖಾಸಗಿ ಬಂದೋಬಸ್ತ್ ಸಿಬ್ಬಂದಿ ಹೊರತುಪಡಿಸಿ 8 ಜನ ಸಹೋದ್ಯೋಗಿಗಳಿಗೂ ಸಂಬಳ ನೋಡೋದು ನಿರ್ಮಾಪಕರಿಗೆ ತಲೆ ಬಿಸಿಯಾಗಿದೆಯಂತೆ.

ಹೀಗಾಗಿ, ಕಂಗಾನಾಗೆ ಸಂಭಾವನೆ ನೀಡೋಕೆ ಒಪ್ಪಿದ್ರೂ ಅವರ ಜೊತೆ ಬರೋರಿಗೆಲ್ಲಾ ಸಂಭಾವನೆ ಕೊಡೋಕೆ ಮಾತ್ರ ನಿರ್ಮಾಪಕರಿಗೆ ಸಿಕ್ಕಾಪಟ್ಟೆ ಹೊರೆಯಾಗ್ತಿದೆಯಂತೆ. ಸದ್ಯ ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇನ್ನು ಸದ್ಯ ಕಂಗನಾ ಅಭಿನಯಿಸಿರೋ ಭಾರತೀಯ ಮಹಿಳಾ ಕಬ್ಬಡ್ಡಿ ಆಟಗಾರ್ತಿಯಾಗಿ ಕಾಣಿಸಿಕೊಂಡಿರೋ ಪಂಗಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಕಮಾಲ್ ಮಾಡ್ತಿದೆ. ಇದೆಲ್ಲದರ ಜೊತೆ ಈ ರೀತಿ ಚರ್ಚೆ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಕಂಗನಾ ಈ ಬೆಳವಣಿಗೆ ಬಗ್ಗೆ ಹೇಗೆ ಪ್ರತಿಕ್ರಿಯಿಸ್ತಾರೋ ನೋಡಬೇಕಿದೆ.

Published On - 8:09 am, Wed, 25 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!